Latest Updates
-
ಬಿಸಿಗಾಳಿಯ ಆರ್ಭಟಕ್ಕೆ ಹೆದರಬೇಡಿ: ಎಸಿ ಇಲ್ಲದಿದ್ದರೂ ನಿಮ್ಮ ಮನೆಯನ್ನು ಐಸ್ನಂತೆ ತಂಪಾಗಿರಿಸುವ ಅದ್ಭುತ ಟ್ರಿಕ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ ತಡೆಯಲು ಈ ಆಹಾರಗಳೇ ನಿಮ್ಮ ಬೆಸ್ಟ್ ಫ್ರೆಂಡ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರವಿರಲಿ! -
ಬಿಸಿಲ ಬೇಗೆಯಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಸಣ್ಣ ಬದಲಾವಣೆಗಳನ್ನು ಮಿಸ್ ಮಾಡ್ಬೇಡಿ! -
ಬಾಡಿಗೆ ಮನೆಯಲ್ಲಿ ಬಿಸಿಲಿನ ಬೇಗೆಯಿಂದ ಪಾರಾಗುವುದು ಹೇಗೆ? ಕರೆಂಟ್ ಬಿಲ್ ಉಳಿಸುವ ಸೀಕ್ರೆಟ್ ಟಿಪ್ಸ್ ಇಲ್ಲಿದೆ! -
ಬಿಸಿಲ ಬೇಗೆಯಲ್ಲಿ ಮಧುಮೇಹಿಗಳ ಪರದಾಟ: ಸಕ್ಕರೆ ಮಟ್ಟ ಏರಿಕೆಯಾಗದಂತೆ ತಂಪಾಗಿರಲು ಈ ಪಾನೀಯಗಳೇ ಮದ್ದು! -
ಇಂದೇ ಮ್ಯೂಸಿಯಂಗೆ ಹೋಗಿ: ಉಚಿತ ಪ್ರವೇಶದ ಜೊತೆಗೆ ಫೋಟೋಶೂಟ್ಗೆ ಸಿಗಲಿದೆ ಸುವರ್ಣಾವಕಾಶ, ಮಿಸ್ ಮಾಡ್ಬೇಡಿ! -
ಶಾಖದ ಅಲೆ ಎಚ್ಚರಿಕೆ: ಬಿಸಿಲಿನಲ್ಲಿ ವ್ಯಾಯಾಮ ಮಾಡುವ ಮುನ್ನ ಈ ತಪ್ಪುಗಳನ್ನು ಮಾಡಬೇಡಿ, ಇಲ್ಲಿದೆ ಸುರಕ್ಷಿತ ಮಾರ್ಗ! -
ಬಿಸಿಲಿನ ಬೇಗೆಯಲ್ಲೂ ಮದುವೆ ಸಂಭ್ರಮ ಮರೆಯಾಗದಿರಲಿ: ಅತಿಥಿಗಳಿಗಾಗಿ ಈ ಸಣ್ಣ ಬದಲಾವಣೆಗಳನ್ನು ಮಾಡಿ ನೋಡಿ! -
ಉರಿಬಿಸಿಲಿಗೆ ಮನೆ ಕುದಿಯುತ್ತಿದೆಯೇ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಸುವ ಸರಳ ಮ್ಯಾಜಿಕ್ ಟಿಪ್ಸ್ ಇಲ್ಲಿದೆ!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications