Latest Updates
-
ದೆಹಲಿ-ಎನ್ಸಿಆರ್ನಲ್ಲಿ ಧೂಳಿನ ಬಿರುಗಾಳಿ ಅಬ್ಬರ: ನಿಮ್ಮ ಬಾಲ್ಕನಿ ಗಾರ್ಡನ್ ಮತ್ತು ಮನೆಯನ್ನು ರಕ್ಷಿಸಿಕೊಳ್ಳುವುದು ಹೇಗೆ? -
ಹೀಟ್ವೇವ್ ಎಚ್ಚರಿಕೆ: ಬಿಸಿಲ ಬೇಗೆಯಿಂದ ಬಚಾವಾಗಲು ಈ ಸರಳ ಆಹಾರ ಕ್ರಮಗಳನ್ನು ಮರೆಯದಿರಿ -
ದೆಹಲಿ ಬಿಸಿಲು: ಸುಡುವ ತಾಪಮಾನದಲ್ಲೂ ಸ್ಟೈಲಿಶ್ ಆಗಿ ಕಾಣಲು ವೈರಲ್ ಆಗ್ತಿವೆ ಈ ಸಿಂಪಲ್ ಹ್ಯಾಕ್ಸ್! -
ಮಳೆಗಾಲದ ಬೆಳಗಿನ ವರ್ಕೌಟ್: ನಿಮ್ಮ ಪ್ಲಾನ್ ಉಲ್ಟಾಪಲ್ಟಾ ಆಗದಿರಲಿ, ಈ ಮುನ್ನೆಚ್ಚರಿಕೆ ಮರೆಯದಿರಿ! -
ಲಿವ್-ಇನ್ ಸಂಬಂಧ ಮುರಿದರೆ ಕ್ರಿಮಿನಲ್ ಕೇಸ್? ಸುಪ್ರೀಂ ಕೋರ್ಟ್ನಿಂದ ಬಂತು ಬಿಗ್ ಶಾಕ್! -
ಉರಿಬಿಸಿಲಿನ ತಾಪಕ್ಕೆ ಸುಸ್ತಾದ್ರಾ? ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಹೀಟ್ ವೇವ್ ಎಚ್ಚರಿಕೆ: ಬಿಸಿಲಿನ ಬೇಗೆಯಿಂದ ಬಚಾವಾಗಲು ಈ ಪಾನೀಯಗಳೇ ಮದ್ದು! -
ಅನುಷ್ಕಾ ಶರ್ಮಾ ಐಪಿಎಲ್ ಲುಕ್: ಸಿಂಪಲ್ ಡ್ರೆಸ್ನಲ್ಲೇ ಮ್ಯಾಜಿಕ್ ಮಾಡಿದ್ದು ಹೇಗೆ? -
ಬಿಸಿಗಾಳಿ ಎಚ್ಚರಿಕೆ: ಏಪ್ರಿಲ್ ಬಿಸಿಲಿನಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಾಯಿಸುವುದು ಹೇಗೆ? -
ಪೊಲೀಸ್ ಕಿರುಕುಳದಿಂದ ಬೇಸತ್ತಿದ್ದೀರಾ? ಪ್ರೇಮಿಗಳಿಗೆ ರಕ್ಷಣೆ ನೀಡಲು ಹೈಕೋರ್ಟ್ ಕೊಟ್ಟಿದೆ ಬಿಗ್ ರಿಲೀಫ್!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications