Latest Updates
-
ವಿಶ್ವ ಸ್ತನ್ಯಪಾನ ಸಪ್ತಾಹ: ಕೇವಲ 250 ರೂಪಾಯಿಯಲ್ಲಿ ತಾಯಂದಿರಿಗೆ ಸಿಗುತ್ತಾ ಪೂರ್ಣ ಪೋಷಣೆ? ಇಲ್ಲಿದೆ ಬೆಸ್ಟ್ ಡಯಟ್ ಪ್ಲಾನ್ -
ಬೆಂಗಳೂರಿನಲ್ಲಿ ನೀರಿನ ಉಳಿತಾಯ ಕಡ್ಡಾಯ: ಜುಲೈ 31ರೊಳಗೆ ನಿಮ್ಮ ಮನೆಯ ನಲ್ಲಿಗಳಿಗೆ ಏರೇಟರ್ ಅಳವಡಿಸಿ! -
ಅಂತರಾಷ್ಟ್ರೀಯ ಸ್ನೇಹ ದಿನ: ಗೆಳೆಯರೊಂದಿಗೆ 'ಬಡ್ಡಿ ವರ್ಕೌಟ್' ಮಾಡಿ ಆರೋಗ್ಯ ಮತ್ತು ಬಾಂಧವ್ಯ ಹೆಚ್ಚಿಸಿಕೊಳ್ಳಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ದಂಪತಿಗಳು ಒಟ್ಟಾಗಿ ಕುಳಿತು ಈ ಕೆಲಸ ಮಾಡಿದರೆ ಟೆನ್ಷನ್ ಫ್ರೀ! -
ಬೆಂಗಳೂರಿಗರೇ ಗಮನಿಸಿ: ಇಂದು 6 ಗಂಟೆ ಪವರ್ ಕಟ್, ಈ ಮುನ್ನೆಚ್ಚರಿಕೆ ಮರೆಯದಿರಿ! -
ಶ್ರಾವಣ ಉಪವಾಸದಲ್ಲಿ ದಿನವಿಡೀ ಎನರ್ಜಿಯಿಂದ ಇರಬೇಕೆ? ಈ ಹೈ-ಪ್ರೋಟೀನ್ ಸಾತ್ವಿಕ ಆಹಾರ ಪದ್ಧತಿ ಫಾಲೋ ಮಾಡಿ! -
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ!
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:

ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.

ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.

ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.

ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.



Click it and Unblock the Notifications