Latest Updates
-
ಬಿಸಿಗಾಳಿಯ ಎಚ್ಚರಿಕೆ: ಅಡುಗೆ ಮಾಡದೆಯೇ ದೇಹಕ್ಕೆ ತಂಪು ನೀಡುವ ಪ್ರೋಟೀನ್ ಆಹಾರಗಳಿವು! -
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು!
Raksha Bandhan : ರಕ್ಷಾ ಬಂಧನ 2021: ದಿನಾಂಕ, ಪೂಜೆಗೆ ಮುಹೂರ್ತ, ರಾಖಿ ಮಂತ್ರ ಹಾಗೂ ಮಹತ್ವ
ಸಹೋದರ-ಸಹೋಧರಿಯ ಬಂಧವನ್ನು ಸಾರುವ ಆಚರಣೆಯೇ ರಕ್ಷಾ ಬಂಧನ. ನನ್ನನ್ನು ಎಲ್ಲಾ ಸಂದರ್ಭದಲ್ಲೂ ರಕ್ಷಿಸಲು ನನ್ನ ಸಹೋದರ ಇರುತ್ತಾನೆ ಎಂಬ ನಂಬಿಕೆಯಲ್ಲಿ ಸಹೋದರಿ ಅಣ್ಣನಿಗೆ ರಾಖಿ ಕಟ್ಟುತ್ತಾಳೆ. ನಾನು ಇರುವರೆಗೆ ನಿನ್ನ ರಕ್ಷಣೆ ಹೊಣೆ ಎಂಬ ಪ್ರತಿಜ್ಞೆ ತೆಗೆದು ಸಹೋದರ-ಸಹೋದರಿಯ ಕೈಯಿಂದ ರಾಖಿ ಕಟ್ಟಿಸಿಕೊಳ್ಳುತ್ತಾನೆ. ಈ ರಾಖಿ ಹಬ್ಬ ಸಹೋದರ-ಸಹೋದರಿ ಸಂಬಂಧದ ಮೌಲ್ಯವನ್ನು ಎತ್ತಿ ಹಿಡಿಯುತ್ತದೆ ಹಾಗೂ ಸಹೋದರ-ಸಹೋದರಿಯರ ನಡುವಿನ ಪ್ರೀತಿಯನ್ನು ಬಲ ಪಡಿಸುತ್ತದೆ.
2021ರಲ್ಲಿ ರಕ್ಷಾ ಬಂಧನವನ್ನು ಆಗಸ್ಟ್ 22ರಂದು ಆಚರಿಸಲಾಗುವುದು. ಶ್ರಾವಣ ಮಾಸದ ಪೌರ್ಣಿಮೆಯಂದು ರಕ್ಷಾ ಬಂಧನವನ್ನು ಆಚರಿಸಲಾಗುವುದು. ರಕ್ಷಾ ಬಂಧನವನ್ನು ಆ ದಿನ ಪೂರ್ತಿ ಆಚರಿಸಲಾಗುವುದು. ರಕ್ಷಾ ಬಂಧನ ತಿಥಿ ಸಮಯ ಯಾವಾಗ, ಪೂಜೆಗೆ ಶುಭ ಮುಹೂರ್ತ ಎಷ್ಟೊತ್ತಿಗೆ, ಇದರ ಮಹತ್ವವೇನು ಎಂದು ನೋಡೋಣ ಬನ್ನಿ:

ರಕ್ಷಾ ಬಂಧನ ದಿನಾಂಕ ಮತ್ತು ತಿಥಿ
ದಿನಾಂಕ: 22 ಆಗಸ್ಟ್ 2021, ಭಾನುವಾರ
ಪೌರ್ಣಿಮೆ ತಿಥಿ ಪ್ರಾರಂಭ: 21 ಆಗಸ್ಟ್ 2021, ಸಂಜೆ 7 ಗಂಟೆಗೆ
ಪೌರ್ಣಿಮೆ ತಿಥಿ ಮುಕ್ತಾಯ:22 ಆಗಸ್ಟ್ 2021 ಸಂಜೆ 03:30ಕ್ಕೆ

ರಕ್ಷಾ ಬಂಧನದಂದು ಪೂಜೆ ಮಾಡಿ ರಾಖಿ ಕಟ್ಟಲು ಶುಭ ಮುಹೂರ್ತ
ರಕ್ಷಾ ಬಂಧನ ಸಮಯ ಆಗಸ್ಟ್ ಬೆಳಗ್ಗೆ 0:21ರಿಂದ ಪ್ರಾರಂಭವಾಗಿ 05:31ರವರೆಗೆ ಇರುತ್ತದೆ. ಈ ಸಮಯದಲ್ಲಿ ಕಟ್ಟಬಹುದು, ಆದರೆ ತುಂಬಾ
ಶುಭ ಮುಹೂರ್ತ: ಮಧ್ಯಾಹ್ನ 01:57ರಿಂದ 04:29ರವರೆಗೆ
ಒಟ್ಟು ಸಮಯ: 2 ಗಂಟೆ: 32 ನಿಮಿಷ

ರಾಖಿಯ ಮಹತ್ವ
ಉತ್ತರ ಭಾರತದಲ್ಲಿ ಶ್ರಾವಣ ಕೊನೆಯ ದಿನದಂದು ರಕ್ಷಾ ಬಂಧನ ಆಚರಿಸಿದರೆ, ದಕ್ಷಿಣ ಭಾರತದಲ್ಲಿ ಶ್ರಾವಣ ಪೌರ್ಣಿಮೆಯಂದು ಆಚರಿಸಲಾಗುವುದು. ಈ ವರ್ಷ ಆಗಸ್ಟ್ 22ಕ್ಕೆ ಪೌರ್ಣಿಮೆ. ಅಣ್ಣ-ತಂಗಿಯ ಬಂಧವನ್ನು ಸಾರುವ ಈ ಹಬ್ಬವನ್ನು ದೇಶದೆಲ್ಲಡೆ ಸಡಗರ-ಸಂಭ್ರಮದಿಂದ ಆಚರಿಸಲಾಗುವುದು.

ರಾಖಿ ಮಂತ್ರ
'ಯೇನ್ ಬದ್ದೋ ಬಲಿ ರಾಜ, ದಾನ್ವೇಂದ್ರೋ ಮಹಾಬಲ್: ತೇನ್ ತ್ವಾಂ ಪ್ರತಿ ಬಂಧನ್'
ಅರ್ಥ: ನಾನು ನಿನಗೆ ಕಟ್ಟಿರುವ ಈ ರಕ್ಷಾ ಬಲಿ ರಾಜನಿಗೆ ಕಟ್ಟಿದ ರಕ್ಷಾಗೆ ಸಮ, ಓ ರಕ್ಷಾವೇ ಬಲವಾಗಿರು, ಎಂದಿಗೂ ಅಲುಗಾಡಬೇಡ..



Click it and Unblock the Notifications