Latest Updates
-
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು? -
ಪಂಜಾಬ್-ಹರಿಯಾಣದಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಈ 20 ನಿಮಿಷಗಳ ಟಿಪ್ಸ್ ಪಾಲಿಸಿ! -
ಸೋಯಾಬೀನ್ ಎಣ್ಣೆ ಬೆಲೆ ಏರಿಕೆ: ಅಡುಗೆ ಮನೆ ಬಜೆಟ್ ಮೇಲೆ ಹೊರೆ, ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ದೆಹಲಿ-ಎನ್ಸಿಆರ್ನಲ್ಲಿ ಮಳೆ ಅಬ್ಬರ: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ನೀವು ಮಾಡಬೇಕಾದ್ದೇನು? -
ಮುಂಬೈ ಸೆಕೆ ಮತ್ತು ಆರ್ದ್ರತೆ: ಹೊರಗೆ ಹೋಗಿ ಸುಸ್ತಾಗುವ ಬದಲು ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ಇಂದು ರಾತ್ರಿ ದೆಹಲಿ-ಎನ್ಸಿಆರ್ನಲ್ಲಿ ಭೀಕರ ಮಳೆ: ಹೊರಗೆ ಹೋಗುವ ಪ್ಲಾನ್ ಇದೆಯಾ? ಎಚ್ಚರ! -
ಮಳೆಗಾಲದಲ್ಲಿ ಮನೆ ಹಾಳಾಗದಂತೆ ತಡೆಯುವುದು ಹೇಗೆ? ತೇವಾಂಶ ಮತ್ತು ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
'ಹೆಲ್ದಿ' ಆಹಾರದ ಹೆಸರಿನಲ್ಲಿ ಮೋಸ ಹೋಗ್ತಿದ್ದೀರಾ? FSSAI ಹೊಸ ನಿಯಮದ ಅಸಲಿಯತ್ತು ಇಲ್ಲಿದೆ! -
UGC NET 2026 ಅಡ್ಮಿಟ್ ಕಾರ್ಡ್ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ಹೋಗುವ ಮುನ್ನ ಈ ನಿಯಮಗಳನ್ನು ಮಿಸ್ ಮಾಡ್ಬೇಡಿ! -
ಬೆಂಗಳೂರು, ಕರಾವಳಿಯಲ್ಲಿ ಭಾರಿ ಮಳೆ: ಹೊರಗೆ ಹೋಗುವ ಮುನ್ನ ಈ ಎಚ್ಚರಿಕೆ ಮರೆಯದಿರಿ!
ಈ 5 ಸಂಗತಿ ತಿಳಿದರೆ ಯುಗಾದಿ ಮತ್ತಷ್ಟು ಸ್ಪೆಷಲ್ ಅನಿಸುವುದು
ಹಿಂದೂ ಪಂಚಾಂಗದ ಪ್ರಕಾರ ಯುಗಾದಿ ಎಂದರೆ ನವ ವರ್ಷ. ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷ ಪ್ರಾರಂಭವಾಗುವುದೇ ಯುಗಾದಿಯಿಂದ. ಯುಗ-ಯುಗಾದಿ ಕಳೆದರೂ ಯುಗಾದಿ ಮರಳಿ ಬರುತ್ತಿದೆ..... ಈ ಸಾಲಿನಲ್ಲಿ ಮಾರ್ಚ್ 22ಕ್ಕೆ ಯುಗಾದಿ ಹಬ್ಬವನ್ನು ಆಚರಿಸುತ್ತೇವೆ.

ಯುಗಾದಿ ಹಬ್ಬದ ಬಗ್ಗೆ ಈ 5 ವಿಷಯಗಳು ಗೊತ್ತಿದ್ದರೆ ಯುಗಾದಿ ಮತ್ತಷ್ಟು ಸ್ಪೆಷಲ್ ಆಗುವುದು ನೋಡಿ:

ಹೊಸ ವರ್ಷದ ಆರಂಭ
ಯುಗಾದಿ ಮಾರ್ಚ್ ಅಥವಾ ಏಪ್ರಿಲ್ ತಿಂಗಳಿನಲ್ಲಿ ಬರುತ್ತದೆ. ಈ ವರ್ಷ ಮಾರ್ಚ್ನಲ್ಲಿ ಬಂದಿದೆ. ಕರ್ನಾಟಕ, ಆಂಧ್ರಪ್ರದೇಶದಲ್ಲಿಈ ಹಬ್ಬವನ್ನು ತುಂಬಾನೇ ಅದ್ಧೂರಿಯಾಗಿ ಆಚರಿಸಲಾಗುವುದು. ಉತ್ತರ ಭಾರತದ ಕಡೆ ಗುಡಿ ಪರ್ವ ಎಂದು ಈ ದಿನ ಹಬ್ಬವನ್ನು ಆಚರಿಸಲಾಗುವುದು.
ಯುಗಾದಿಯನ್ನು ಹಿಂದೂ ಕ್ಯಾಲೆಂಡರ್ ಪ್ರಕಾರ ಹೊಸ ವರ್ಷ ಎಂದು ಪರಿಗಣಿಸಲಾಗುವುದು. ಹೊಸ ವರ್ಷದ ಸೂಚನೆಗಳು ಪ್ರಕೃತಿಯಲ್ಲೂ ಕಾಣಸಿಗುವುದು.
ವಸಂತ ಋತುವಿನ ಕಾಲದಲ್ಲಿ ಗಿಡಗಳ ಎಲೆಗಳು ಉದುರಿ ಹೊಸ ಚಿಗುರು ಮೂಡಿರುತ್ತದೆ, ಪ್ರಕೃತ್ತಿಯಲ್ಲಿಯೇ ಹೊಸತನ ಮೂಡಿರುತ್ತದೆ. ಪ್ರಕೃತಿ ಹಚ್ಚ ಹಸಿರಿನಿಂದ ಕಂಗೊಳಿಸುವುದು, ಮಾವುಗಳಲ್ಲಿ ಎಳೆ ತಳಿರು ಮೂಡುವುದು, ಪ್ರಕೃತ್ತಿಯಲ್ಲಿಯೇ ಹೊಸತನ ಕಾಣುತ್ತೇವೆ.

ಯುಗಾದಿಯಂದು ಬ್ರಹ್ಮ ವಿಶ್ವವನ್ನು ಸೃಷ್ಟಿಸಿದ
ಹಿಂದೂ ಧರ್ಮದಲ್ಲಿ ಬ್ರಹ್ಮನನ್ನು ಸೃಷ್ಟಿಕರ್ತವೆಂದು ಹೇಳಲಾಗುವುದು. ಇಡೀ ವಿಶ್ವವನ್ನು ಬ್ರಹ್ಮ ನಿರ್ಮಿಸಿದ್ದಾನೆ ಎಂದು ಹೇಳಲಾಗುವುದು. ಬ್ರಹ್ಮ ಯುಗಾದಿಯಲ್ಲಿ ವಿಶ್ವವನ್ನು ನಿರ್ಮಿಸಿದ ಎಂದು ನಂಬಲಾಗಿದೆ. ಈ ಯುಗಾದಿ ಹಬ್ಬ ನಮ್ಮೆಲ್ಲರ ಬದುಕಿನಲ್ಲಿ ಹೊಸತನ್ನು ಹೊತ್ತು ತರುತ್ತದೆ, ಆದ್ದರಿಂದಲೇ ಯುಗಾದಿ ತುಂಬಾನೇ ಸ್ಪೆಷಲ್ ಅನಿಸುವುದು.

ಯುಗಾದಿಯಂದು ಅಯೋಧ್ಯೆಯಲ್ಲಿ ರಾಮನಿಗೆ ಪಟ್ಟಾಭಿಷೇಕ
ರಾಮಾಯಣದಲ್ಲಿ ಯುಗಾದಿಯಂದು ಅಯೋಧ್ಯೆಯ ರಾಜನಾಗಿ ರಾಮನನ್ನು ಪಟ್ಟಾಭಿಷೇಕ ಮಾಡಲಾಯಿತು ಎಂದು ಹೇಳಲಾಗಿದೆ. ಶ್ರೀರಾಮ ದುಷ್ಟನಾದ ರಾವಣನ ಸಂಹರಿಸಿ ವಿಜಯದೊಂದಿಗೆ ಅಯೋಧ್ಯೆಗೆ ಹಿಂತಿರುಗಿದ, ಅಯೋಧ್ಯೆಯ ಜನರು ರಂಗೋಲಿ ಹಾಕಿ, ಹಣತೆಗಳನ್ನು ಹಚ್ಚಿ ಶ್ರೀರಾಮ, ಸೀತೆ, ಲಕ್ಷ್ಮಣರನ್ನು ಸ್ವಾಗತಿಸಿದರು ಎಂದು ರಾಮಾಯಣದಲ್ಲಿ ಹೇಳಲಾಗಿದೆ.

ಕಲಿಯುಗದ ಆರಂಭ
ಯುಗಾದಿಯಂದು ದ್ವಾಪರಯುಗ ಮುಗಿದು ಕಲಿಯುಗ ಪ್ರಾರಂಭವಾಯಿತು, ಶ್ರೀಕೃಷ್ಣ ದ್ವಾಪರಯುಗದ ನಂತರ ದೇವ ಲೋಕಕ್ಕೆ ಹಿಂತಿರುಗಿದ. ಕಲಿಯುಗದದಲ್ಲಿ ಹಿಂಸೆ, ಅನ್ಯಾಯಗಳು ಹೆಚ್ಚಾದಾಗ ಮತ್ತೆ ರೂಪವೆತ್ತಿ ಬರುತ್ತಾನೆ ಬಂದು ದುಷ್ಟರಿಗೆ ತಕ್ಕ ಪಾಠ ಕಲಿಸುತ್ತಾನೆ ಎಂದು ನಂಬಲಾಗಿದೆ.

ಯುಗಾದಿ ಆಚರಣೆ ಹೇಗೆ?
ಯುಗಾದಿಯನ್ನು ಬೇವು-ಬೆಲ್ಲದ ಜೊತೆಗೆ ಆಚರಿಸಲಾಗುವುದು. ಮಾನವ ಜೀವನವೆಂದರೆ ಅಲ್ಲಿ ಸಿಹಿಯೂ ಇರುತ್ತೆ, ಕಹಿಯೂ ಇರುತ್ತೆ ಅಂದರೆ ಸುಖ: ದುಃಖ ಎರಡೂ ಇರುತ್ತದೆ. ಸುಖ ಬಂದಾಗ ಹಿಗ್ಗಬಾರದು, ದುಃಖ ಬಂದಾಗ ಕುಗ್ಗಬಾರದು, ಸಮತೋಲನದ ಜೀವನ ನಡೆಸಬೇಕೆಂಬುವುದೇ ಯುಗಾದಿಯಲ್ಲಿ ಬೇವು-ಬೆಲ್ಲ ಸವಿಯುವುದರ ಹಿಂದಿನ ಅರ್ಥವಾಗಿದೆ.
ವೈಜ್ಞಾನಿಕವಾಗಿಯೂ ಬೇವು-ಬೆಲ್ಲ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಈ ದಿನ ರಂಗೋಲಿ ಹಾಕಿ, ಮನೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ, ಯುಗಾದಿ ಪಚಡಿ ತಯಾರಿಸಿ, ಹಬ್ಬದ ಅಡುಗೆ ಮಾಡಿ ಸಂತೋಷ, ಸಡಗರದಿಂದ ಆಚರಿಸಲಾಗುವುದು.
ಈ ಯುಗಾದಿ ನಿಮ್ಮೆಲ್ಲರ ಬಾಳಲ್ಲಿ ಹೊಸತನ್ನು ತರಲಿ, ನಿಮ್ಮ ಆಸೆ ಈಡೇರಲಿ, ಕನಸು ನನಸಾಗಲಿ, ಬಾಳು ಬಂಗಾರವಾಗಲಿ.



Click it and Unblock the Notifications