Latest Updates
-
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ? -
ಪಾರ್ಕ್ಗಳಲ್ಲಿ ನಗು-ಯೋಗದ ಅಲೆ: ಒತ್ತಡ ಮರೆಸಿ ದಿನವಿಡೀ ಎನರ್ಜಿಟಿಕ್ ಆಗಿರೋದು ಹೇಗೆ? -
ಮದುವೆ ಅಥವಾ ಡೇಟಿಂಗ್ ಪ್ಲಾನ್ ಮಾಡಿದ್ದೀರಾ? ಇಂದಿನ ಹವಾಮಾನದ ಅಬ್ಬರಕ್ಕೆ ನಿಮ್ಮ ತಯಾರಿ ಹೇಗಿರಲಿ? -
ಬಿರುಗಾಳಿ ಮಳೆಗೆ ನಿಮ್ಮ ಬಾಲ್ಕನಿ ಗಾರ್ಡನ್ ನಲುಗುತ್ತಿದೆಯೇ? ಗಿಡಗಳನ್ನು ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ!
ಮಕರದಲ್ಲಿ ಶನಿ ಮಾರ್ಗಿ: ಆರ್ಥಿಕ ಸಂಕಷ್ಟ, ಕಷ್ಟಗಳು ನೀಗಲು ಶನಿಗೆ ಈ ಪರಿಹಾರ ಮಾಡಿ
ಯಾರೇ ಆಗಲಿ ಶನಿದೇವನ ಭಯ ಪಡುತ್ತಾರೆ, ಏಕೆಂದರೆ ಶನಿಯ ಕೋಪಕ್ಕೆ ಗುರಿಯಾದರೆ ತುಂಬಾ ಕಷ್ಟಗಳನ್ನು ಸಹಿಸಬೇಕಾಗುತ್ತದೆ ಎಂದು ಹೇಳಲಾಗುವುದು. ಜ್ಯೋತಿಷ್ಯ ಪ್ರಕಾರ ಶನಿಯು ತುಂಬಾ ಶನಿಯು ರಾಶಿಯಿಂದ ರಾಶಿಗೆ ತುಂಬಾ ನಿಧಾನಗತಿಯಲ್ಲಿ ಸಾಗುವ ಗ್ರಹವಾಗಿದೆ. ಇದು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ಸಮಯ ತೆಗೆದುಕೊಳ್ಳುತ್ತದೆ.

ಈ ವರ್ಷದಲ್ಲಿ ಜೂನ್ 5ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಿದ್ದ ಶನಿ ಜುಲೈ 12, 2022ರಲ್ಲಿ ಮಕರ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಾರಂಭಿಸಿತ್ತು. ಅಕ್ಟೋಬರ್ 23ರಿಂದ ಶನಿಯು ಮಕರ ರಾಶಿಯಲ್ಲಿ ನೇರವಾಗಿ ಚಲಿಸುತ್ತಿದೆ. ಮಕರ ರಾಶಿಯಿಂದ ಕುಂಭ ರಾಶಿಗೆ ಶನಿಯು ಜನವರಿ 17, 2023ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಲಿದೆ.
ಶನಿಯು ಮಕರ ರಾಶಿಯಲ್ಲಿ ನೇರ ಸಂಚಾರದಲ್ಲಿ ಇರುವ ಈ ಸಮಯ ನಿಮ್ಮ ಕಾರ್ಯಗಳಿಗೆ ಯಾವುದೆ ವಿಘ್ನ ಉಂಟಾಗದಿರಲು, ಶನಿಯ ಕೃಪೆಗೆ ಪಾತ್ರರಾಗಿ ಕಷ್ಟವನ್ನು ನೀಗಿಸಲು ಈ ಪರಿಹಾರಗಳನ್ನು ಮಾಡಿ:

ಶನಿ ದೋಷ ನಿವಾರಣೆಗೆ ಪರಿಹಾರಗಳು-
* ಶನಿಯ ಅಶುಭ ಪರಿಣಾಮಗಳನ್ನು ತಪ್ಪಿಸಲು ಹನುಮಂತನನ್ನು ಪೂಜಿಸಬೇಕು. ಹನುಮಂತನನ್ನು ಪೂಜಿಸುವುದರಿಂದ ಶನಿ ದೋಷದಿಂದ ಮುಕ್ತಿ ದೊರೆಯುತ್ತದೆ ಎಂದು ನಂಬಲಾಗಿದೆ. ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ.
ಶನಿದೇವನೂ ಶಿವನ ಆರಾಧನೆಯಿಂದ ಸಂತುಷ್ಟನಾಗುತ್ತಾನೆ. ಇದು ಕಾರ್ತಿಕ ಮಾಸ, ಶಿವನಿಗೆ ಪೂಜೆ ಮಾಡಿ, ಶನಿ ಮಂತ್ರಗಳನ್ನು ಪಠಿಸುವುದು ಪ್ರಯೋಜನಕಾರಿ. ಶನಿವಾರದಂದು ಶನಿ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡುವುದು ಪ್ರಯೋಜನಕಾರಿಯಾಗಿದೆ. ಎಳ್ಳೆಣ್ಣೆ, ಕಪ್ಪು ಕಂಬಳಿ, ಇಂಥ ವಸ್ತುಗಳನ್ನು ದಾನ ಮಾಡಿ.

ಆರ್ಥಿಕ ಸಂಕಷ್ಟ ನಿವಾರಣೆಗೆ
* ತುಂಬಾ ಆರ್ಥಿಕ ತೊಂದರೆ ಅನುಭವಿಸುತ್ತಿದ್ದರೆ ಅದನ್ನು ನೀಗಿಸಲು ಶಕರನಿಗೆ ಹಾಲು ಹಾಗೂ ಕಪ್ಪು ಎಳ್ಳನ್ನು ಅರ್ಪಿಸಿ, ಇದರಿಂದ ಆರ್ಥಿಕ ಸಂಕಟಗಳು ಕಡಿಮೆಯಾಗುವುದು.
* ಮಾತೆ ಕಾಳಿಯನ್ನು ಆರಾಧಿಸಿ.

ಶನಿವಾರ ಹೀಗೆ ಮಾಡಿ
* ಈ ದಿನ ಸಾತ್ವಿಕ ಆಹಾರಗಳನ್ನಷ್ಟೇ ಸೇವಿಸಿ.
* ಈ ದಿನ ಆಲದ ಮರಕ್ಕೆ ಸುತ್ತು ಬಂದು ದೀಪವನ್ನು ಹಚ್ಚಿ.
* ಶನಿವಾರ ಹನುಮಂತನಿಗೆ ಕುಂಕುಮ ಅರ್ಪಿಸಿ.

ಈ ಶನಿ ಮಂತ್ರ ಪ್ರತಿದಿನ ಪಠಿಸಿ
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್



Click it and Unblock the Notifications