Latest Updates
-
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ!
ಶನಿವಾರದ ದಿನ ಭವಿಷ್ಯ (31-08-2019)
ಶನಿವಾರದ ದಿನ ವಾಯುಪುತ್ರ, ಕಪಿವೀರನೆಂದು ಕರೆಯಲ್ಪಡುವ ಹನುಮಂತ ಕೇಸರಿ ಎಂಬ ವಾನರ ಮತ್ತು ಅಂಜನಾದೇವಿಯ ಮಗ ಮತ್ತು ರಾಮನ ಪರಮಭಕ್ತ. ಶಕ್ತಿಯ ದೇವತೆಯೆಂದು ಹನುಮಂತನನ್ನು ಪೂಜಿಸಲಾಗುತ್ತದೆ.ತನ್ನ ಸ್ವಾಮಿಯಾದ ರಾಮನಿಗೆ ಸಹಾಯ ಮಾಡಲು ಮುಂದಾಗುತ್ತಾನೆ. ನೂರು ಯೋಜನ ವಿಸ್ತಾರದ ಮಹಾ ಸಮುದ್ರವನ್ನು ಹಾರಿ ಸೀತೆಯು ಲಂಕೆಯಲ್ಲಿರುವ ವಿಷಯವನ್ನು ರಾಮನಿಗೆ ತಿಳಿಸುತ್ತಾನೆ. ಮುಂದೆ ರಾವಣನ ಜೊತೆ ಯುದ್ಧ ಮಾಡಿ, ಸೀತೆಯನ್ನು ಲಂಕೆಯಿಂದ ಕರೆದುಕೊಂಡು ಬರಲು ರಾಮನಿಗೆ ಹನುಮಂತ ಹಲವು ವಿಧದಲ್ಲಿ ನೆರವಾಗುತ್ತಾನೆ.

ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುವುದರಿಂದ ಮನೆಯಲ್ಲಿನ ಕಷ್ಟಗಳು ದೂರಾಗುತ್ತವೆ ಹಾಗೂ ಮನೆಯಲ್ಲಿ ದುಷ್ಟಶಕ್ತಿಗಳು ಸುಳಿಯುವುದಿಲ್ಲ, ಮಕ್ಕಳು ಚಂಡಿ ಹಿಡಿದರೆ ದೇವಸ್ಥಾನಕ್ಕೆ ಭೇಟಿ ನೀಡಿ ತಾಯತ ಹಾಕಿಸಿಕೊಳ್ಳುವುದರಿಂದ ಮಕ್ಕಳಲ್ಲಿರುವ ಗೊಂದಲ ಹಾಗೂ ತೊಂದರೆಗಳು ಇಲ್ಲವಾದಂತೆ ಆಗುತ್ತದೆ. ಈ ಆಂಜನೇಯನನ್ನು ಪ್ರಾರ್ಥಿಸುವುದರಿಂದ ಗಾಳಿ ಹಿಡಿಯುವುದು ಅಂದರೆ ಭೂತ ಪಿಶಾಚಿಗಳ ಮುಷ್ಟಿಗೆ ಒಳಪಡುವುದರಿಂದ ಮುಕ್ತಿ ಪಡೆಯಬಹುದು ಎಂಬ ನಂಬಿಕೆ ಇಲ್ಲಿನ ಜನರಲ್ಲಿದೆ.ವಾಹನ, ಮನೆಯ ಮೇಲೆ ಬೀಳುವ ದೃಷ್ಟಿಯನ್ನು ಗಾಳಿ ಆಂಜನೇಯ ಸ್ವಾಮಿ ದೂರ ಮಾಡುತ್ತಾನೆಂಬ ನಂಬಿಕೆಯಿಂದಲೇ ಪ್ರತೀ ನಿತ್ಯ ತಮ್ಮ ವಾಹನಗಳಿಗೆ ಪೂಜೆ ಮಾಡಿಸುತ್ತಾರೆ. ಆಜಂನೇಯ ವಾಯುಪುತ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.



Click it and Unblock the Notifications
