Latest Updates
-
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ
Mithuna Rashi Ugadi Bhavishya 2022 :ಯುಗಾದಿ ಪಂಚಾಂಗ 2022-23: ಹೇಗಿದೆ ಮಿಥುನ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಮಿಥುನ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:
ಮಿಥುನ ರಾಶಿಯವರ ಅಧಿಪತಿ ಬುಧ. ಮೃಗಶಿರಾ ನಕ್ಷತ್ರ 3 ಮತ್ತು 4ನೇ ಪಾದ, ಆರಿದ್ರಾ ಹಾಗೂ ಪುನರ್ವಸು ನಕ್ಷತ್ರ1 ಮತ್ತು 2ನೇ ಪಾದ ಹೊಂದಿರುವವರು, ಇವರಿಗೆ ಆದಾಯ 11 ವ್ಯಯ 5 ಇದೆ. ಆದ್ದರಿಂದ ಆದಾಯ ನಿಮಗೆ ಈ ವರ್ಷ ತುಂಬಾ ಒಳ್ಳೆಯದಿದೆ. ಯೋಗ 2 ಹಾಗೂ ಅವಮಾನ 2 ಇದೆ.

ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಮಿಶ್ರಫಲ. ಈ ವರ್ಷ ಸ್ಪರ್ಧಿಗಳಿಂದ ಪ್ರಬಲ ಸ್ಪರ್ಧೆ ಎದುರಿಸುವಿರಿ.ಆದರೆ ಕಠಿಣ ಪರಿಶ್ರಮಕ್ಕೆ ಫಲ ಸಿಗುವುದು. ವ್ಯಾಪಾರ, ವಾಣಿಜ್ಯ, ಸಮುದ್ರಕ್ಕೆ ಸಂಬಂಧಿಸಿದ ವ್ಯಾಪಾರ ಹೊಂದಿರುವವರೆಗೆ ಒಳ್ಳೆಯದಾಗಲಿದೆ. ಚಿನ್ನ, ಬೆಳ್ಳಿ, ಕಬ್ಬಿಣ ವ್ಯಾಪಾರಿಗಳಿಗೆ ಒಳ್ಳೆಯದಾಗಲಿದೆ. ದ್ವಿತೀಯಾರ್ಧದಲ್ಲಿ ಒಳ್ಳೆಯದಾಗಲಿದೆ. ಆಸ್ತಿತಕರಾರು ಅನುಭವಿಸಬಹುದು. ವ್ಯವಸಾಯಿಗಳಿಗೆ ಲಾಭವಾಗಲಿದೆ.
ಈ ವರ್ಷ ವಿದ್ಯಾರ್ಥಿಗಳಿಗೆ ಶುಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಏಪ್ರಿಲ್ 2ನೇ ವಾರದಿಂದ ಫಲ ಸಿಗುವುದು.
ಕೌಟಂಬಿಕ ಜೀವನ ಚೆನ್ನಾಗಿರುತ್ತದೆ. ಮನೆಗೆ ಹೊಸ ವಸ್ತುಗಳನ್ನು ಖರೀದಿಸುವಿರಿ, ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಇನ್ನು ವ್ಯಾಪಾರ ಜೀವನದ ಬಗ್ಗೆ ನೋಡುವುದಾದರೆ ವ್ಯಾಪಾರಿಗಳಿಗೆ ಒಳ್ಳೆಯದಿದೆ. ಹೊಸ ವ್ಯಾಪಾರ ಪ್ರಾರಂಭಿಸಬಹುದು. ಯಾವುಾದರೂ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಅದರ ಬಗ್ಗೆ ಸಂಪೂರ್ಣ ತಿಳಿದುಕೊಂಡು ಹಾಕಿ. ವ್ಯಾಪಾರಿಗಳು ನಿರೀಕ್ಷಿತಗಿಂತ ಅಧಿಕ ಲಾಭ ಪಡೆಯಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ಗುರು ಬೆಂಬಲ ಚೆನ್ನಾಗಿದೆ.
ಉದ್ಯೋಗಿಗಳೂ ಪ್ರಗತಿಯನ್ನು ಕಾಣುತ್ತಾರೆ. ಈ ವರ್ಷ ಆಸ್ತಿ ಖರೀದಿಸುವ ಸಾಧ್ಯತೆ ಇದೆ.
ನವವಿವಾಹಿತರಿಗೆ ಸಂತಾನ ಭಾಗ್ಯವಿದೆ, ಮದುವೆ ವಯಸ್ಸಿನವರಿಗೆ ಕಂಕಣ ಬಲವಿದೆ.
ಈ ವರ್ಷ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು, ಒಳ್ಳೆಯ ಆಹಾರ ಸೇವಿಸಿ.
ಅದೃಷ್ಟದ ಬಣ್ಣ
ಮಾಣಿಕ್ಯ, ಪಚ್ಚೆ ಶುಭ ಹರಳುಗಳು,
ತಿಳಿ ಪಚ್ಚೆ ಶುಭ ಬಣ್ಣ
ಪರಿಹಾರ
ಶನೇಶ್ವರನ ಪೂಜಿಸಿ. ರಾಹು ಮತ್ತು ಕೇತು ದೋಷವಿರುವುದರಿಂದ ಬುಧವಾರದಂದು ರಾಹುಕಾಲದಲ್ಲಿ ಶಾಂತಿಯನ್ನು ಮಾಡಿಸಿ. ಅನಂತ ಪದ್ಮನಾಭನನ್ನು ಪೂಜಿಸಿ.



Click it and Unblock the Notifications











