Just In
Don't Miss
- Movies ತಿಂಗಳುಗಳ ಒಳಗೆ ಬಾಡಿದ ಪ್ರೀತಿ: ಹನ್ಸಿಕಾಗಾಗಿ ಸಿಂಬು ಖರ್ಚು ಮಾಡಿದ್ದು ಒಂದೆರಡು ಕೋಟಿ ಅಲ್ಲ!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದು ಸೋಮಾವತಿ ಅಮಾವಾಸ್ಯೆ: ಇದರ ಮಹತ್ವ ಹಾಗೂ ಪ್ರಯೋಜನಗಳು
ಇಂದು ಸೋಮಾವತಿ ಸೋಮಾವತಿ ಅಮಾವಾಸ್ಯೆ, ಇತರ ಅಮಾವಾಸ್ಯೆಗಿಂತ ಈ ಅಮವಾಸ್ಯೆ ತುಂಬಾ ವಿಶೇಷವಾದದ್ದು. ಇದು ವರ್ಷದ ಮೊದಲ ಹಾಗೂ ಕೊನೆಯ ಸೋಮಾವತಿ ಅಮವಾಸ್ಯೆಯಾಗಿದೆ. ಅಮಾವಾಸ್ಯೆ ಸೋಮಾವಾರದಂದು ಬಂದರೆ ಅದನ್ನು ಸೋಮಾವತಿ ಅಮಾವಾಸ್ಯೆ ಎಂದು ಕರೆಯಲಾಗುವುದು.
ಈ ಸೋಮಾವತಿ ಅಮವಾಸ್ಯೆಗೆ ಪಿತೃಗಳಿಗೆ ಭೋಜನ, ಜ ಅರ್ಪಿಸಬೇಕು, ಈ ದಿನ ಪಿತೃರನ್ನು ಸಂತೃಪ್ತ ಗೊಳಿಸಲು ಸೂಕ್ತ ಏಕೆ, ಈ ದಿನ ಏನು ಮಾಡಬೇಕು, ಹಣ, ಸಂಪತ್ತು ವೃದ್ಧಿಗೆ ಈ ದಿನ ಯಾವ ದೇವರನ್ನು ಪೂಜಿಸಬೇಕು ಮುಂತಾದ ಮಾಹಿತಿ ಇಲ್ಲಿದೆ:
ಪಿತೃ ಕಾರ್ಯಗಳಿಗೆ ಅಮಾವಾಸ್ಯೆ ಸರ್ವಶ್ರೇಷ್ಠ
ಈ ದಿನ ಬೆಳಗ್ಗೆ ಎದ್ದು ಸ್ನಾನ ಮಾಡಿ ಅದರಲ್ಲೂ ಗಂಗಾ ನದಿಯಲ್ಲಿ ಸ್ನಾನ ಮಾಡಿದರೆ ತುಂಬಾನೇ ಪುಣ್ಯ ಸಿಗುತ್ತದೆ, ಇಲ್ಲದಿದ್ದರೆ ಸ್ನಾನ ಮಾಡುವ ನೀರಿಗೆ ಸ್ವಲ್ಪ ಗಂಗಾಜಲ ಹಾಕಿ ಸ್ನಾನ ಮಾಡಬೇಕು, ನಂತರ ಪೂರ್ವಜರಿಗೆ ಭೋಜನ, ವಸ್ತ್ರ ಜಲದಾನ ಮಾಡುವುದರಿಂದ ಪುಣ್ಯಪ್ರಾಪ್ತಿಯಾಗುತ್ತದೆ.
ಈ ಬಾರಿ ಸೋಮಾವತಿ ಅಮಾವಾಸ್ಯೆ ಕುಂಭ ಮೇದ ಎರಡನೇ ಸ್ನಾನ ಕೂಡ ಬಂದಿರುವುದರಿಂದ ಈ ಅಮವಾಸ್ಯೆಗೆ ಮತ್ತಷ್ಟು ಮಹತ್ವ ಬಂದಿದೆ.
ಪಿತೃರನ್ನು ಸಂತೃಪ್ತಗೊಳಿಸುವುದು ಹೇಗೆ?
ಈ ದಿನ ಪುಣ್ಯ ನದಿಯಲ್ಲಿ ಸ್ನಾನ ಮಾಡಿ ಸೂರ್ಯನಿಗೆ ಆರ್ಘ್ಯ ನೀಡಿ, ಮನೆಯಲ್ಲಿಯೇ ಭೋಜನ ಮಾಡಿ ಅವರಿಗೆ ಭೋಜನ ಹಾಗೂ ಜಲವನ್ನು ಅರ್ಪಿಸಲಾಗುವುದು. ಅಲ್ಲದೆ ಈ ದಿನ ಮನೆಯಲ್ಲಿರುವ ಹಿರಿಯ ಸದಸ್ಯರ ಸೇವೆಯಿಂದಲೂ ಪಿತೃರನ್ನು ಸಂತೃಪ್ತಗೊಳಿಸಬಹುದು.
ಈ ಅಮಾವಾಸ್ಯೆ ಆಚರಿಸುವುದರಿಂದ ದೊರೆಯುವ ಪ್ರಯೋಜನಗಳು
ಈ ಅಮವಾಸ್ಯೆಯಂದು ಪಿತೃಗಳ ಆಶೀರ್ವಾದ ಸಿಕ್ಕರೆ ನಮ್ಮೆಲ್ಲಾ ದೋಷಗಳಿಂದ ಮುಕ್ತಿ ಸಿಗುವುದು. ಅಲ್ಲದೆ ಈ ದಿನ ಬೆಳಗ್ಗೆ ಮತ್ತು ಸಂಜೆ ಲಕ್ಷ್ಮೀಯನ್ನು ಪೂಜಿಸಬೇಕು. ಇದರಿಂದ ಸಂಪತ್ತು ವೃದ್ಧಿಯಾಗುವುದು.
ಧಾರ್ಮಿಕ ಕಾರ್ಯ ಹಾಗೂ ದಾನ ಮಾಡಬೇಕು
ಫಾಲ್ಗುಣ ಅಥವಾ ಚೈತ್ರ ಮಾಸದಲ್ಲಿ ಸೋಮಾವತಿ ಅಮಾವಾಸ್ಯೆ ಬಂದರೆ ಆ ದಿನ ನಾವು ದಾನ ಮಾಡುವುದರಿಂದ, ಧಾರ್ಮಿಕ ಕಾರ್ಯಗಳನ್ನು ಮಾಡುವುದರಿಂದ ಪುಣ್ಯ ಬರುತ್ತದೆ. ಇಂಥ ದಿನಗಳಲ್ಲಿ ಜಾತ್ರೆಗಳನ್ನು ಮಾಡಲಾಗಿತ್ತು, ಆದರೆ ಈ ವರ್ಷ ಕೊರೊನ ಕಾರಣ ಜಾತ್ರೆಯ ಸಡಗರ ಇರಲ್ಲ.