Latest Updates
-
ದೇಸಿ ಮಸಾಲೆಯ ಘಮ, ಮಣ್ಣಿನ ಮಡಕೆಯ ರುಚಿ! ಮನೆಯಲ್ಲೇ ಮಾಡಿ ಛತ್ತೀಸ್ಗಢ ಸ್ಪೆಷಲ್ ಚಿಕನ್ ಕರಿ.. ಈಸಿ ರೆಸಿಪಿ ಇಲ್ಲಿದೆ -
ಮಾತಿನ ಹೋಳಿ.. ಮನದ ಸಂಭ್ರಮ.. ಇದು ಬಣ್ಣಗಳ ಕೇಳಿ! ರೊಮ್ಯಾಂಟಿಕ್ ಶುಭಾಶಯಗಳು ಇಲ್ಲಿವೆ -
ಚಂದ್ರಗ್ರಹಣದ ದಿನ.. ಪ್ರೇಮ ಜೀವನದಲ್ಲಿ ಸಂಕಷ್ಟ! ಪ್ರಣಯ ಸಂಬಂಧಗಳಲ್ಲಿ ಎಚ್ಚರ -
March 03 Horoscope: ವರ್ಷದ ಮೊದಲ ಚಂದ್ರಗ್ರಹಣ.. ಅಪಘಾತ ಸಂಭವಿಸುವ ಸಾಧ್ಯತೆ! ಖರ್ಚುಗಳು ಹೆಚ್ಚಾಗಲಿವೆ -
ಬೆಳಗ್ಗೆ ಮಾಡಿದ ರೊಟ್ಟಿ ಸಂಜೆಯಾದರೂ ಫ್ರೆಶ್ & ಸಾಫ್ಟ್ ಆಗಿರುತ್ತೆ! ಅಮ್ಮನ ಸೂಪರ್ ಕಿಚನ್ ಟಿಪ್ಸ್ ಇಲ್ಲಿದೆ -
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ? ಯಾರಿಗೆ ಸಂಕಷ್ಟ? ನಿಮ್ಮ ರಾಶಿ ಫಲ ಇಲ್ಲಿದೆ -
ಉಳಿದ ಅನ್ನದಿಂದ ಮಾಡಿ ಗರಿಗರಿಯಾದ ಕುರ್ಕುರೆ! ಹೊರಗಿನ ಸ್ನ್ಯಾಕ್ಗೂ ಮೀರಿದ ರುಚಿ.. ಮಾಡೋದು ಹೇಗೆ? -
30 ವರ್ಷ ದಾಟಿದ್ರಾ? ಈ 5 ಅಭ್ಯಾಸಗಳನ್ನು ತಕ್ಷಣ ಬದಲಿಸಿ.. ಜೀವನಪೂರ್ತಿ ಫಿಟ್ ಆಗಿರಿ! -
Happy Holi 2026: ನಿಮ್ಮ ಪ್ರೀತಿಪಾತ್ರರಿಗೆ ಕಳಿಸಿ ಈ ಸ್ಪೆಷಲ್ ಶುಭಾಶಯಗಳು! ಸ್ನೇಹ, ಪ್ರೀತಿ, ಸಂತೋಷ ತುಂಬಿದ ಮೆಸೇಜ್ ಇಲ್ಲಿವೆ -
ಹಸಿ ಬಟಾಣಿ ಬಳಸಿ ಖಸ್ತ ಪೂರಿ ಹೀಗೆ ಮಾಡಿ.. ಪ್ರತಿ ಪುರಿಯೂ ಹೂವಿನಂತೆ ಉಬ್ಬಿ ಬರುತ್ತೆ! ಸೂಪರ್ ರುಚಿ, 15 ನಿಮಿಷಗಳಲ್ಲಿ ರೆಡಿ!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications











