Latest Updates
-
ದೆಹಲಿ ಮೆಟ್ರೋ ಸಂಚಾರ ವ್ಯತ್ಯಯ: ಸಂಗಾತಿಯೊಂದಿಗೆ ಟೆನ್ಷನ್ ಇಲ್ಲದೆ ಪ್ರಯಾಣಿಸುವುದು ಹೇಗೆ? -
ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್: ಭಾರಿ ಮಳೆ ಮತ್ತು ಭೂಕುಸಿತದಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ದೆಹಲಿಯಲ್ಲಿ ಯೆಲ್ಲೋ ಅಲರ್ಟ್: ಮಳೆಗಾಲದಲ್ಲಿ ಕಚೇರಿಗೆ ಹೋಗುವವರು ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ -
ಸ್ಯಾಮ್ಸಂಗ್ ಗ್ಯಾಲಕ್ಸಿ ಅನ್ಪ್ಯಾಕ್ಡ್: ಹೊಸ ಫೋಲ್ಡಬಲ್ ಫೋನ್ಗಳ ಲಾಂಚ್ಗೆ ಕೌಂಟ್ಡೌನ್, ನೀವು ರೆಡಿನಾ? -
ಅಂತರಾಷ್ಟ್ರೀಯ ಚೆಸ್ ದಿನ: ಆಟದ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸರಳ ಟಿಪ್ಸ್! -
ಭಾರಿ ಮಳೆ: ಅಮರನಾಥ-ವೈಷ್ಣೋದೇವಿ ಯಾತ್ರೆ ಸ್ಥಗಿತ; ಯಾತ್ರಿಕರು ಈಗ ಏನು ಮಾಡಬೇಕು? -
ಬಿರುಗಾಳಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿ -
ಆನ್ಲೈನ್ ಫುಡ್ ಆರ್ಡರ್ ಮಾಡ್ತೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು! -
ಲಾರ್ಡ್ಸ್ ಅಂಗಳದಲ್ಲಿ ಹೈ-ವೋಲ್ಟೇಜ್ ಕದನ: ಭಾರತ-ಇಂಗ್ಲೆಂಡ್ ಸರಣಿ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲೋದು ಯಾರು? -
ಮಂಗಳೂರು ಮಳೆ: ಬೈಕ್ ಸವಾರರೇ ಎಚ್ಚರ! ಸ್ನಾಯು ನೋವು ತಡೆಯಲು ಮನೆಯಿಂದ ಹೊರಡುವ ಮುನ್ನ ಈ 6 ನಿಮಿಷದ ವ್ಯಾಯಾಮ ಮಾಡಿ
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:

ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ

ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ

ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.

ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..



Click it and Unblock the Notifications