Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ಜು. 20 ಪ್ರಥಮ ಏಕಾದಶಿ: ಪೂಜಾವಿಧಿ ಹಾಗೂ ಈ ದಿನದ ಮಹತ್ವವೇನು?
ಜುಲೈ 20 ಆಷಾಢ ಮಾಸದ ಶುಕ್ಲ ಪಕ್ಷದ ಏಕಾದಶಿ, ಈ ಏಕಾದಶಿಯನ್ನು ದೇವಾಶ್ಯಯನಿ ಏಕಾದಶಿ ಅಥವಾ ಪ್ರಥಮ ಏಕಾದಶಿ ಕರೆಯಲಾಗುವುದು. ಪ್ರತಿಯೊಂದು ಏಕಾದಶಿಗೆ ಅದರದ್ದೇ ಆದ ಮಹತ್ವವಿದೆ, ಅದರಂತೆ ಆಷಾಢ ಮಾಸದಲ್ಲಿ ಬರುವ ಏಕಾದಶಿಯಂದು ಕೂಡ ಹಲವಾರು ಆಚರಣೆಗಳಿವೆ. ಈ ದಿನ ಉಪವಾಸವಿದ್ದು ಏಕಾದಶಿಯನ್ನು ಆಚರಿಸಲಾಗುವುದು, ಕೆಲವರು ಹಣ್ಣುಗಳನ್ನು ಸೇವಿಸುತ್ತಾರೆ.

ದೇವಾಶ್ಯಯನಿ ಏಕಾದಶಿಯ ಮಹತ್ವ
ಈ ದಿನ ಯಾರು ಉಪವಾಸವಿದ್ದು ಏಕಾದಶಿ ವ್ರತ ಆಚರಿಸುತ್ತಾರೋ ಅವರ ಪಾಪಗಳನ್ನು ಸುಟ್ಟು ಬಿಡುತ್ತೇನೆ ಹಾಗೂ ಅವರ ಹೃದಯದಲ್ಲಿ ನಾನು ವಾಸಿಸುತ್ತೇನೆ ಎಂದು ಶ್ರೀಕೃಷ್ಣನೇ ಹೇಳಿರುವುದಾಗಿ ಪೌರಾಣಿಕ ಕತೆಯಿದೆ. ಇಂದಿನಿಂದ ಚಾತುರ್ಮಾಸ ಪ್ರಾರಂಭ. ಈ ನಾಲ್ಕು ತಿಂಗಳು ಭಗವಂತ ಯೋಗ ನಿದ್ದೆಯಲ್ಲಿರುತ್ತಾನೆ.

ದೇವಾಶ್ಯಯನಿ ಏಕಾದಶಿ 2021: ತಿಥಿ ಮತ್ತು ಸಮಯ
ದೇವಾಶ್ಯಯನಿ ಏಕಾದಶಿ : ಜುಲೈ 20, ಮಂಗಳವಾರ
ತಿಥಿ ಪ್ರಾರಂಭ: ಸಂಜೆ 04:29, ಜುಲೈ 19, 2021
ಏಕಾದಶಿ ತಿಥಿ ಮುಕ್ತಾಯ: ಮಧ್ಯಾಹ್ನ 01:47, ಜುಲೈ 20, 2021
ಪಾರಣ : ಜುಲೈ 21 ಬೆಳಗ್ಗೆ 05:44ರಿಂದ 08:15ರವರೆಗೆ

ಶಯನಿ ಏಕಾದಶಿ ಬಳಿಕ ನಿದ್ದೆ ಹೋಗುವ ವಿಷ್ಣು
ಆಷಾಢ ಮಾಸದ ಶುಕ್ಲ ಪಕ್ಷದ ಶಯನಿ ಏಕಾದಶಿ ಬಳಿಕ ಚಾತುರ್ಮಾಸ ಪ್ರಾರಂಭ, ಈ ನಾಲ್ಕು ತಿಂಗಳು ವಿಷ್ಣು ನಿದ್ದೆಯಲ್ಲಿರುತ್ತಾನೆ. ಆಗ ಶಿವನು ಈ ಲೋಕವನ್ನು ಕಾಯುತ್ತಾನೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಚಾತುರ್ಮಾಸ ಎಂಬುವುದು ಪವಿತ್ರವಾದ ಮಾಸವಾಗಿದ್ದು ಇಂದಿನಿಂದ ಆರಂಭ.

ಶಯನಿ ಏಕಾದಶಿ ಪೂಜಾ ವಿಧಿ
* ಈ ದಿನ ಉಪವಾಸವಿರಬೇಕು.
* ಕೆಲವರು ಸಾತ್ವಿಕ ಆಹಾರ ಸೇವಿಸುತ್ತಾರೆ, ಆದರೆ ಆ ಆಹಾರದಲ್ಲಿ ಧಾನ್ಯಗಳು, ಕಾಳುಗಳು, ತರಕಾರಿಗಳಾದ ಈರುಳ್ಳಿ ಹಾಗೂ ಇತರ ಮಸಾಲೆ ಪದಾರ್ಥಗಳು ಇರಬಾರದು.
* ವಿಷ್ಣುವಿನ ಪೂರ್ತಿಯನ್ನು ಹಳದಿ ಹೂಗಳಿಂದ ಅಲಂಕರಿಸಬೇಕು. ನಂತರ ತುಳಸಿಯನ್ನು ಅರ್ಪಿಸಬೇಕು.
* ನಂತರ ವಿಷ್ಣು ಸಹಸ್ರನಾಮ ಹೇಳಿ ಪೂಜೆ ಸಲ್ಲಿಸಿ, ನೈವೇದ್ಯ ಅರ್ಪಿಸಬೇಕು.
* ಭಕ್ತರು ಇಡೀ ರಾತ್ರಿ ಎಚ್ಚರವಾಗಿದ್ದು ಈ ವ್ರತ ಮಾಡುತ್ತಾರೆ.



Click it and Unblock the Notifications











