Latest Updates
-
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್! -
ಭಾರತ vs ಅಫ್ಘಾನಿಸ್ತಾನ ಪಂದ್ಯ: ಮ್ಯಾಚ್ ನೋಡುವಾಗ ಮನೆಯಲ್ಲಿ ಶಾಂತಿ ಕಾಪಾಡಲು ಈ ಟಿಪ್ಸ್ ಫಾಲೋ ಮಾಡಿ! -
ನಾಳೆ ನೀಟ್ ಮರುಪರೀಕ್ಷೆ: ಮಳೆಗಾಲದ ನಡುವೆ ಪರೀಕ್ಷೆಗೆ ಸಜ್ಜಾಗುವುದು ಹೇಗೆ? ಇಲ್ಲಿದೆ ಫೈನಲ್ ಚೆಕ್ಲಿಸ್ಟ್ -
ಪಿಎಂ-ಕಿಸಾನ್ ಹಣ ಜಮೆ: ರೈತರೇ, ಈ 2,000 ರೂಪಾಯಿಯಲ್ಲಿ ಆರೋಗ್ಯಕರ ಆಹಾರ ಖರೀದಿಸಿ, ಮಧುಮೇಹ ನಿಯಂತ್ರಿಸಿ! -
ಭಾರಿ ಗಾಳಿ-ಮಳೆಯ ಎಚ್ಚರಿಕೆ: ಜೂನ್ 20ರಂದು ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದಿರಿ! -
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ?
ಜು. 20 ಪ್ರಥಮ ಏಕಾದಶಿ: ಪೂಜಾವಿಧಿ ಹಾಗೂ ಈ ದಿನದ ಮಹತ್ವವೇನು?
ಜುಲೈ 20 ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿ, ಈ ಏಕಾದಶಿಯನ್ನು ದೇವಾಶ್ಯಯನಿ ಏಕಾದಶಿ ಅಥವಾ ಪ್ರಥಮ ಏಕಾದಶಿ ಕರೆಯಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಅದರಂತೆ ಆಷಾಢ ಮಾಸದಲ್ಲಿ ಬರುವ ಏಕಾದಶಿಯಂದು ಕೂಡ ಹಲವಾರು ಆಚರಣೆಗಳಿವೆ. ಈ ದಿನ ಉಪವಾಸವಿದ್ದು ಏಕಾದಶಿಯನ್ನು ಆಚರಿಸಲಾಗುವುದು, ಕೆಲವರು ಹಣ್ಣುಗಳನ್ನು ಸೇವಿಸುತ್ತಾರೆ.

ದೇವಾಶ್ಯಯನಿ ಏಕಾದಶಿಯ ಮಹತ್ವ
ಈ ದಿನ ಯಾರು ಉಪವಾಸವಿದ್ದು ಏಕಾದಶಿ ವ್ರತ ಆಚರಿಸುತ್ತಾರೋ ಅವರ ಪಾಪಗಳನ್ನು ಸುಟ್ಟು ಬಿಡುತ್ತೇನೆ ಹಾಗೂ ಅವರ ಹೃದಯದಲ್ಲಿ ನಾನು ವಾಸಿಸುತ್ತೇನೆ ಎಂದು ಶ್ರೀಕೃಷ್ಣನೇ ಹೇಳಿರುವುದಾಗಿ ಪೌರಾಣಿಕ ಕತೆಯಿದೆ. ಇಂದಿನಿಂದ ಚಾತುರ್ಮಾಸ ಪ್ರಾರಂಭ. ಈ ನಾಲ್ಕು ತಿಂಗಳು ಭಗವಂತ ಯೋಗ ನಿದ್ದೆಯಲ್ಲಿರುತ್ತಾನೆ.

ದೇವಾಶ್ಯಯನಿ ಏಕಾದಶಿ 2021: ತಿಥಿ ಮತ್ತು ಸಮಯ
ದೇವಾಶ್ಯಯನಿ ಏಕಾದಶಿ : ಜುಲೈ 20, ಮಂಗಳವಾರ
ತಿಥಿ ಪ್ರಾರಂಭ: ಸಂಜೆ 04:29, ಜುಲೈ 19, 2021
ಏಕಾದಶಿ ತಿಥಿ ಮುಕ್ತಾಯ: ಮಧ್ಯಾಹ್ನ 01:47, ಜುಲೈ 20, 2021
ಪಾರಣ : ಜುಲೈ 21 ಬೆಳಗ್ಗೆ 05:44ರಿಂದ 08:15ರವರೆಗೆ

ಶಯನಿ ಏಕಾದಶಿ ಬಳಿಕ ನಿದ್ದೆ ಹೋಗುವ ವಿಷ್ಣು
ಆಷಾಢ ಮಾಸದ ಶುಕ್ಲ ಪಕ್ಷದ ಶಯನಿ ಏಕಾದಶಿ ಬಳಿಕ ಚಾತುರ್ಮಾಸ ಪ್ರಾರಂಭ, ಈ ನಾಲ್ಕು ತಿಂಗಳು ವಿಷ್ಣು ನಿದ್ದೆಯಲ್ಲಿರುತ್ತಾನೆ. ಆಗ ಶಿವನು ಈ ಲೋಕವನ್ನು ಕಾಯುತ್ತಾನೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಚಾತುರ್ಮಾಸ ಎಂಬುವುದು ಪವಿತ್ರವಾದ ಮಾಸವಾಗಿದ್ದು ಇಂದಿನಿಂದ ಆರಂಭ.

ಶಯನಿ ಏಕಾದಶಿ ಪೂಜಾ ವಿಧಿ
* ಈ ದಿನ ಉಪವಾಸವಿರಬೇಕು.
* ಕೆಲವರು ಸಾತ್ವಿಕ ಆಹಾರ ಸೇವಿಸುತ್ತಾರೆ, ಆದರೆ ಆ ಆಹಾರದಲ್ಲಿ ಧಾನ್ಯಗಳು, ಕಾಳುಗಳು, ತರಕಾರಿಗಳಾದ ಈರುಳ್ಳಿ ಹಾಗೂ ಇತರ ಮಸಾಲೆ ಪದಾರ್ಥಗಳು ಇರಬಾರದು.
* ವಿಷ್ಣುವಿನ ಪೂರ್ತಿಯನ್ನು ಹಳದಿ ಹೂಗಳಿಂದ ಅಲಂಕರಿಸಬೇಕು. ನಂತರ ತುಳಸಿಯನ್ನು ಅರ್ಪಿಸಬೇಕು.
* ನಂತರ ವಿಷ್ಣು ಸಹಸ್ರನಾಮ ಹೇಳಿ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಬೇಕು.
* ಭಕ್ತರು ಇಡೀ ರಾತ್ರಿ ಎಚ್ಚರವಾಗಿದ್ದು ಈ ವ್ರತ ಮಾಡುತ್ತಾರೆ.



Click it and Unblock the Notifications