Latest Updates
-
ವಿಶ್ವ ಸಂಗೀತ ದಿನ: ಸಂಗಾತಿಯೊಂದಿಗೆ ಮರೆಯಲಾಗದ ಕ್ಷಣ ಕಳೆಯಲು ಇಲ್ಲಿದೆ ಸಿಂಪಲ್ ಪ್ಲಾನ್! -
ಮುಂಬೈನಲ್ಲಿ ತೀವ್ರ ನೀರಿನ ಅಭಾವ: ಬಿಎಂಸಿ ಕಠಿಣ ನಿಯಮಗಳ ನಡುವೆ ನೀರು ಉಳಿಸಲು ಈ ಟಿಪ್ಸ್ ಪಾಲಿಸಿ -
ಮಳೆಗಾಲದಲ್ಲಿ ಸಿಕಲ್ ಸೆಲ್ ಸಮಸ್ಯೆ: ಆರೋಗ್ಯ ಕಾಪಾಡಲು ಈ ಆಹಾರ ಕ್ರಮ ಪಾಲಿಸಿ, ನೋವು ದೂರವಿಡಿ! -
ಟೆಲಿಗ್ರಾಂ ಬ್ಯಾನ್: ಜೂನ್ 22ರವರೆಗೆ ಈ ಆಪ್ಗಳನ್ನು ಬಳಸಿ, ಇಲ್ಲದಿದ್ದರೆ ತೊಂದರೆ ಕಟ್ಟಿಟ್ಟ ಬುತ್ತಿ! -
ಮಳೆಗಾಲದಲ್ಲಿ 'ರನ್ ಫಾರ್ ಯೋಗ': ಜಾರುವ ರಸ್ತೆಯಲ್ಲಿ ಸುರಕ್ಷಿತವಾಗಿ ಓಡಲು ಈ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ: ಅಪ್ಪನ ಜೊತೆಗಿನ ಮೌನ ಮುರಿಯಲು ಮತ್ತು ಸಂಬಂಧ ಗಟ್ಟಿಗೊಳಿಸಲು ಇಲ್ಲಿದೆ ಸರಳ ಟಿಪ್ಸ್ -
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications