Latest Updates
-
ಮಳೆಗಾಲದಲ್ಲಿ ಅಂತರಾಷ್ಟ್ರೀಯ ಯೋಗ ದಿನ: ಹಿರಿಯರು ಸುರಕ್ಷಿತವಾಗಿ ಯೋಗ ಮಾಡುವುದು ಹೇಗೆ? -
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಸಾಲಿಗ್ರಾಮ ಮನೆಯಲ್ಲಿ ಪೂಜಿಸುವಾಗ ಈ ತಪ್ಪುಗಳನ್ನು ಮಾಡಲೇಬಾರದು
ಸಾಲಿಗ್ರಾಮವನ್ನು ಬಹಳ ಶಕ್ತಿವಂತ ಕಲ್ಲು ಎಂದು ಹೇಳಲಾಗುವುದು. ಇದು ಶ್ರೀ ವಿಷ್ಣುವಿನ ಸ್ವರೂಪ, ಇದರಲ್ಲಿ ಶ್ರೀ ವಿಷ್ಣು ನೆಲೆಸಿರುತ್ತಾನೆ ಎಂದು ಹೇಳಲಾಗುವುದು. ಕಪ್ಪಾದ, ದುಂಡಗಿನ, ನಯವಾಗಿರುವ ಕಲ್ಲು ಇದಾಗಿದ್ದು ಈ ಕಲ್ಲನ್ನು ಪೂಜಿಸಲಾಗುವುದು. ಈ ಕಲ್ಲನ್ನು ಮನೆಗೆ ತಂದು ಕೆಲವರು ಪೂಜಿಸುತ್ತಾರೆ.

ಸಾಲಿಗ್ರಾಮವನ್ನು ಪೂಜಿಸುವುದರಿಂದ ಶ್ರೀ ವಿಷ್ಣುವಿನ ವಿಶೇಷ ಅನುಗ್ರಹ ಸಿಗುವುದು, ಇಷ್ಟು ಇರುವ ಮನೆಯಲ್ಲಿ ಸಂತಸ, ಸಮೃದ್ದಿ ಇರುತ್ತದೆ. ಆದರೆ ಇದನ್ನು ಮನೆಯಲ್ಲಿಟ್ಟು ಪೂಜಿಸುವುದಾದರೆ ತುಂಬಾನೇ ಎಚ್ಚರಿಕೆವಹಿಸಬೇಕು. ಏಕೆಂದರೆ ಸಾಲಿಗ್ರಾಮ ಪೂಜೆಯಲ್ಲಿ ಚಿಕ್ಕ ದೋಷ ಉಂಟಾದರೂ ದೊಡ್ಡ ತೊಂದರೆಯೇ ಉಂಟಾಗುವುದು.
ಆದ್ದರಿಂದ ಸಾಲಿಗ್ರಾಮ ಪೂಜಿಸುವವರು ಅದರ ಪೂಜಾ ವಿಧಿಗಳ ಬಗ್ಗೆ ತುಂಬಾನೇ ಎಚ್ಚರಿಕೆವಹಿಸಬೇಕು. ಇಲ್ಲದಿದ್ದರೆ ದೋಷ ಉಂಟಾಗಿ ತುಂಬಾನೇ ಕಷ್ಟಪಡಬೇಕಾಗುತ್ತದೆ. ಆದ್ದರಿಂದ ನೀವು ಸಾಲಿಗ್ರಾಮವನ್ನು ಮನೆಯಲ್ಲಿ ತಂದಿಟ್ಟು ಈ ತಪ್ಪುಗಳನ್ನು ಮಾಡದಿರಿ:

ಸಾಲಿಗ್ರಾಮವನ್ನು ನೀವು ದುಡಿದ ಹಣದಿಂದಲೇ ಖರೀದಿಸಬೇಕು
ಸಾಲಿಗ್ರಾಮವನ್ನು ನೀವು ಮನೆಯಲ್ಲಿ ಇಟ್ಟು ಪೂಜಿಸುವುದಾದರೆ ನೀವೇ ದುಡಿದ ಹಣದಿಂದ ಖರೀದಿಸಬೇಕು ಅಥವಾ ಸಂತ, ಸ್ವಾಮೀಜಿ ಕೊಟ್ಟಿರುವುದು ಆಗಿರಬೇಕು. ಇದನ್ನು ವಿವಾಹಿತ ವ್ಯಕ್ತಿ ಕೈಯಿಂದ ಪಡೆಯಬಾರದು ಅಲ್ಲದೆ ವಿವಾಹಿತನಿಗೆ ನೀಡಬಾರದು.

ಸಾಲಿಗ್ರಾಮ ಪವಿತ್ರವಾಗಿಡಬೇಕು
ಮನೆಯಲ್ಲಿ ಸಾಲಿಗ್ರಾಮವಿದ್ದರೆ ಅದನ್ನು ಪೂಜಾಸ್ಥಳದಲ್ಲಿ ಪವಿತ್ರವಾಗಿಡಬೇಕು, ಆ ರೀತಿ ಇಡಲು ಕಷ್ಟವಾದರೆ ಅದನ್ನು ದೇವಾಲಯಕ್ಕೆ ನೀಡಿ, ಇಲ್ಲದಿದ್ದರೆ ಮನೆಯ ನೆಮ್ಮದಿ ಹಾಳಾಗುವುದು. ಆದ್ದರಿಂದ ಸಾಲಿಗ್ರಾಮ ಮನೆಗೆ ತರುವಾಗ ಈ ಬಗ್ಗೆ ಎಚ್ಚರಿಕೆವಹಿಸಿ ನಂತರ ತರುವುದು ಒಳ್ಳೆಯದು.

ಸಾಲಿಗ್ರಾಮ ಮೇಲೆ ಅಕ್ಷತೆ ಹಾಕಬಾರದು
ನಾವು ಪೂಜೆ ಮಾಡಿ ಅಕ್ಷತೆ ಹಾಕುತ್ತೇವೆ ಆದರೆ ಸಾಲಿಗ್ರಾಮದ ಮೇಲೆ ಅಕ್ಷತೆ ಹಾಕಬಾರದು, ಕೆಲವೊಂದು ವಿಶೇಷ ಸಂದರ್ಭದಲ್ಲಿ ಅರಿಶಿಣ ಹಚ್ಚಿ ನಂತರ ಅಕ್ಷತೆ ಹಾಕಲಾಗುವುದು.

ಸಾಲಿಗ್ರಾಮ ಪೂಜೆಯಲ್ಲಿ ತುಳಸಿ ಕಡ್ಡಾಯ
ಸಾಲಿಗ್ರಾಮ ತುಳಸಿಯ ಪ್ರತಿರೂಪ, ಆದ್ದರಿಂದ ದೇವರ ಪೂಜೆಯಲ್ಲಿ ತುಳಸಿಯನ್ನು ಕಡ್ಡಾಯವಾಗಿ ಅರ್ಪಿಸಬೇಕು, ಪೂಜೆಯನ್ನು ಅರ್ಧದಲ್ಲಿ ನಿಲ್ಲಿಸಬಾರದು, ಹೀಗೆ ಮಾಡಿದರೆ ದೋಷ ಉಂಟಾಗುವುದು. ಸಾಲಿಗ್ರಾಮವನ್ನು ದಿನಾ ಪೂಜಿಸಬೇಕು.

ಸಾಲಿಗ್ರಾಮ ಎಲ್ಲಿಂದ ತರಲಾಗುವುದು
ಸಾಲಿಗ್ರಾಮವನ್ನು ನೇಪಾಳದ ಮುಕ್ತಿನಾಥ, ಕಾಳಿ ಗಂಡಕಿ ನದಿಯಿಂದ ಸಂಗ್ರಹಿಸಿ ತರಲಾಗುವುದು. ಈ ಸಾಲಿಗ್ರಾಮ ಶಿವಲಿಂಗದಷ್ಟೇ ಶಕ್ತಿಯುತವಾದದ್ದು, ಇದೀಗ ಅಯೋಧ್ಯೆಗೆ ಎರಡು ಸಾಲಿಗ್ರಾಮ ತರಲಾಗಿದ್ದು ಅದನ್ನು ನೇಪಾಳದಿಂದ ತರಲಾಗಿದೆ.



Click it and Unblock the Notifications