Just In
- 2 hrs ago ಗುರು ಸಂಚಾರ 2024: ಕನ್ಯಾ ರಾಶಿಯಲ್ಲಿ 12 ತಿಂಗಳು ಗುರುವಿನ ಪ್ರಭಾವ ಹೇಗಿರಲಿದೆ?
- 11 hrs ago ವಾರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಈ 7 ದಿನಗಳು ನಿಮಗೆ ಹೇಗಿರಲಿದೆ?
- 12 hrs ago ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- 13 hrs ago ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
Don't Miss
- Automobiles ಮಹೀಂದ್ರಾ ಪ್ರೀಯರಿಗೆ ಭಾರೀ ಸಿಹಿಸುದ್ದಿ: ಗಲ್ಲಿಗಲ್ಲಿಯಲ್ಲಿ ಶುರುವಾಗುತ್ತಾ ಸ್ಕಾರ್ಪಿಯೋ ಹವಾ!
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Movies ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
- News Kolar Lok Sabha elections: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ 'ಸ್ಥಳೀಯ' V/s 'ಹೊರಗಿನವ' ಫೈಟ್!
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:
ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.
ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.
ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.
ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.