Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಕಾಳ ಸರ್ಪ ದೋಷ ಪರಿಹಾರಕ್ಕೆ ಮಹಾಶಿವರಾತ್ರಿಯಂದು ಹೀಗೆ ಮಾಡಿ
ಈ ವರ್ಷ ಮಹಾಶಿವರಾತ್ರಿಯನ್ನು ಫೆಬ್ರವರಿ 18, 2023 ರಂದುಆಚರಿಸಲಾಗುವುದು. ಹಾವನ್ನೇ ಹಾರವನ್ನಾಗಿ ಧರಿಸಿರುವವನು ಶಿವ, ಆದ್ದರಿಂದ ಸರ್ಪ ದೋಷವಿದ್ದರೆ ಅದರ ನಿವಾರಣೆಗೆ ಮಹಾಶಿವರಾತ್ರಿ ತುಂಬಾ ಮುಖ್ಯವಾದ ದಿನವಾಗಿದೆ.

ಕೆಲವರಿಗೆ ಸರ್ಪ ದೋಷವಿರುತ್ತದೆ, ಸರ್ಪ ದೋಷವಿದ್ದರೆ ಬದುಕಿನಲ್ಲಿ ಅನೇಕ ಸವಾಲಗಳು ಉಂಟಾಗುವುದು, ಆರೋಗ್ಯ ಸಮಸ್ಯೆ ಉಂಟಾಗುವುದು, ತಮ್ಮ ಕೆಲಸ -ಕಾರ್ಯಗಳಲ್ಲಿ ಯಶಸ್ಸು ಸಿಗುವುದಿಲ್ಲ. ಕೆಲವರಿಗೆ ಮದುವೆ ವಿಳಂಬವಾದರೆ, ಇನ್ನು ಕೆಲವರಿಗೆ ಸಂತಾನಭಾಗ್ಯ ಇರುವುದಿಲ್ಲ. ಶಾಸ್ತ್ರದ ಪ್ರಕಾರ ಕಾಳ ಸರ್ಪ ದೋಷಕ್ಕೆ ಪರಿಹಾರ ಮಾಡಿದರೆ ಎಲ್ಲಾ ಕಷ್ಟಗಳು ದೂರಾಗುವುದು.
ಕಾಳ ಸರ್ಪದೋಷ ಎಂದರೇನು? ಇದರಿಂದಾಗುವ ತೊಂದರೆಗಳೇನು, ಮಹಾಶಿವರಾತ್ರಿಯಂದು ಏನು ಪರಿಹಾರ ಮಾಡಿದರೆ ಸರ್ಪ ದೋಷದಿಂದ ಮುಕ್ತಿ ಪಡೆಯಬಹುದು ನೋಡೋಣ ಬನ್ನಿ:
ಕಾಳ ಸರ್ಪ ದೋಷ ಯಾವಾಗ ಉಂಟಾಗುತ್ತದೆ?
ಜಾತಕದಲ್ಲಿ ರಾಹು ಮತ್ತು ಕೇತುಗಳ ನಡುವೆ ಗ್ರಹ ಬಂದರೆ ಈ ದೋಷವನ್ನು ಕಾಲಸರ್ಪ ದೋಷ ಎನ್ನುತ್ತಾರೆ. ಅನಂತ ಕಾಳಸರ್ಪ ದೋಷ, ಕುಳಿಕ ಕಾಳಸರ್ಪ ದೋಷ, ವಾಸುಕಿ ಕಾಳಸರ್ಪ ದೋಷ, ಶಂಖಪಾಲ ಕಾಳಸರ್ಪ ದೋಷ, ಪದ್ಮ ಕಾಳಸರ್ಪ ದೋಷ, ಮಹಾಪದ್ಮ ಕಾಳಸರ್ಪ ದೋಷ, ಹೀಗೆ ಹಲವು ವಿಧದ ಕಾಳಸರ್ಪ ದೋಷಗಳಿವೆ. ಕುಂಡಲಿ ರಾಹು ಕೇತು ಪ್ರಭಾವವಿದ್ದರೆ ಕಾಳ ಸರ್ಪ ದೋಷ ಉಂಟಾಗುವುದು.
ಕಾಳ ಸರ್ಪ ದೋಷವಿದ್ದಾಗ ನೀಡುವ ಸೂಚನೆಗಳೇನು?
ನಿದ್ದೆಯಲ್ಲಿ ಹಾವುಗಳ ಕನಸು ಬೀಳುವುದು, ಮನೆ ಸಂಪೂರ್ಣ ನೀರಿನಲ್ಲಿ ಮುಳುಗಿದಂತೆ, ಯಾರೋ ತೊಂದರೆ ಕೊಡುತ್ತಿರುವಂತೆ, ಆಪ್ತರ ಸಾವು, ಆಸ್ತಿ ಕಳೆದುಕೊಂಡಂತೆ ಹೀಗೆ ಅಶುಭ ಕನಸುಗಳು ಬೀಳುವುದು, ಈ ರೀತಿಯ ಕನಸುಗಳು ಆಗಾಗ ಬೀಳುತ್ತಿರುತ್ತದೆ. ಆಗ ಕಾಳ ಸರ್ಪದೋಷವಿದೆಯೆಂದು ಹೇಳಬಹುದು.
ಮದುವೆಯ ಮೇಲೆ ಕಾಲ್ ಸರ್ಪ್ ದೋಷದ ಪರಿಣಾಮಗಳು
7 ನೇ ಮನೆಯಲ್ಲಿ ಕೇತು ಮತ್ತು 1 ನೇ ಮನೆಯಲ್ಲಿ ರಾಹುವಿದ್ದರೆ ಸರ್ಪ ದೋಷ ಉಂಟಾಗಿ ಮದುವೆ ವಿಳಮಭವಾಗುವುದು. ಕಾಳ ಸರ್ಪ್ ದೋಷವು ವೈವಾಹಿಕ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಮತ್ತು ವೈವಾಹಿಕ ಜೀವನವನ್ನು ದುರ್ಬಲಗೊಳಿಸುತ್ತದೆ. ಅಲ್ಲದೆ ಅನೇಕ ಆರೋಗ್ಯ ಸಮಸ್ಯೆಗಳನ್ನು ನೀಡುತ್ತದೆ.
ಅನಂತ ಕಾಳ ಸರ್ಪವಿದ್ದರೆ
ಇದು 27 ವರ್ಷಗಳ ಕಾಲ ಬಾಧಿಸುವುದು. ರಾಹು 1ನೇ ಮನೆಯಲ್ಲಿ ಕೇತು 7ನೇ ಮನೆಯಲ್ಲಿದ್ದರೆ ಅನಂಥ ಕಾಳ ಸರ್ಪ ಯೋಗ ಎಂದು ಹೇಳಲಾಗುವುದು. ಈ ಸರ್ಪದೋಷ ಹೊಂದಿದ್ದರೆ ದೀರ್ಘ ಸಮಯ ಕಷ್ಟ, ನಷ್ಟ ಅನುಭವಿಸಬೇಕಾಗುವುದು.
ವಾಸುಕಿ ಕಾಳ ಸರ್ಪ ದೋಷ
ಕುಂಡಲಿಯಲ್ಲಿ 3ನೇ ಮನೆಯಲ್ಲಿ ರಾಹುವಿದ್ದು, 9ನೇ ಮನೆಯಲ್ಲಿ ಕೇತು ಕುಳಿತುಕೊಂಡಿದ್ದರೆ ಆಗ ವಾಸುಕಿ ಸರ್ಪ ದೋಷ ಉಂಟಾಗುವುದು. ಈ ದೋಷವಿದ್ದರೆ ಅಕಾಲಿಕ ಮರಣ ಸಂಭವಿಸಬಹುದು, ಜೀವನದಲ್ಲಿ ತುಂಬಾ ಕಷ್ಟಗಳು ಎದುರಾಗುವುದು.
ಪದ್ಮನಾಭ ಕಾಳ ಸರ್ಪ ದೋಷ
ಈ ದೋಷ 48 ವರ್ಷಗಳವರೆಗೆ ಇರಲಿದೆ. ಜನ್ಮ ಕುಂಡಲಿಯ 5ನೇ ಮನೆಯಲ್ಲಿ ರಾಹು ಮತ್ತು 11ನೇ ಮನೆಯಲ್ಲಿ ಕೇತುವಿದ್ದಾಗ ಈ ದೋಷ ಉಂಟಾಗುವುದು. ಇವರಿಗೆ ಸಂತಾನ ಹೀನತೆ ಉಂಟಾಗುವುದು.
ಶಂಕಪಾಲ ಕಾಳ ಸರ್ಪದೋಷ
ರಾಹು 4ನೇ ಮನೆಯಲ್ಲಿ ಹಾಗೂ ಕೇತು 10ನೇ ಮನೆಯಲ್ಲಿ ಇದ್ದಾಗ ಶಂಕಪಾಲ ಕಾಳ ಸರ್ಪ ದೋಷವು ಉಂಟಾಗುವುದು. ಇದು 42 ವರ್ಷಗಳ ಕಾಲ ಕಾಡುತ್ತದೆ.
ಮಹಾಪದ್ಮ ಕಾಳ ಸರ್ಪ ದೋಷ
ಕುಂಡಲಿಯಲ್ಲಿ 6ನೇ ಮನೆಯಲ್ಲಿ ರಾಹು ಮತ್ತು 12ನೇ ಮನೆಯಲ್ಲಿ ಕೇತುವಿದ್ದಾಗ ಈ ದೋಷವ ಉಂಟಾಗುವುದು. ಇದು ಇದ್ದರೆ 54 ವರ್ಷಗಳ ಕಾಲ ಕಾಡುವುದು. ತುಂಬಾನೇ ಆರೋಗ್ಯ ಸಮಸ್ಯೆ ಉಂಟಾಗುವುದು.
ಮಹಾಶಿವರಾತ್ರಿಗೆ ಕಾಳ ಸರ್ಪ ದೋಷಕ್ಕೆ ಪರಿಹಾರ
* ಮಹಾಶಿವರಾತ್ರಿಯಂದು ಶಿವನಿಗೆ ರುದ್ರಾಭಿಷೇಕ ಮಾಡಿ, ಇದು ಜನ್ಮ ಕುಂಡಲಿಯಲ್ಲಿನ ದೋಷ ನಿವಾರಣೆ ಮಾಡುತ್ತದೆ.
* ಈ ದಿನ ಕಾಳಸರ್ಪ ದೋಷವನ್ನು ತಪ್ಪಿಸಲು, ಮಹಾಶಿವರಾತ್ರಿಯಂದು ಶಿವನಿಗೆ ಒಂದು ಜೋಡಿ ಬೆಳ್ಳಿ ಹಾವುಗಳನ್ನು ಅರ್ಪಿಸಿ.
* ಮಹಾಶಿವರಾತ್ರಿಯ ದಿನದಿಂದ ದಿನಕ್ಕೆ ಎರಡು ಬಾರಿ ಮಹಾ ಮೃತ್ಯುಂಜಯ ಮಂತ್ರವನ್ನು ಜಪಿಸಬೇಕು.
ಮಹಾಶಿವರಾತ್ರಿಯ ದಿನದಂದು "ಓಂ ನಾಗಕುಲಾಯ ವಿದ್ಮಹೇ ವಿಶ್ದಂತಾಯ ಧೀಮಹಿ ತನ್ನೋ ಸರ್ಪ್: ಪ್ರಚೋದಯಾತ್" ಎಂದು ಜಪಿಸಿ.



Click it and Unblock the Notifications

