Latest Updates
-
ಮಂಗಳ ಗೌರಿ ವ್ರತದ ದಿನ ದಂಪತಿಗಳ ನಡುವೆ ಕಿರಿಕಿರಿ ಬೇಡ: ಪ್ರೀತಿ ಹೆಚ್ಚಿಸಲು ಇಲ್ಲಿದೆ ಬೆಸ್ಟ್ ಟಿಪ್ಸ್ -
ನ್ಯಾಷನಲ್ ಕಪಲ್ಸ್ ಡೇ: ಪ್ರೀತಿಯ ಸಂಭ್ರಮದ ಜೊತೆಗೆ ಡಿಜಿಟಲ್ ಪ್ರೈವೆಸಿ ಮತ್ತು ರೊಮ್ಯಾಂಟಿಕ್ ಡೇಟ್ ಐಡಿಯಾಗಳು -
ವರಮಹಾಲಕ್ಷ್ಮಿ ಹಬ್ಬದ ಸೌಂದರ್ಯಕ್ಕೆ ಸಾಂಪ್ರದಾಯಿಕ ಆಭರಣಗಳ ಮೆರುಗು: ಈ ಬಾರಿಯ ಫ್ಯಾಷನ್ ಟ್ರೆಂಡ್ಸ್ -
ಅಪಾರ್ಟ್ಮೆಂಟ್ನಲ್ಲಿ ಓಣಂ ಸಂಭ್ರಮ: ಮಳೆಗೆ ಹಾಳಾಗದ, ಬಜೆಟ್ ಸ್ನೇಹಿ ಪೂಕಳಂಗೆ ಇಲ್ಲಿದೆ ಸೂಪರ್ ಟಿಪ್ಸ್! -
ವಿಶ್ವ ಛಾಯಾಗ್ರಹಣ ದಿನ: ಮನೆಯಲ್ಲೇ ಫೋಟೋ ಸ್ಟುಡಿಯೋ ಮಾಡಿ, ನಿಮ್ಮ ಗಿಡಗಳ ಫೋಟೋ ವೈರಲ್ ಆಗುವಂತೆ ಕ್ಲಿಕ್ ಮಾಡಿ! -
98% ಅಂಕ ಪಡೆದರೂ ಅಂಗಡಿ ಬಂದ್: FDAಗೆ ಹೈಕೋರ್ಟ್ ತರಾಟೆ, ಕಲಬೆರಕೆ ಸಿಹಿ ಪತ್ತೆಹಚ್ಚುವುದು ಹೇಗೆ? -
BWF ವಿಶ್ವ ಚಾಂಪಿಯನ್ಷಿಪ್ 2026: ಲಕ್ಷ್ಯ ಸೇನ್ ಅಬ್ಬರಕ್ಕೆ ದೆಹಲಿ ಸಜ್ಜು, ಲೈವ್ ಮಿಸ್ ಮಾಡ್ಬೇಡಿ! -
ವಿಶ್ವ ಹಿರಿಯ ನಾಗರಿಕರ ದಿನ: ಪೋಷಕರ ಆರೋಗ್ಯ ಮತ್ತು ಸಮತೋಲನ ಹೆಚ್ಚಿಸುವ ಸರಳ ಬೆಳಗಿನ ವ್ಯಾಯಾಮಗಳು -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಪ್ಪಿಸಲು ಇಲ್ಲಿದೆ 12 ನಿಮಿಷದ ಸೂತ್ರ! -
ಸಿಂಹ ಸಂಕ್ರಾಂತಿ ಹಬ್ಬದ ಸಂಭ್ರಮ: ದಂಪತಿಗಳ ನಡುವಿನ ಜಗಳ ತಡೆಯಲು ಈ 'ಕಪಲ್ ಸ್ಕ್ರಿಪ್ಟ್ಸ್' ಬಳಸಿ!
Mithuna Rashi Ugadi Bhavishya 2022 :ಯುಗಾದಿ ಪಂಚಾಂಗ 2022-23: ಹೇಗಿದೆ ಮಿಥುನ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಮಿಥುನ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:
ಮಿಥುನ ರಾಶಿಯವರ ಅಧಿಪತಿ ಬುಧ. ಮೃಗಶಿರಾ ನಕ್ಷತ್ರ 3 ಮತ್ತು 4ನೇ ಪಾದ, ಆರಿದ್ರಾ ಹಾಗೂ ಪುನರ್ವಸು ನಕ್ಷತ್ರ1 ಮತ್ತು 2ನೇ ಪಾದ ಹೊಂದಿರುವವರು, ಇವರಿಗೆ ಆದಾಯ 11 ವ್ಯಯ 5 ಇದೆ. ಆದ್ದರಿಂದ ಆದಾಯ ನಿಮಗೆ ಈ ವರ್ಷ ತುಂಬಾ ಒಳ್ಳೆಯದಿದೆ. ಯೋಗ 2 ಹಾಗೂ ಅವಮಾನ 2 ಇದೆ.

ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಮಿಶ್ರಫಲ. ಈ ವರ್ಷ ಸ್ಪರ್ಧಿಗಳಿಂದ ಪ್ರಬಲ ಸ್ಪರ್ಧೆ ಎದುರಿಸುವಿರಿ.ಆದರೆ ಕಠಿಣ ಪರಿಶ್ರಮಕ್ಕೆ ಫಲ ಸಿಗುವುದು. ವ್ಯಾಪಾರ, ವಾಣಿಜ್ಯ, ಸಮುದ್ರಕ್ಕೆ ಸಂಬಂಧಿಸಿದ ವ್ಯಾಪಾರ ಹೊಂದಿರುವವರೆಗೆ ಒಳ್ಳೆಯದಾಗಲಿದೆ. ಚಿನ್ನ, ಬೆಳ್ಳಿ, ಕಬ್ಬಿಣ ವ್ಯಾಪಾರಿಗಳಿಗೆ ಒಳ್ಳೆಯದಾಗಲಿದೆ. ದ್ವಿತೀಯಾರ್ಧದಲ್ಲಿ ಒಳ್ಳೆಯದಾಗಲಿದೆ. ಆಸ್ತಿತಕರಾರು ಅನುಭವಿಸಬಹುದು. ವ್ಯವಸಾಯಿಗಳಿಗೆ ಲಾಭವಾಗಲಿದೆ.
ಈ ವರ್ಷ ವಿದ್ಯಾರ್ಥಿಗಳಿಗೆ ಶುಭವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವವರಿಗೆ ಏಪ್ರಿಲ್ 2ನೇ ವಾರದಿಂದ ಫಲ ಸಿಗುವುದು.
ಕೌಟಂಬಿಕ ಜೀವನ ಚೆನ್ನಾಗಿರುತ್ತದೆ. ಮನೆಗೆ ಹೊಸ ವಸ್ತುಗಳನ್ನು ಖರೀದಿಸುವಿರಿ, ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಇನ್ನು ವ್ಯಾಪಾರ ಜೀವನದ ಬಗ್ಗೆ ನೋಡುವುದಾದರೆ ವ್ಯಾಪಾರಿಗಳಿಗೆ ಒಳ್ಳೆಯದಿದೆ. ಹೊಸ ವ್ಯಾಪಾರ ಪ್ರಾರಂಭಿಸಬಹುದು. ಯಾವುಾದರೂ ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಅದರ ಬಗ್ಗೆ ಸಂಪೂರ್ಣ ತಿಳಿದುಕೊಂಡು ಹಾಕಿ. ವ್ಯಾಪಾರಿಗಳು ನಿರೀಕ್ಷಿತಗಿಂತ ಅಧಿಕ ಲಾಭ ಪಡೆಯಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ಗುರು ಬೆಂಬಲ ಚೆನ್ನಾಗಿದೆ.
ಉದ್ಯೋಗಿಗಳೂ ಪ್ರಗತಿಯನ್ನು ಕಾಣುತ್ತಾರೆ. ಈ ವರ್ಷ ಆಸ್ತಿ ಖರೀದಿಸುವ ಸಾಧ್ಯತೆ ಇದೆ.
ನವವಿವಾಹಿತರಿಗೆ ಸಂತಾನ ಭಾಗ್ಯವಿದೆ, ಮದುವೆ ವಯಸ್ಸಿನವರಿಗೆ ಕಂಕಣ ಬಲವಿದೆ.
ಈ ವರ್ಷ ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿರಬಹುದು, ಒಳ್ಳೆಯ ಆಹಾರ ಸೇವಿಸಿ.
ಅದೃಷ್ಟದ ಬಣ್ಣ
ಮಾಣಿಕ್ಯ, ಪಚ್ಚೆ ಶುಭ ಹರಳುಗಳು,
ತಿಳಿ ಪಚ್ಚೆ ಶುಭ ಬಣ್ಣ
ಪರಿಹಾರ
ಶನೇಶ್ವರನ ಪೂಜಿಸಿ. ರಾಹು ಮತ್ತು ಕೇತು ದೋಷವಿರುವುದರಿಂದ ಬುಧವಾರದಂದು ರಾಹುಕಾಲದಲ್ಲಿ ಶಾಂತಿಯನ್ನು ಮಾಡಿಸಿ. ಅನಂತ ಪದ್ಮನಾಭನನ್ನು ಪೂಜಿಸಿ.



Click it and Unblock the Notifications