Latest Updates
-
ಸಣ್ಣ ಫ್ಲ್ಯಾಟ್ನಲ್ಲಿ ಗಣೇಶೋತ್ಸವ: ಅತಿಥಿಗಳಿಗಾಗಿ ಜಾಗ ಮತ್ತು ಸುರಕ್ಷತೆಗಾಗಿ ಈ 5 ಟಿಪ್ಸ್ ಫಾಲೋ ಮಾಡಿ -
ಗಣೇಶೋತ್ಸವದ ಪ್ರಸಾದ ಬೇಗ ಹಾಳಾಗುತ್ತಿದೆಯೇ? ಮೋದಕ ಮತ್ತು ಸಿಹಿ ತಿಂಡಿಗಳನ್ನು ತಾಜಾವಾಗಿಡಲು ಈ ಟಿಪ್ಸ್ ಪಾಲಿಸಿ! -
ಗಣೇಶೋತ್ಸವ 2026: ಲಾಲ್ಬಾಗ್ಚಾ ರಾಜನ ದರ್ಶನಕ್ಕೆ ಬೆಸ್ಟ್ ಟೈಮ್ ಯಾವುದು? ಮೆಟ್ರೋ ಮತ್ತು ಲೈವ್ ಅಪ್ಡೇಟ್ಸ್ ಇಲ್ಲಿದೆ! -
ಹಬ್ಬದ ಪೂಜೆಯ ವೇಳೆ ಮೊಣಕಾಲು ಮತ್ತು ಬೆನ್ನು ನೋವು ಕಾಡುತ್ತಿದೆಯೇ? ನೋವಿಲ್ಲದೆ ಪೂಜೆ ಮಾಡಲು ಇಲ್ಲಿದೆ 10 ನಿಮಿಷಗಳ ಸಿಂಪಲ್ ಟಿಪ್ಸ್! -
ಗಣೇಶೋತ್ಸವದ ಸೌಂಡ್ ಕಿರಿಕಿರಿ: ನೆರೆಹೊರೆಯವರ ಜೊತೆ ಜಗಳವಿಲ್ಲದೆ ನೆಮ್ಮದಿಯ ನಿದ್ರೆ ಪಡೆಯುವುದು ಹೇಗೆ? -
ದೆಹಲಿ ಮಳೆ: ನಿಮ್ಮ ಮನೆಯಲ್ಲಿ ಬೂಷ್ಟು ಮತ್ತು ತೇವಾಂಶ ತಡೆಯಲು 45 ನಿಮಿಷದ ಸಿಂಪಲ್ ಪ್ಲಾನ್! -
ಗಣೇಶ ಹಬ್ಬದ ಮೋದಕ: ಶುಗರ್ ಏರಿಕೆಯಾಗದಂತೆ ಸವಿಯಲು ಇಲ್ಲಿವೆ 5 ಆರೋಗ್ಯಕರ ಟಿಪ್ಸ್ -
ಐಫೋನ್ 18 ಪ್ರೋ ಪ್ರೀ-ಆರ್ಡರ್: ₹7,000 ಕ್ಯಾಶ್ಬ್ಯಾಕ್ ಪಡೆಯುವುದು ಹೇಗೆ? ನಕಲಿ ಆಫರ್ಗಳಿಂದ ಎಚ್ಚರ! -
ದೆಹಲಿ ಮಳೆ: ಜಾರಿ ಬೀಳದಂತೆ ಎಚ್ಚರ, ಬೆನ್ನುನೋವಿನಿಂದ ಮುಕ್ತಿ ಪಡೆಯಲು 12 ನಿಮಿಷದ ವರ್ಕೌಟ್ ರೂಟಿನ್! -
ಗಣೇಶೋತ್ಸವದ ಸಂಭ್ರಮದಲ್ಲಿ ದಂಪತಿಗಳ ಜಗಳ ಬೇಡ: ಸಮಯ ಮತ್ತು ಬಜೆಟ್ ನಿರ್ವಹಣೆಗೆ ಇಲ್ಲಿದೆ ಸಿಂಪಲ್ ಪ್ಲಾನ್!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications
