Latest Updates
-
ಬೇಸಿಗೆ ಬಿಸಿಲಿಗೆ ತಂಪಾಗಲು ವೈರಲ್ ಆಗುತ್ತಿರುವ ಫ್ಯಾಷನ್ ಟಿಪ್ಸ್ -
ಬಿಸಿಲ ಬೇಗೆಯಿಂದ ಪಾರಾಗಲು ನಿಮ್ಮ ಫಿಟ್ನೆಸ್ ರೂಟೀನ್ ಬದಲಿಸಿ -
ಹಬ್ಬದ ಫ್ಯಾಷನ್ ಟ್ರೆಂಡ್ಸ್: ಈ ಲುಕ್ ಟ್ರೈ ಮಾಡಿ ಮಿಂಚಿ -
ಬೆಳಗಿನ ವ್ಯಾಯಾಮ: ಬಿಸಿಲ ಧಗೆಯಿಂದ ಪಾರಾಗಲು ಹೀಗೆ ಮಾಡಿ -
ಬಿಸಿಲಿನ ತಾಪಕ್ಕೆ ದಾಂಪತ್ಯದಲ್ಲಿ ಜಗಳವೇ? ಈ ಟಿಪ್ಸ್ ಪಾಲಿಸಿ -
ದೆಹಲಿ ಬಿಸಿಲು: ಮನೆಯನ್ನು ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ -
ತೂಕ ಇಳಿಸುವ ಔಷಧಿಗಳ ಬೆಲೆ ಇಳಿಕೆ: ಬೊಜ್ಜು ನಿವಾರಣೆಗೆ ಹೊಸ ಭರವಸೆ -
ಎಸ್ಪಿಎಫ್ ಸ್ಟಿಕ್: ಬಿಸಿಲ ಬೇಗೆಯಿಂದ ಪಾರಾಗಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್: ಅಯೋಧ್ಯೆಯಲ್ಲಿ ಯೋಗದ ಅದ್ಭುತ ಕೌಶಲ ಪ್ರದರ್ಶನ -
ಗುಜರಾತ್ ಲಿವ್-ಇನ್ ಜೋಡಿಗಳೇ, ಈ ಹೊಸ ನಿಯಮ ಮಿಸ್ ಮಾಡ್ಬೇಡಿ!
Mithuna Rashi Ugadi Bhavishya 2022 :ಯುಗಾದಿ ಪಂಚಾಂಗ 2022-23: ಹೇಗಿದೆ ಮಿಥುನ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಮಿಥುನ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:
ಮಿಥುನ ರಾಶಿಯವರ ಅಧಿಪತಿ ಬುಧ. ಮೃಗಶಿರಾ ನಕ್ಷತ್ರ 3 ಮತ್ತು 4ನೇ ಪಾದ, ಆರಿದ್ರಾ ಹಾಗೂ ಪುನರ್ವಸು ನಕ್ಷತ್ರ1 ಮತ್ತು 2ನೇ ಪಾದ ಹೊಂದಿರುವವರು, ಇವರಿಗೆ ಆದಾಯ 11 ವ್ಯಯ 5 ಇದೆ. ಆದ್ದರಿಂದ ಆದಾಯ ನಿಮಗೆ ಈ ವರ್ಷ ತುಂಬಾ ಒಳ್ಳೆಯದಿದೆ. ಯೋಗ 2 ಹಾಗೂ ಅವಮಾನ 2 ಇದೆ.

ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಮಿಶ್ರಫಲ. ಈ ವರ್ಷ ಸ್ಪರ್ಧಿಗಳಿಂದ ಪ್ರಬಲ ಸ್ಪರ್ಧೆ ಎದುರಿಸುವಿರಿ.ಆದರೆ ಕಠಿಣ ಪರಿಶ್ರಮಕ್ಕೆ ಫಲ ಸಿಗುವುದು. ವ್ಯಾಪಾರ, ವಾಣಿಜ್ಯ, ಸಮುದ್ರಕ್ಕೆ ಸಂಬಂಧಿಸಿದ ವ್ಯಾಪಾರ ಹೊಂದಿರುವವರೆಗೆ ಒಳ್ಳೆಯದಾಗಲಿದೆ. ಚಿನ್ನ, ಬೆಳ್ಳಿ, ಕಬ್ಬಿಣ ವ್ಯಾಪಾರಿಗಳಿಗೆ ಒಳ್ಳೆಯದಾಗಲಿದೆ. ದ್ವಿತೀಯಾರ್ಧದಲ್ಲಿ ಒಳ್ಳೆಯದಾಗಲಿದೆ. ಆಸ್ತಿತಕರಾರು ಅನುಭವಿಸಬಹುದು. ವ್ಯವಸಾಯಿಗಳಿಗೆ ಲಾಭವಾಗಲಿದೆ.
ಈ ವರ್ಷ ವಿದ್ಯಾರ್ಥಿಗಳಿಗೆ ಶುಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಏಪ್ರಿಲ್ 2ನೇ ವಾರದಿಂದ ಫಲ ಸಿಗುವುದು.
ಕೌಟಂಬಿಕ ಜೀವನ ಚೆನ್ನಾಗಿರುತ್ತದೆ. ಮನೆಗೆ ಹೊಸ ವಸ್ತುಗಳನ್ನು ಖರೀದಿಸುವಿರಿ, ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಇನ್ನು ವ್ಯಾಪಾರ ಜೀವನದ ಬಗ್ಗೆ ನೋಡುವುದಾದರೆ ವ್ಯಾಪಾರಿಗಳಿಗೆ ಒಳ್ಳೆಯದಿದೆ. ಹೊಸ ವ್ಯಾಪಾರ ಪ್ರಾರಂಭಿಸಬಹುದು. ಯಾವುಾದರೂ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಅದರ ಬಗ್ಗೆ ಸಂಪೂರ್ಣ ತಿಳಿದುಕೊಂಡು ಹಾಕಿ. ವ್ಯಾಪಾರಿಗಳು ನಿರೀಕ್ಷಿತಗಿಂತ ಅಧಿಕ ಲಾಭ ಪಡೆಯಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ಗುರು ಬೆಂಬಲ ಚೆನ್ನಾಗಿದೆ.
ಉದ್ಯೋಗಿಗಳೂ ಪ್ರಗತಿಯನ್ನು ಕಾಣುತ್ತಾರೆ. ಈ ವರ್ಷ ಆಸ್ತಿ ಖರೀದಿಸುವ ಸಾಧ್ಯತೆ ಇದೆ.
ನವವಿವಾಹಿತರಿಗೆ ಸಂತಾನ ಭಾಗ್ಯವಿದೆ, ಮದುವೆ ವಯಸ್ಸಿನವರಿಗೆ ಕಂಕಣ ಬಲವಿದೆ.
ಈ ವರ್ಷ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು, ಒಳ್ಳೆಯ ಆಹಾರ ಸೇವಿಸಿ.
ಅದೃಷ್ಟದ ಬಣ್ಣ
ಮಾಣಿಕ್ಯ, ಪಚ್ಚೆ ಶುಭ ಹರಳುಗಳು,
ತಿಳಿ ಪಚ್ಚೆ ಶುಭ ಬಣ್ಣ
ಪರಿಹಾರ
ಶನೇಶ್ವರನ ಪೂಜಿಸಿ. ರಾಹು ಮತ್ತು ಕೇತು ದೋಷವಿರುವುದರಿಂದ ಬುಧವಾರದಂದು ರಾಹುಕಾಲದಲ್ಲಿ ಶಾಂತಿಯನ್ನು ಮಾಡಿಸಿ. ಅನಂತ ಪದ್ಮನಾಭನನ್ನು ಪೂಜಿಸಿ.



Click it and Unblock the Notifications











