Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸಾಲಿಗ್ರಾಮ ಮನೆಯಲ್ಲಿ ಪೂಜಿಸುವಾಗ ಈ ತಪ್ಪುಗಳನ್ನು ಮಾಡಲೇಬಾರದು
ಸಾಲಿಗ್ರಾಮವನ್ನು ಬಹಳ ಶಕ್ತಿವಂತ ಕಲ್ಲು ಎಂದು ಹೇಳಲಾಗುವುದು. ಇದು ಶ್ರೀ ವಿಷ್ಣುವಿನ ಸ್ವರೂಪ, ಇದರಲ್ಲಿ ಶ್ರೀ ವಿಷ್ಣು ನೆಲೆಸಿರುತ್ತಾನೆ ಎಂದು ಹೇಳಲಾಗುವುದು. ಕಪ್ಪಾದ, ದುಂಡಗಿನ, ನಯವಾಗಿರುವ ಕಲ್ಲು ಇದಾಗಿದ್ದು ಈ ಕಲ್ಲನ್ನು ಪೂಜಿಸಲಾಗುವುದು. ಈ ಕಲ್ಲನ್ನು ಮನೆಗೆ ತಂದು ಕೆಲವರು ಪೂಜಿಸುತ್ತಾರೆ.

ಸಾಲಿಗ್ರಾಮವನ್ನು ಪೂಜಿಸುವುದರಿಂದ ಶ್ರೀ ವಿಷ್ಣುವಿನ ವಿಶೇಷ ಅನುಗ್ರಹ ಸಿಗುವುದು, ಇಷ್ಟು ಇರುವ ಮನೆಯಲ್ಲಿ ಸಂತಸ, ಸಮೃದ್ದಿ ಇರುತ್ತದೆ. ಆದರೆ ಇದನ್ನು ಮನೆಯಲ್ಲಿಟ್ಟು ಪೂಜಿಸುವುದಾದರೆ ತುಂಬಾನೇ ಎಚ್ಚರಿಕೆವಹಿಸಬೇಕು. ಏಕೆಂದರೆ ಸಾಲಿಗ್ರಾಮ ಪೂಜೆಯಲ್ಲಿ ಚಿಕ್ಕ ದೋಷ ಉಂಟಾದರೂ ದೊಡ್ಡ ತೊಂದರೆಯೇ ಉಂಟಾಗುವುದು.
ಆದ್ದರಿಂದ ಸಾಲಿಗ್ರಾಮ ಪೂಜಿಸುವವರು ಅದರ ಪೂಜಾ ವಿಧಿಗಳ ಬಗ್ಗೆ ತುಂಬಾನೇ ಎಚ್ಚರಿಕೆವಹಿಸಬೇಕು. ಇಲ್ಲದಿದ್ದರೆ ದೋಷ ಉಂಟಾಗಿ ತುಂಬಾನೇ ಕಷ್ಟಪಡಬೇಕಾಗುತ್ತದೆ. ಆದ್ದರಿಂದ ನೀವು ಸಾಲಿಗ್ರಾಮವನ್ನು ಮನೆಯಲ್ಲಿ ತಂದಿಟ್ಟು ಈ ತಪ್ಪುಗಳನ್ನು ಮಾಡದಿರಿ:

ಸಾಲಿಗ್ರಾಮವನ್ನು ನೀವು ದುಡಿದ ಹಣದಿಂದಲೇ ಖರೀದಿಸಬೇಕು
ಸಾಲಿಗ್ರಾಮವನ್ನು ನೀವು ಮನೆಯಲ್ಲಿ ಇಟ್ಟು ಪೂಜಿಸುವುದಾದರೆ ನೀವೇ ದುಡಿದ ಹಣದಿಂದ ಖರೀದಿಸಬೇಕು ಅಥವಾ ಸಂತ, ಸ್ವಾಮೀಜಿ ಕೊಟ್ಟಿರುವುದು ಆಗಿರಬೇಕು. ಇದನ್ನು ವಿವಾಹಿತ ವ್ಯಕ್ತಿ ಕೈಯಿಂದ ಪಡೆಯಬಾರದು ಅಲ್ಲದೆ ವಿವಾಹಿತನಿಗೆ ನೀಡಬಾರದು.

ಸಾಲಿಗ್ರಾಮ ಪವಿತ್ರವಾಗಿಡಬೇಕು
ಮನೆಯಲ್ಲಿ ಸಾಲಿಗ್ರಾಮವಿದ್ದರೆ ಅದನ್ನು ಪೂಜಾಸ್ಥಳದಲ್ಲಿ ಪವಿತ್ರವಾಗಿಡಬೇಕು, ಆ ರೀತಿ ಇಡಲು ಕಷ್ಟವಾದರೆ ಅದನ್ನು ದೇವಾಲಯಕ್ಕೆ ನೀಡಿ, ಇಲ್ಲದಿದ್ದರೆ ಮನೆಯ ನೆಮ್ಮದಿ ಹಾಳಾಗುವುದು. ಆದ್ದರಿಂದ ಸಾಲಿಗ್ರಾಮ ಮನೆಗೆ ತರುವಾಗ ಈ ಬಗ್ಗೆ ಎಚ್ಚರಿಕೆವಹಿಸಿ ನಂತರ ತರುವುದು ಒಳ್ಳೆಯದು.

ಸಾಲಿಗ್ರಾಮ ಮೇಲೆ ಅಕ್ಷತೆ ಹಾಕಬಾರದು
ನಾವು ಪೂಜೆ ಮಾಡಿ ಅಕ್ಷತೆ ಹಾಕುತ್ತೇವೆ ಆದರೆ ಸಾಲಿಗ್ರಾಮದ ಮೇಲೆ ಅಕ್ಷತೆ ಹಾಕಬಾರದು, ಕೆಲವೊಂದು ವಿಶೇಷ ಸಂದರ್ಭದಲ್ಲಿ ಅರಿಶಿಣ ಹಚ್ಚಿ ನಂತರ ಅಕ್ಷತೆ ಹಾಕಲಾಗುವುದು.

ಸಾಲಿಗ್ರಾಮ ಪೂಜೆಯಲ್ಲಿ ತುಳಸಿ ಕಡ್ಡಾಯ
ಸಾಲಿಗ್ರಾಮ ತುಳಸಿಯ ಪ್ರತಿರೂಪ, ಆದ್ದರಿಂದ ದೇವರ ಪೂಜೆಯಲ್ಲಿ ತುಳಸಿಯನ್ನು ಕಡ್ಡಾಯವಾಗಿ ಅರ್ಪಿಸಬೇಕು, ಪೂಜೆಯನ್ನು ಅರ್ಧದಲ್ಲಿ ನಿಲ್ಲಿಸಬಾರದು, ಹೀಗೆ ಮಾಡಿದರೆ ದೋಷ ಉಂಟಾಗುವುದು. ಸಾಲಿಗ್ರಾಮವನ್ನು ದಿನಾ ಪೂಜಿಸಬೇಕು.

ಸಾಲಿಗ್ರಾಮ ಎಲ್ಲಿಂದ ತರಲಾಗುವುದು
ಸಾಲಿಗ್ರಾಮವನ್ನು ನೇಪಾಳದ ಮುಕ್ತಿನಾಥ, ಕಾಳಿ ಗಂಡಕಿ ನದಿಯಿಂದ ಸಂಗ್ರಹಿಸಿ ತರಲಾಗುವುದು. ಈ ಸಾಲಿಗ್ರಾಮ ಶಿವಲಿಂಗದಷ್ಟೇ ಶಕ್ತಿಯುತವಾದದ್ದು, ಇದೀಗ ಅಯೋಧ್ಯೆಗೆ ಎರಡು ಸಾಲಿಗ್ರಾಮ ತರಲಾಗಿದ್ದು ಅದನ್ನು ನೇಪಾಳದಿಂದ ತರಲಾಗಿದೆ.



Click it and Unblock the Notifications