Latest Updates
-
ಖೇಲೋ ಇಂಡಿಯಾ ಸಂವಾದ ವೀಕ್ಷಿಸುವಾಗ ಜಡತ್ವ ಬೇಡ: 12 ನಿಮಿಷಗಳ ಈ ಸಿಂಪಲ್ ವರ್ಕೌಟ್ ಟ್ರೈ ಮಾಡಿ! -
ಆಗಸ್ಟ್ 27 ಅಥವಾ 28? ರಾಖಿ ಹಬ್ಬದ ಗೊಂದಲಕ್ಕೆ ಇಲ್ಲಿದೆ ಬೆಸ್ಟ್ ಪ್ಲಾನ್! -
ಗುಡುಗು-ಸಿಡಿಲು ಮಳೆ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು 15 ನಿಮಿಷಗಳ ತುರ್ತು ಕ್ರಮಗಳು -
ರಕ್ಷಾಬಂಧನಕ್ಕೆ ಸಿಹಿ ಖರೀದಿಸ್ತಿದ್ದೀರಾ? ಈ ತಪ್ಪು ಮಾಡಿದ್ರೆ ಆರೋಗ್ಯಕ್ಕೆ ಕುತ್ತು, ನಕಲಿ ಸ್ವೀಟ್ಸ್ ಪತ್ತೆ! -
ರಕ್ಷಾಬಂಧನಕ್ಕೆ ಚಿನ್ನ ಖರೀದಿಸುವ ಮುನ್ನ ಎಚ್ಚರ! ಇಂದಿನ ದರ ಮತ್ತು ಲಾಭದಾಯಕ ಟಿಪ್ಸ್ ಇಲ್ಲಿದೆ -
ರಾಷ್ಟ್ರೀಯ ಕ್ರೀಡಾ ದಿನ: 29 ನಿಮಿಷಗಳ ಸರಳ ವರ್ಕೌಟ್ ಮೂಲಕ ಫಿಟ್ ಆಗಿ! -
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ!
ಮಕರದಲ್ಲಿ ಶನಿ ಮಾರ್ಗಿ: ಆರ್ಥಿಕ ಸಂಕಷ್ಟ, ಕಷ್ಟಗಳು ನೀಗಲು ಶನಿಗೆ ಈ ಪರಿಹಾರ ಮಾಡಿ
ಯಾರೇ ಆಗಲಿ ಶನಿದೇವನ ಭಯ ಪಡುತ್ತಾರೆ, ಏಕೆಂದರೆ ಶನಿಯ ಕೋಪಕ್ಕೆ ಗುರಿಯಾದರೆ ತುಂಬಾ ಕಷ್ಟಗಳನ್ನು ಸಹಿಸಬೇಕಾಗುತ್ತದೆ ಎಂದು ಹೇಳಲಾಗುವುದು. ಜ್ಯೋತಿಷ್ಯ ಪ್ರಕಾರ ಶನಿಯು ತುಂಬಾ ಶನಿಯು ರಾಶಿಯಿಂದ ರಾಶಿಗೆ ತುಂಬಾ ನಿಧಾನಗತಿಯಲ್ಲಿ ಸಾಗುವ ಗ್ರಹವಾಗಿದೆ. ಇದು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಸಂಚರಿಸಲು ಎರಡೂವರೆ ವರ್ಷ ಸಮಯ ತೆಗೆದುಕೊಳ್ಳುತ್ತದೆ.

ಈ ವರ್ಷದಲ್ಲಿ ಜೂನ್ 5ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಿದ್ದ ಶನಿ ಜುಲೈ 12, 2022ರಲ್ಲಿ ಮಕರ ರಾಶಿಯಲ್ಲಿ ವಕ್ರೀಯವಾಗಿ ಚಲಿಸಲಾರಂಭಿಸಿತ್ತು. ಅಕ್ಟೋಬರ್ 23ರಿಂದ ಶನಿಯು ಮಕರ ರಾಶಿಯಲ್ಲಿ ನೇರವಾಗಿ ಚಲಿಸುತ್ತಿದೆ. ಮಕರ ರಾಶಿಯಿಂದ ಕುಂಭ ರಾಶಿಗೆ ಶನಿಯು ಜನವರಿ 17, 2023ಕ್ಕೆ ಕುಂಭ ರಾಶಿಯನ್ನು ಪ್ರವೇಶಿಸಲಿದೆ.
ಶನಿಯು ಮಕರ ರಾಶಿಯಲ್ಲಿ ನೇರ ಸಂಚಾರದಲ್ಲಿ ಇರುವ ಈ ಸಮಯ ನಿಮ್ಮ ಕಾರ್ಯಗಳಿಗೆ ಯಾವುದೆ ವಿಘ್ನ ಉಂಟಾಗದಿರಲು, ಶನಿಯ ಕೃಪೆಗೆ ಪಾತ್ರರಾಗಿ ಕಷ್ಟವನ್ನು ನೀಗಿಸಲು ಈ ಪರಿಹಾರಗಳನ್ನು ಮಾಡಿ:

ಶನಿ ದೋಷ ನಿವಾರಣೆಗೆ ಪರಿಹಾರಗಳು-
* ಶನಿಯ ಅಶುಭ ಪರಿಣಾಮಗಳನ್ನು ತಪ್ಪಿಸಲು ಹನುಮಂತನನ್ನು ಪೂಜಿಸಬೇಕು. ಹನುಮಂತನನ್ನು ಪೂಜಿಸುವುದರಿಂದ ಶನಿ ದೋಷದಿಂದ ಮುಕ್ತಿ ದೊರೆಯುತ್ತದೆ ಎಂದು ನಂಬಲಾಗಿದೆ. ಪ್ರತಿದಿನ ಹನುಮಾನ್ ಚಾಲೀಸ ಪಠಿಸಿ.
ಶನಿದೇವನೂ ಶಿವನ ಆರಾಧನೆಯಿಂದ ಸಂತುಷ್ಟನಾಗುತ್ತಾನೆ. ಇದು ಕಾರ್ತಿಕ ಮಾಸ, ಶಿವನಿಗೆ ಪೂಜೆ ಮಾಡಿ, ಶನಿ ಮಂತ್ರಗಳನ್ನು ಪಠಿಸುವುದು ಪ್ರಯೋಜನಕಾರಿ. ಶನಿವಾರದಂದು ಶನಿ ದೇವರಿಗೆ ಸಂಬಂಧಿಸಿದ ವಸ್ತುಗಳನ್ನು ದಾನ ಮಾಡುವುದು ಪ್ರಯೋಜನಕಾರಿಯಾಗಿದೆ. ಎಳ್ಳೆಣ್ಣೆ, ಕಪ್ಪು ಕಂಬಳಿ, ಇಂಥ ವಸ್ತುಗಳನ್ನು ದಾನ ಮಾಡಿ.

ಆರ್ಥಿಕ ಸಂಕಷ್ಟ ನಿವಾರಣೆಗೆ
* ತುಂಬಾ ಆರ್ಥಿಕ ತೊಂದರೆ ಅನುಭವಿಸುತ್ತಿದ್ದರೆ ಅದನ್ನು ನೀಗಿಸಲು ಶಕರನಿಗೆ ಹಾಲು ಹಾಗೂ ಕಪ್ಪು ಎಳ್ಳನ್ನು ಅರ್ಪಿಸಿ, ಇದರಿಂದ ಆರ್ಥಿಕ ಸಂಕಟಗಳು ಕಡಿಮೆಯಾಗುವುದು.
* ಮಾತೆ ಕಾಳಿಯನ್ನು ಆರಾಧಿಸಿ.

ಶನಿವಾರ ಹೀಗೆ ಮಾಡಿ
* ಈ ದಿನ ಸಾತ್ವಿಕ ಆಹಾರಗಳನ್ನಷ್ಟೇ ಸೇವಿಸಿ.
* ಈ ದಿನ ಆಲದ ಮರಕ್ಕೆ ಸುತ್ತು ಬಂದು ದೀಪವನ್ನು ಹಚ್ಚಿ.
* ಶನಿವಾರ ಹನುಮಂತನಿಗೆ ಕುಂಕುಮ ಅರ್ಪಿಸಿ.

ಈ ಶನಿ ಮಂತ್ರ ಪ್ರತಿದಿನ ಪಠಿಸಿ
ಶನಿ ಗಾಯತ್ರಿ ಮಂತ್ರ
ಓಂ ಶನೈಶ್ಚರಾಯ ವಿದ್ಮಯೇ
ಸೂರ್ಯಪುತ್ರಾಯ ದಹಿಮಹಿ
ತನ್ನೊ ಮಂಡಾ ಪ್ರಚೋದಾಯತ್



Click it and Unblock the Notifications