Latest Updates
-
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ! -
ದೆಹಲಿ-ಎನ್ಸಿಆರ್ನಲ್ಲಿ ಯೆಲ್ಲೋ ಅಲರ್ಟ್: ಮಳೆಯ ಅಬ್ಬರದ ನಡುವೆಯೂ ದಂಪತಿಗಳು ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸುವುದು ಹೇಗೆ? -
ದೆಹಲಿ-ಎನ್ಸಿಆರ್ ನಿವಾಸಿಗಳೇ ಎಚ್ಚರ: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವಾಗಿದೆಯೇ? -
ಮುಂಬೈ-ಥಾಣೆಯಲ್ಲಿ 39 ಡಿಗ್ರಿ ಬಿಸಿಲ ಅಬ್ಬರ: ಯೆಲ್ಲೋ ಅಲರ್ಟ್ ನಡುವೆ ನಿಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ? -
ಮೆಟ್ ಗಾಲಾ 2026: ಇಶಾ ಅಂಬಾನಿ-ಕರಣ್ ಜೋಹರ್ ಲುಕ್ ನೋಡಿ ಫಿದಾ ಆದ ಫ್ಯಾಷನ್ ಪ್ರಿಯರು! -
ಹವಾಮಾನ ಇಲಾಖೆ ಎಚ್ಚರಿಕೆ: ಇಂದಿನ ಮಳೆ-ಸಿಡಿಲಿನ ಆರ್ಭಟಕ್ಕೆ ನಿಮ್ಮ ದಿನಚರಿ ಬದಲಾಯಿಸಿಕೊಳ್ಳಿ! -
ನೀಟ್ 2026 ಪರೀಕ್ಷೆ ಮುಗಿದಿದೆ: ಪೋಷಕರ ಜೊತೆ ಮನಬಿಚ್ಚಿ ಮಾತನಾಡಿ ಒತ್ತಡವನ್ನು ದೂರ ಮಾಡುವುದು ಹೇಗೆ? -
IMD ರೆಡ್ ಅಲರ್ಟ್: ಬಿರುಗಾಳಿ ಅಬ್ಬರಕ್ಕೆ ನಿಮ್ಮ ಬಾಲ್ಕನಿ ಮತ್ತು ಗಿಡಗಳು ಬಲಿಯಾಗದಿರಲಿ, ಈ ಕೆಲಸ ತಕ್ಷಣ ಮಾಡಿ! -
ಹೀಟ್ವೇವ್ ಎಫೆಕ್ಟ್: ಸುಡುವ ಬಿಸಿಲಿಗೆ ತಂಪಾಗಲು ಮಜ್ಜಿಗೆ, ಎಳನೀರು ಸಾಕಾ? ಇಲ್ಲಿದೆ ಆರೋಗ್ಯದ ಗುಟ್ಟು -
ಮೆಟ್ ಗಾಲಾ 2026: ರೆಡ್ ಕಾರ್ಪೆಟ್ ಮೇಲೆ ಭಾರತೀಯ ತಾರೆಯರ ಅಬ್ಬರ, ಲೈವ್ ನೋಡುವುದು ಹೇಗೆ?
ಸೆ.1ಕ್ಕೆ ಸ್ಕಂದ ಷಷ್ಠಿ: ಸಂತಾನ ಭಾಗ್ಯ, ದಾರಿದ್ರ್ಯ ನಿವಾರಣೆಗೆ ಪಾಲಿಸಬೇಕಾದ ಪೂಜಾ ವಿಧಿಗಳೇನು?
ಸ್ಕಂದ ಷಷ್ಠಿ ಉಪವಾಸವನ್ನು ಕಾರ್ತಿಕೇಯ ದೇವರಿಗೆ ಅಂದರೆ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿಸಲಾಗಿದೆ. ಭಾದ್ರಪದ ಶುಕ್ಲ ಪಕ್ಷದ ಷಷ್ಠಿ ದಿನಾಂಕದಂದು ಸ್ಕಂದ ಷಷ್ಠಿ ಆಚರಿಸಲಾಗುತ್ತದೆ ಅಂದರೆ ಈ ದಿನ ಆಚರಿಸಲಾಗುತ್ತಿದೆ. ಸ್ಕಂದ ಷಷ್ಠಿಯನ್ನು ಕಂದ ಷಷ್ಠಿ ಎಂದೂ ಕರೆಯುತ್ತಾರೆ.

ಈ ದಿನ ಕಾರ್ತಿಕೇಯ ದೇವರನ್ನು ನಿಯಮಾನುಸಾರ ಪೂಜಿಸುವುದರಿಂದ ಸುಖ, ಸಮೃದ್ಧಿ, ಸಂತಾನ ಭಾಗ್ಯ ದೊರೆಯುತ್ತದ.

ಸ್ಕಂದ ಷಷ್ಠಿಯ ಪೂಜೆಯ ಶುಭ ಸಮಯ ಯಾವಾಗ?
ಸ್ಕಂದ ಷಷ್ಠಿ ದಿನಾಂಕ - ಸೆಪ್ಟೆಂಬರ್ 1, 2022, ಗುರುವಾರ
ಭಾದ್ರಪದ, ಶುಕ್ಲ ಷಷ್ಠಿ ಆರಂಭ - ಮಧ್ಯಾಹ್ನ 02:49 ಸೆಪ್ಟೆಂಬರ್ 01
ಭಾದ್ರಪದ, ಶುಕ್ಲ ಷಷ್ಠಿ ಮುಕ್ತಾಯ -ಮಧ್ಯಾಹ್ನ 01:51ಕ್ಕೆ ಸೆಪ್ಟೆಂಬರ್ 02
ಸೆಪ್ಟೆಂಬರ್ 1 ರಂದು ಸ್ಕಂದ ಷಷ್ಠಿ ಉಪವಾಸವನ್ನು ಆಚರಿಸಲಾಗುತ್ತದೆ.

ಸ್ಕಂದ ಷಷ್ಠಿಯ ಮಹತ್ವ
ಮುರುಗನು ಷಷ್ಠಿಯ ದಿನದಂದು ಸೊರಪದ್ಮ ಮತ್ತು ಅವನ ಸಹೋದರರಾದ ತಾರಕಾಸುರ ಮತ್ತು ಸಿಂಹಮುಖನನ್ನು ಕೊಂದನು. ಸ್ಕಂದ ಷಷ್ಠಿಯ ಈ ದಿನ ವಿಜಯದ ಸಂಕೇತವಾಗಿದೆ. ಮುರುಗನ್ ವೇಲ್ ಎಂಬ ಆಯುಧವನ್ನು ಬಳಸಿ ಸೂರಪದ್ಮನ ಶಿರಚ್ಛೇದ ಮಾಡಿದನೆಂದು ನಂಬಲಾಗಿದೆ. ಕತ್ತರಿಸಿದ ತಲೆಯಿಂದ ನವಿಲು ಹಾಗೂ ಹುಂಜ ಹೊರಹೊಮ್ಮಿದವು ಎಂಬ ಪೌರಾಣಿಕ ಕತೆಯಿದೆ. ನವಿಲನ್ನು ಕಾರ್ತಿಕೇಯ ತನ್ನ ವಾಹನವನ್ನಾಗಿ ಮಾಡಿದರೆ ಧ್ವಜದ ಸಂಕೇತವಾಗಿ ಹುಂಜವನ್ನು ಬಳಸಿದರು.
ಸ್ಕಂದ ಷಷ್ಠಿಯ ವ್ರತವನ್ನು ಆಚರಿಸುವುದರಿಂದ ಮಕ್ಕಳಿಲ್ಲದವರಿಗೆ ಸಂತಾನ ಪ್ರಾಪ್ತಿಯಾಗುತ್ತದೆ.

ಪೂಜಾ ವಿಧಿಗಳು:
* ಸ್ಕಂದ ಷಷ್ಠಿಯ ದಿನ ಬ್ರಹ್ಮ ಮುಹೂರ್ತದಲ್ಲಿ ಸ್ನಾನ ಮಾಡಿ.
* ಹಲಗೆಯ ಮೇಲೆ ಕೆಂಪು ಬಟ್ಟೆಯನ್ನು ಹಾಕಿ ಕಾರ್ತಿಕೇಯನ ವಿಗ್ರಹವನ್ನು ಸ್ಥಾಪಿಸಿ.
* ಮುರುಗನ ಜೊತೆಗೆ ಶಿವ-ಪಾರ್ವತಿ ಹಾಗೂ ಗಣೇಶ ಮೂರ್ತಿಗಳನ್ನೂ ಪ್ರತಿಷ್ಠಾಪಿಸಬೇಕು.
* ಕಾರ್ತಿಕೇಯನ ಮುಂದೆ ಕಲಶವನ್ನು ಇರಿಸಿ.
* ಮೊದಲು ಗಣೇಶನ ಪೂಜೆ ಮಾಡಿ.
* ಸಾಧ್ಯವಾದರೆ ಅಖಂಡ ಜ್ಯೋತಿ ಬೆಳಗಿಸಿ. ಹಾಗೆಯೇ ಬೆಳಿಗ್ಗೆ ಮತ್ತು ಸಂಜೆ ದೀಪವನ್ನು ಬೆಳಗಿಸಿ.
* ಕಾರ್ತಿಕೇಯನಿಗೆ ನೀರನ್ನು ಅರ್ಪಿಸಿ ಮತ್ತು ಹೊಸ ಬಟ್ಟೆಗಳನ್ನು ಅರ್ಪಿಸಿ.
* ಹೂವುಗಳು ಅಥವಾ ಹೂವಿನ ಹಾರಗಳನ್ನು ಅರ್ಪಿಸುವ ಮೂಲಕ ಹಣ್ಣುಗಳು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಿ.
* ಪೂಜೆಯ ಕೊನೆಯಲ್ಲಿ ಆರತಿ ಮಾಡಿ.



Click it and Unblock the Notifications