Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಈ 5 ಸಂಗತಿ ತಿಳಿದರೆ ಯುಗಾದಿ ಮತ್ತಷ್ಟು ಸ್ಪೆಷಲ್ ಅನಿಸುವುದು
ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಎಂದರೆ ನವ ವರ್ಷ. ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷ ಪ್ರಾರಂಭವಾಗುವುದೇ ಯುಗಾದಿಯಿಂದ. ಯುಗ-ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ..... ಈ ಸಾಲಿನಲ್ಲಿ ಮಾರ್ಚ್ 22ಕ್ಕೆ ಯುಗಾದಿ ಹಬ್ಬವನ್ನು ಆಚರಿಸುತ್ತೇವೆ.

ಯುಗಾದಿ ಹಬ್ಬದ ಬಗ್ಗೆ ಈ 5 ವಿಷಯಗಳು ಗೊತ್ತಿದ್ದರೆ ಯುಗಾದಿ ಮತ್ತಷ್ಟು ಸ್ಪೆಷಲ್ ಆಗುವುದು ನೋಡಿ:

ಹೊಸ ವರ್ಷದ ಆರಂಭ
ಯುಗಾದಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಬರುತ್ತದೆ. ಈ ವರ್ಷ ಮಾರ್ಚ್ನಲ್ಲಿ ಬಂದಿದೆ. ಕರ್ನಾಟಕ, ಆಂಧ್ರಪ್ರದೇಶದಲ್ಲಿಈ ಹಬ್ಬವನ್ನು ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಉತ್ತರ ಭಾರತದ ಕಡೆ ಗುಡಿ ಪರ್ವ ಎಂದು ಈ ದಿನ ಹಬ್ಬವನ್ನು ಆಚರಿಸಲಾಗುವುದು.
ಯುಗಾದಿಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷ ಎಂದು ಪರಿಗಣಿಸಲಾಗುವುದು. ಹೊಸ ವರ್ಷದ ಸೂಚನೆಗಳು ಪ್ರಕೃತಿಯಲ್ಲೂ ಕಾಣಸಿಗುವುದು.
ವಸಂತ ಋತುವಿನ ಕಾಲದಲ್ಲಿ ಗಿಡಗಳ ಎಲೆಗಳು ಉದುರಿ ಹೊಸ ಚಿಗುರು ಮೂಡಿರುತ್ತದೆ, ಪ್ರಕೃತ್ತಿಯಲ್ಲಿಯೇ ಹೊಸತನ ಮೂಡಿರುತ್ತದೆ. ಪ್ರಕೃತಿ ಹಚ್ಚ ಹಸಿರಿನಿಂದ ಕಂಗೊಳಿಸುವುದು, ಮಾವುಗಳಲ್ಲಿ ಎಳೆ ತಳಿರು ಮೂಡುವುದು, ಪ್ರಕೃತ್ತಿಯಲ್ಲಿಯೇ ಹೊಸತನ ಕಾಣುತ್ತೇವೆ.

ಯುಗಾದಿಯಂದು ಬ್ರಹ್ಮ ವಿಶ್ವವನ್ನು ಸೃಷ್ಟಿಸಿದ
ಹಿಂದೂ ಧರ್ಮದಲ್ಲಿ ಬ್ರಹ್ಮನನ್ನು ಸೃಷ್ಟಿಕರ್ತವೆಂದು ಹೇಳಲಾಗುವುದು. ಇಡೀ ವಿಶ್ವವನ್ನು ಬ್ರಹ್ಮ ನಿರ್ಮಿಸಿದ್ದಾನೆ ಎಂದು ಹೇಳಲಾಗುವುದು. ಬ್ರಹ್ಮ ಯುಗಾದಿಯಲ್ಲಿ ವಿಶ್ವವನ್ನು ನಿರ್ಮಿಸಿದ ಎಂದು ನಂಬಲಾಗಿದೆ. ಈ ಯುಗಾದಿ ಹಬ್ಬ ನಮ್ಮೆಲ್ಲರ ಬದುಕಿನಲ್ಲಿ ಹೊಸತನ್ನು ಹೊತ್ತು ತರುತ್ತದೆ, ಆದ್ದರಿಂದಲೇ ಯುಗಾದಿ ತುಂಬಾನೇ ಸ್ಪೆಷಲ್ ಅನಿಸುವುದು.

ಯುಗಾದಿಯಂದು ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕ
ರಾಮಾಯಣದಲ್ಲಿ ಯುಗಾದಿಯಂದು ಅಯೋಧ್ಯೆಯ ರಾಜನಾಗಿ ರಾಮನನ್ನು ಪಟ್ಟಾಭಿಷೇಕ ಮಾಡಲಾಯಿತು ಎಂದು ಹೇಳಲಾಗಿದೆ. ಶ್ರೀರಾಮ ದುಷ್ಟನಾದ ರಾವಣನ ಸಂಹರಿಸಿ ವಿಜಯದೊಂದಿಗೆ ಅಯೋಧ್ಯೆಗೆ ಹಿಂತಿರುಗಿದ, ಅಯೋಧ್ಯೆಯ ಜನರು ರಂಗೋಲಿ ಹಾಕಿ, ಹಣತೆಗಳನ್ನು ಹಚ್ಚಿ ಶ್ರೀರಾಮ, ಸೀತೆ, ಲಕ್ಷ್ಮಣರನ್ನು ಸ್ವಾಗತಿಸಿದರು ಎಂದು ರಾಮಾಯಣದಲ್ಲಿ ಹೇಳಲಾಗಿದೆ.

ಕಲಿಯುಗದ ಆರಂಭ
ಯುಗಾದಿಯಂದು ದ್ವಾಪರಯುಗ ಮುಗಿದು ಕಲಿಯುಗ ಪ್ರಾರಂಭವಾಯಿತು, ಶ್ರೀಕೃಷ್ಣ ದ್ವಾಪರಯುಗದ ನಂತರ ದೇವ ಲೋಕಕ್ಕೆ ಹಿಂತಿರುಗಿದ. ಕಲಿಯುಗದದಲ್ಲಿ ಹಿಂಸೆ, ಅನ್ಯಾಯಗಳು ಹೆಚ್ಚಾದಾಗ ಮತ್ತೆ ರೂಪವೆತ್ತಿ ಬರುತ್ತಾನೆ ಬಂದು ದುಷ್ಟರಿಗೆ ತಕ್ಕ ಪಾಠ ಕಲಿಸುತ್ತಾನೆ ಎಂದು ನಂಬಲಾಗಿದೆ.

ಯುಗಾದಿ ಆಚರಣೆ ಹೇಗೆ?
ಯುಗಾದಿಯನ್ನು ಬೇವು-ಬೆಲ್ಲದ ಜೊತೆಗೆ ಆಚರಿಸಲಾಗುವುದು. ಮಾನವ ಜೀವನವೆಂದರೆ ಅಲ್ಲಿ ಸಿಹಿಯೂ ಇರುತ್ತೆ, ಕಹಿಯೂ ಇರುತ್ತೆ ಅಂದರೆ ಸುಖ: ದುಃಖ ಎರಡೂ ಇರುತ್ತದೆ. ಸುಖ ಬಂದಾಗ ಹಿಗ್ಗಬಾರದು, ದುಃಖ ಬಂದಾಗ ಕುಗ್ಗಬಾರದು, ಸಮತೋಲನದ ಜೀವನ ನಡೆಸಬೇಕೆಂಬುವುದೇ ಯುಗಾದಿಯಲ್ಲಿ ಬೇವು-ಬೆಲ್ಲ ಸವಿಯುವುದರ ಹಿಂದಿನ ಅರ್ಥವಾಗಿದೆ.
ವೈಜ್ಞಾನಿಕವಾಗಿಯೂ ಬೇವು-ಬೆಲ್ಲ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಈ ದಿನ ರಂಗೋಲಿ ಹಾಕಿ, ಮನೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ, ಯುಗಾದಿ ಪಚಡಿ ತಯಾರಿಸಿ, ಹಬ್ಬದ ಅಡುಗೆ ಮಾಡಿ ಸಂತೋಷ, ಸಡಗರದಿಂದ ಆಚರಿಸಲಾಗುವುದು.
ಈ ಯುಗಾದಿ ನಿಮ್ಮೆಲ್ಲರ ಬಾಳಲ್ಲಿ ಹೊಸತನ್ನು ತರಲಿ, ನಿಮ್ಮ ಆಸೆ ಈಡೇರಲಿ, ಕನಸು ನನಸಾಗಲಿ, ಬಾಳು ಬಂಗಾರವಾಗಲಿ.



Click it and Unblock the Notifications