Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
ಮಕರದಲ್ಲಿ ಶನಿ ಮಾರ್ಗಿ: ಆರ್ಥಿಕ ಸಂಕಷ್ಟ, ಕಷ್ಟಗಳು ನೀಗಲು ಶನಿಗೆ ಈ ಪರಿಹಾರ ಮಾಡಿ
ಯಾರೇ ಆಗಲಿ ಶನಿದೇವನ ಭಯ ಪಡುತ್ತಾರೆ, ಏಕೆಂದರೆ ಶನಿಯ ಕೋಪಕ್ಕೆ ಗುರಿಯಾದರೆ ತುಂಬಾ ಕಷ್ಟಗಳನ್ನು ಸಹಿಸಬೇಕಾಗುತ್ತದೆ ಎಂದು ಹೇಳಲಾಗುವುದು. ಜ್ಯೋತಿಷ್ಯ ಪ್ರಕಾರ ಶನಿಯು ತುಂಬಾ ಶನಿಯು ರಾಶಿಯಿಂದ ರಾಶಿಗೆ ತುಂಬಾ ನಿಧಾನಗತಿಯಲ್ಲಿ ಸಾಗುವ ಗ್ರಹವಾಗಿದೆ. ಇದು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ಸಮಯ ತೆಗೆದುಕೊಳ್ಳುತ್ತದೆ.

ಈ ವರ್ಷದಲ್ಲಿ ಜೂನ್ 5ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಿದ್ದ ಶನಿ ಜುಲೈ 12, 2022ರಲ್ಲಿ ಮಕರ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಾರಂಭಿಸಿತ್ತು. ಅಕ್ಟೋಬರ್ 23ರಿಂದ ಶನಿಯು ಮಕರ ರಾಶಿಯಲ್ಲಿ ನೇರವಾಗಿ ಚಲಿಸುತ್ತಿದೆ. ಮಕರ ರಾಶಿಯಿಂದ ಕುಂಭ ರಾಶಿಗೆ ಶನಿಯು ಜನವರಿ 17, 2023ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಲಿದೆ.
ಶನಿಯು ಮಕರ ರಾಶಿಯಲ್ಲಿ ನೇರ ಸಂಚಾರದಲ್ಲಿ ಇರುವ ಈ ಸಮಯ ನಿಮ್ಮ ಕಾರ್ಯಗಳಿಗೆ ಯಾವುದೆ ವಿಘ್ನ ಉಂಟಾಗದಿರಲು, ಶನಿಯ ಕೃಪೆಗೆ ಪಾತ್ರರಾಗಿ ಕಷ್ಟವನ್ನು ನೀಗಿಸಲು ಈ ಪರಿಹಾರಗಳನ್ನು ಮಾಡಿ:

ಶನಿ ದೋಷ ನಿವಾರಣೆಗೆ ಪರಿಹಾರಗಳು-
* ಶನಿಯ ಅಶುಭ ಪರಿಣಾಮಗಳನ್ನು ತಪ್ಪಿಸಲು ಹನುಮಂತನನ್ನು ಪೂಜಿಸಬೇಕು. ಹನುಮಂತನನ್ನು ಪೂಜಿಸುವುದರಿಂದ ಶನಿ ದೋಷದಿಂದ ಮುಕ್ತಿ ದೊರೆಯುತ್ತದೆ ಎಂದು ನಂಬಲಾಗಿದೆ. ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ.
ಶನಿದೇವನೂ ಶಿವನ ಆರಾಧನೆಯಿಂದ ಸಂತುಷ್ಟನಾಗುತ್ತಾನೆ. ಇದು ಕಾರ್ತಿಕ ಮಾಸ, ಶಿವನಿಗೆ ಪೂಜೆ ಮಾಡಿ, ಶನಿ ಮಂತ್ರಗಳನ್ನು ಪಠಿಸುವುದು ಪ್ರಯೋಜನಕಾರಿ. ಶನಿವಾರದಂದು ಶನಿ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡುವುದು ಪ್ರಯೋಜನಕಾರಿಯಾಗಿದೆ. ಎಳ್ಳೆಣ್ಣೆ, ಕಪ್ಪು ಕಂಬಳಿ, ಇಂಥ ವಸ್ತುಗಳನ್ನು ದಾನ ಮಾಡಿ.

ಆರ್ಥಿಕ ಸಂಕಷ್ಟ ನಿವಾರಣೆಗೆ
* ತುಂಬಾ ಆರ್ಥಿಕ ತೊಂದರೆ ಅನುಭವಿಸುತ್ತಿದ್ದರೆ ಅದನ್ನು ನೀಗಿಸಲು ಶಕರನಿಗೆ ಹಾಲು ಹಾಗೂ ಕಪ್ಪು ಎಳ್ಳನ್ನು ಅರ್ಪಿಸಿ, ಇದರಿಂದ ಆರ್ಥಿಕ ಸಂಕಟಗಳು ಕಡಿಮೆಯಾಗುವುದು.
* ಮಾತೆ ಕಾಳಿಯನ್ನು ಆರಾಧಿಸಿ.

ಶನಿವಾರ ಹೀಗೆ ಮಾಡಿ
* ಈ ದಿನ ಸಾತ್ವಿಕ ಆಹಾರಗಳನ್ನಷ್ಟೇ ಸೇವಿಸಿ.
* ಈ ದಿನ ಆಲದ ಮರಕ್ಕೆ ಸುತ್ತು ಬಂದು ದೀಪವನ್ನು ಹಚ್ಚಿ.
* ಶನಿವಾರ ಹನುಮಂತನಿಗೆ ಕುಂಕುಮ ಅರ್ಪಿಸಿ.

ಈ ಶನಿ ಮಂತ್ರ ಪ್ರತಿದಿನ ಪಠಿಸಿ
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್



Click it and Unblock the Notifications