Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
Mesha Rashi Ugadi Bhavishya 2022 : ಯುಗಾದಿ ಪಂಚಾಂಗ 2022-23: ಹೇಗಿದೆ ಮೇಷ ರಾಶಿಯ ಭವಿಷ್ಯ?
ಹಿಂದೂಗಳಿಗೆ ಹೊಸ ವರ್ಷವೆಂದರೆ ಅದು ಯುಗಾದಿ, ಈ ದಿನದಿಂದ ಹೊಸ ಸಂವತ್ಸರ ಪ್ರಾರಂಭವಾಗುವುದು, ಹೊಸ ಸಂವತ್ಸರವನ್ನು ಬೇವು-ಬೆಲ್ಲ ಸವಿಯುತ್ತಾ ಸಡಗರ-ಸಂಭ್ರಮದಿಂದ ಸ್ವಾಗತಿಸುವುದೇ ಯುಗಾದಿ. ಈ ವರ್ಷ ಶ್ರೀ ಶುಭಕೃತ ನಾಮ ಸಂವತ್ಸರ.
ಈ ಹೊಸ ವರ್ಷದಲ್ಲಿ ಯುಗಾದಿ ಪಂಚಾಂಗ ಪ್ರಕಾರ ನಿಮ್ಮ ರಾಶಿ ಭವಿಷ್ಯ ಹೇಳಲಾಗುವುದು. ನಾವಿಲ್ಲಿ ಈ ಶುಭಕೃತ ನಾಮ ಸಂವತ್ಸರದಲ್ಲಿ ಮೇಷ ರಾಶಿಯ ಭವಿಷ್ಯ ಹೇಗಿರಲಿದೆ ಎಂದು ವಿವರವಾಗಿ ನೀಡಲಾಗಿದೆ ನೋಡಿ:

ಮೇಷ ರಾಶಿ
ಮೇಷ ರಾಶಿಯವರ ಅಧಿಪತಿ ಕುಜನಾಗಿದ್ದಾನೆ. ಈ ಸಂವತ್ಸರದಲ್ಲಿ ಮೇಷ ರಾಶಿಯವರ ಆರ್ಥಿಕ ಸ್ಥಿತಿಯನ್ನು ನೋಡುವುದಾದರೆ ಆದಯ 14 ಹಾಗೂ ವ್ಯಯ 14 ಇದೆ. ಅಂದರೆ ಎಷ್ಟು ಗಳಿಸುತ್ತಾರೋ ಅಷ್ಟೇ ಖರ್ಚಾಗುವುದು.
ಇವರ ರಾಜಭೋಗ 3 ಇದೆ, ಅವಮಾನ 6 ಇದೆ. ಹಾಗೆಯೇ ಅಶ್ವಿನಿ ನಾಲ್ಕು ಪಾದ, ಭರಣಿ ನಾಲ್ಕು ಪಾದ, ಕೃತಿಕಾ 1 ಪಾದ ಹೊಂದಿದೆ. ಇದರಿಂದಾಗಿ ಜೀವನ ಸಕಾರಾತ್ಮವಾಗಿರುತ್ತದೆ. ಅಲ್ಲದೆ ಏಪ್ರಿಲ್ 13ಕ್ಕೆ ಗುರು ಗ್ರಹದ ಸಂಚಾರವಿರುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಹೆಚ್ಚುವುದು.
ಅಲ್ಲದೆ ಶನಿಯ ಕೃಪೆ ಇರುವುದರಿಂದ ಈ ರಾಶಿಯವರು ತಮ್ಮ ವೃತ್ತಿಯಲ್ಲಿ ಯಶಸ್ಸು ಪಡೆಯುತ್ತಾರೆ. ಅಲ್ಲದೆ ಹೊಸ ಅವಕಾಶಗಳು ಕೂಡ ಹೆಚ್ಚಾಗಿ ಬರುವುದು.. 2022ರ ಮಧ್ಯಭಾಗದಲ್ಲಿ ಕೆಲವೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಉದ್ಯೋಗದಲ್ಲಿರುವವರೂ ಪ್ರಗತಿಯನ್ನು ಕಾಣುತ್ತಾರೆ.
ಮೇ ಮಧ್ಯ ಭಾಗದಿಂದ ಅಕ್ಟೋಬರ್ವರೆಗಿನ ಕಾಲಾವಧಿ ತುಂಬಾನೇ ಚೆನ್ನಾಗಿರುತ್ತದೆ. ನವೆಂಬರ್-ಡಿಸೆಂಬರ್ ನಿಮ್ಮ ವೇಗ ಸ್ವಲ್ಪಕಡಿಮೆಯಾದರೂ ನಂತರ ಸರಿ ಹೋಗುವುದು. ಯಾವುದೇ ಸಾಲ ವ್ಯವಹಾರ ಮಾಡಬೇಡಿ.
ವಿದ್ಯಾರ್ಥಿಗಳ ಪ್ರಾರಂಭದಲ್ಲಿ ಸ್ವಲ್ಪ ಅಡೆತಡೆ ಉಂಟಾದರೂ ನಂತರ ಒಳ್ಳೆಯ ಫಲ ಸಿಗಲಿದೆ. ವ್ಯಯ ಹೆಚ್ಚಾಗಿದ್ದರೂ ಆರ್ಥಿಕತೆಯಲ್ಲಿ ಸ್ಥಿರತೆ ಇರುತ್ತದೆ. ಏಪ್ರಿಲ್ನಲ್ಲಿ ಅನಿರೀಕ್ಷಿತ ಲಾಭ ಪಡೆಯಬಹುದು. ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ.
ಕೌಟಂಬಿಕ ಜೀವನದಲ್ಲಿ ಖುಷಿ-ಸಂತೋಷ ಇರುತ್ತದೆ. ಸಂತಾನ ಅಪೇಕ್ಷಿತ ದಂಪತಿ ಶುಭ ಸುದ್ದಿ ಪಡೆಯುವಿರಿ. ಯುವಕ-ಯುವತಿಯರಿಗೆ ಕಂಕಣ ಬಲ ಕೂಡಿ ಬರುವುದು. ಸಾಮಾಜಿಕವಲಯದಲ್ಲೂ ಒಳ್ಳೆಯ ಸ್ಥಾನಮಾನ ಪಡೆಯುತ್ತೀರಿ.
ಆರೋಗ್ಯ 1 ಅನಾರೋಗ್ಯ 6 ತೋರಿಸುತ್ತಿರುವುದರಿಂದ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಿ. ಯೋಗ, ಪ್ರಾಣಯಾಮ ನಿಮ್ಮ ದಿನಚರಿಯಲ್ಲಿದ್ದರೆ ಒಳ್ಳೆಯದು.
ನಿಮ್ಮ ಅದೃಷ್ಟದ ಬಣ್ಣ: ಕೆಂಪು
ಪರಿಹಾರ
ಶುಕ್ರ ಮೀನದಲ್ಲಿರುವಾಗ ಲಕ್ಷ್ಮಿ ಪೂಜೆ ಮಾಡಿದರೆ ಒಳ್ಳೆಯು.
ಪ್ರತಿನಿತ್ಯ ದಾಳಿಂಬೆ ಸೇವಿಸಿ
ಶನೇಶ್ವರ ಶಾಂತಿ, ಗುರು ಶಾಂತಿ ಮಾಡಿಸಿದರೆ ಒಳ್ಳೆಯದು.
ಈ ವರ್ಷ ವಾಹನ ಖರೀದಿಸುವ ಯೋಗವಿದೆ.



Click it and Unblock the Notifications