Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:

ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ

ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ

ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.

ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..



Click it and Unblock the Notifications











