Latest Updates
-
ಪ್ರೈಡ್ ಮಂತ್ 2026: ಮನೆಯವರ ಮುಂದೆ ನಿಮ್ಮ ನಿಜವಾದ ವ್ಯಕ್ತಿತ್ವವನ್ನು ಹೇಳಿಕೊಳ್ಳಲು ಹೆದರುತ್ತಿದ್ದೀರಾ? ಈ ಸಲಹೆಗಳು ನಿಮಗಾಗಿ! -
ಮಳೆಗಾಲದ ಮೊದಲ ಮಳೆ ಬಂತು: ನಿಮ್ಮ ಮನೆಯನ್ನು ದುಬಾರಿ ರಿಪೇರಿಯಿಂದ ರಕ್ಷಿಸಲು ಈ ಸಣ್ಣ ಕೆಲಸಗಳನ್ನು ಇಂದೇ ಮಾಡಿ! -
ಮಳೆಗಾಲದಲ್ಲಿ ಪದೇ ಪದೇ ಕಾಯಿಲೆ ಬೀಳ್ತಿದ್ದೀರಾ? ಆರೋಗ್ಯವಾಗಿರಲು ಈ ಆಹಾರ ಪದ್ಧತಿ ಪಾಲಿಸಿ, ವೈರಲ್ ಜ್ವರದಿಂದ ದೂರವಿರಿ! -
ಆರ್ಸಿಬಿ ಗೆಲುವಿನ ಅಬ್ಬರ: ಬೆಂಗಳೂರಿನಲ್ಲಿ ವಿರಾಟ್-ಅನುಷ್ಕಾ ಸಂಭ್ರಮದ ವಿಡಿಯೋ ವೈರಲ್, ನೀವು ನೋಡಲೇಬೇಕಾದ ದೃಶ್ಯಗಳಿವು! -
ಮಳೆಗಾಲದಲ್ಲಿ ವ್ಯಾಯಾಮ ಮಾಡ್ತೀರಾ? ಈ ತಪ್ಪುಗಳನ್ನು ಮಾಡಿದರೆ ನಿಮ್ಮ ಆರೋಗ್ಯಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ! -
ಪ್ರೈಡ್ ಮಂತ್ 2026: ಕ್ವೀರ್ ಜೋಡಿಗಳ ಭವಿಷ್ಯ ಭದ್ರಪಡಿಸಲು ಮತ್ತು ಕುಟುಂಬದ ಮನವೊಲಿಸಲು ಇಲ್ಲಿದೆ ವಿಶೇಷ ಮಾರ್ಗದರ್ಶಿ! -
ಮಳೆಗಾಲ ಶುರುವಾಗುವ ಮುನ್ನವೇ ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ: ದುಬಾರಿ ರಿಪೇರಿ ತಪ್ಪಿಸಲು ಇಲ್ಲಿವೆ ಸರಳ ಟಿಪ್ಸ್! -
ಬಿಸಿಲು-ಮಳೆಯ ಆಟದಲ್ಲಿ ಸುಸ್ತಾಗಿದ್ದೀರಾ? ಆರೋಗ್ಯ ಕಾಪಾಡಿಕೊಳ್ಳಲು ಈ ಸರಳ ಆಹಾರ ಕ್ರಮಗಳನ್ನು ಮಿಸ್ ಮಾಡಬೇಡಿ! -
ದಿಢೀರ್ ಮಳೆಗೆ ರೆಡಿಯಾಗಿದ್ದೀರಾ? ಸ್ಟೈಲಿಶ್ ಆಗಿ ಕಾಣಲು ಮತ್ತು ಮಳೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಹವಾಮಾನ ಬದಲಾಗಿದೆ, ನಿಮ್ಮ ವರ್ಕೌಟ್ ಪ್ಲಾನ್ ಬದಲಾಯಿಸಿದ್ದೀರಾ? ಇಲ್ಲದಿದ್ದರೆ ಈ ಎಚ್ಚರಿಕೆ ನಿಮಗಾಗಿ!
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:

ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ

ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ

ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.

ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..



Click it and Unblock the Notifications