Latest Updates
-
ಮುಂಬೈ ಜನರೇ ಎಚ್ಚರ! ಜೂನ್ 18-19ರಂದು ಭಾರಿ ಹೈ-ಟೈಡ್ ಭೀತಿ: ಪ್ರವಾಹದಿಂದ ಪಾರಾಗಲು ಈ ಮುನ್ನೆಚ್ಚರಿಕೆ ಮರೆಯದಿರಿ -
ಮಳೆಗಾಲದ ಎಚ್ಚರಿಕೆ: ಟೈಫಾಯಿಡ್ ಮತ್ತು ಸೋಂಕಿನಿಂದ ಪಾರಾಗಲು ನಿಮ್ಮ ಆಹಾರ ಕ್ರಮ ಹೀಗಿರಲಿ -
ಯುಜಿಸಿ ನೆಟ್ 2026 ಪ್ರವೇಶ ಪತ್ರ ಬಿಡುಗಡೆ: ಪರೀಕ್ಷಾ ಕೇಂದ್ರಕ್ಕೆ ತೆರಳುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಸಿಡಿಲು-ಮಳೆಯ ಎಚ್ಚರಿಕೆ: ಹೊರಗೆ ಹೋಗುವ ಸಾಹಸ ಬೇಡ, ಮನೆಯಲ್ಲೇ ಫಿಟ್ ಆಗಿರಲು ಈ ಟಿಪ್ಸ್ ಫಾಲೋ ಮಾಡಿ! -
ನೀಟ್ ಮರುಪರೀಕ್ಷೆ: ಅಡ್ಮಿಟ್ ಕಾರ್ಡ್ ಬಿಡುಗಡೆ, ಪರೀಕ್ಷೆಗೆ ಹೋಗುವ ಮುನ್ನ ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಮಾಡಬೇಕಾದ ಕೆಲಸಗಳಿವು! -
ಮಳೆಗಾಲದ ಅಬ್ಬರಕ್ಕೆ ನಿಮ್ಮ ಮನೆ ಸಿದ್ಧವೇ? ಸೋರಿಕೆ ಮತ್ತು ಹಾನಿ ತಪ್ಪಿಸಲು ಈ ಸರಳ ಟಿಪ್ಸ್ ಪಾಲಿಸಿ -
ಸುಡುವ ಬಿಸಿಲಿಗೆ ಹವಾಮಾನ ಇಲಾಖೆ ಎಚ್ಚರಿಕೆ: ದೇಹ ತಂಪಾಗಿಡಲು ಈ ಪಾನೀಯಗಳೇ ರಾಮಬಾಣ! -
ಲಕ್ನೋದಲ್ಲಿ ಭಾರತ-ಅಫ್ಘಾನಿಸ್ತಾನ ಹೈ-ವೋಲ್ಟೇಜ್ ಕದನ: ಪಂದ್ಯದ ಮಜಾ ಸವಿಯಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಮಳೆಗಾಲದ ಯೋಗ ದಿನಾಚರಣೆ: ಮೈದಾನದಲ್ಲಿ ಯೋಗ ಮಾಡಲು ಸಿದ್ಧರಿದ್ದೀರಾ? ಇಲ್ಲಿದೆ ಅಗತ್ಯ ಮುನ್ನೆಚ್ಚರಿಕೆಗಳು! -
ಟೆಲಿಗ್ರಾಮ್ ಬಳಕೆದಾರರೇ ಎಚ್ಚರ: ಜೂನ್ 16 ರಿಂದ 22 ರವರೆಗೆ ಸೇವೆ ಸ್ಥಗಿತ, ಪರ್ಯಾಯ ಮಾರ್ಗಗಳೇನು?
Simha Rashi Ugadi Bhavishya 2022 : ಯುಗಾದಿ ಪಂಚಾಂಗ 2022-23: ಹೇಗಿದೆ ಸಿಂಹ ರಾಶಿಯ ಭವಿಷ್ಯ?
ಯುಗಾದಿ ಎಂದರೆ ಹೊಸ ಸಂವತ್ಸರ, ಯುಗಾದಿ ಪಂಚಾಂಗ ಪ್ರಕಾರ ದ್ವಾದಶಗಳ ರಾಶಿಫಲ ಹೇಳಲಾಗುವುದು. ನಾವು ಪ್ರತೀ ರಾಶಿಯ ವಾರ್ಷಿಕ ರಾಶಿಫಲ ವಿವರವಾಗಿ ನೀಡಿದ್ದೇವೆ. ಇಲ್ಲಿ ಸಿಂಹ ರಾಶಿಯವರ ಉದ್ಯೋಗ, ವ್ಯಾಪಾರ, ಕುಟುಂಬ, ಶಿಕ್ಷಣ, ಆರೋಗ್ಯ ಯುಗಾದಿ ಪಂಚಾಂಗ ಪ್ರಕಾರ ಹೇಗಿರಲಿದೆ ಎಂದು ಹೇಳಲಾಗಿದೆ ನೋಡಿ:

ಸಿಂಹ ರಾಶಿಯವರ ಅಧಿಪತಿ ಸೂರ್ಯ. ಮಖ ನಕ್ಷತ್ರ 1, 2, 3 ಮತ್ತು 4ನೇ ಪಾದ, ಪುಬ್ಬಾ 1, 2, 3, 4 ಪಾದ ಹಾಗೂ ಉತ್ತರಾ ನಕ್ಷತ್ರ1 ಪಾದಗಳಲ್ಲಿದೆ. ಇವರಿಗೆ ಆದಾಯ 8 ವ್ಯಯ 14 ಇದೆ. ಆದ್ದರಿಂದ ಆದಾಯಕ್ಕಿಂತ ಖರ್ಚೇ ಜಾಸ್ತಿ ನಿಮಗೆ ಈ ವರ್ಷ ಇರಲಿದೆ. ಯೋಗ 1 ಹಾಗೂ ಅವಮಾನ 5 ಇದೆ.
ಯುಗಾದಿ ಪಂಚಾಂಗ ಪ್ರಕಾರ ಈ ವರ್ಷ ಉತ್ತಮ ಫಲ ದೊರೆಯಲಿವೆ. ಶುಭ ಫಲಿತಾಂಶಗಳ ಜೊತೆಗೆ ಸಣ್ಣ ಪುಟ್ಟ ಸಮಸ್ಯೆಗಳು ಎದುರಾಗಬಹುದು. ನಿಮ್ಮ ಔದ್ಯೋಗಿಕ ಜೀವನದ ಬಗ್ಗೆ ಹೇಳುವುದಾದರೆ, ಉದ್ಯೋಗಿಗಳಿಗೆ ಬಹಳ ಒಳ್ಳೆಯ ಫಲ ಸಿಗಲಿದೆ. ಯುಗಾದಿ ನಂತರ, ಪ್ರಮೋಷನ್ ಅಥವಾ ಮೇಲಾಧಿಕಾರಿಗಳಿಂದ ಮನ್ನಣೆ ಸಿಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬದಲಾವಣೆ ಬಯಸುತ್ತಿರುವವರಿಗೆ ಸಕಾರಾತ್ಮಕ ಫಲಿತಾಂಶ ದೊರೆಯಲಿವೆ. ದ್ವಿತೀಯಾರ್ಧದಲ್ಲಿ ಬಾಕಿ ಉಳಿದಂತ ಕೆಲಸಗಳು ಪೂರ್ಣಗೊಳ್ಳುತ್ತವೆ. ಈ ಮೂಲಕ ನಿಮಗೆ ಹೆಚ್ಚು ಲಾಭ ಬರುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೂ ಉತ್ತಮ ಕಾಲ.
ಈ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳು ಸ್ವಲ್ಪ ಎಚ್ಚರಿಕೆಯಿಂದರಬೇಕು. ಗ್ರಹಗಳ ಸ್ಥಾನ ಬದಲಾವಣೆಯಿಂದ ಮನಸ್ಸನ್ನು ಕೇಂದ್ರಿಕರೀಸಲು ಸಾಧ್ಯವಾಗುವುದಿಲ್ಲ. ಇದು ಪರೀಕ್ಷೆಯ ಮೇಲೆ ಪ್ರಭಾವ ಬೀರಬಹುದು. ಆದರೆ, ಏಪ್ರಿಲ್ ಕೊನೆಯ ವಾರದಲ್ಲಿ ಅದೃಷ್ಟ ನಿಮ್ಮ ಪರವಾಗಿರಲಿದೆ. ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಉತ್ತಮ ಸಮಯ. ಸ್ಪರ್ಧಾತ್ಮ ಪರೀಕ್ಷೆ ತಯಾರಿ ನಡೆಸುತ್ತಿರುವವರಿಗೆ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ.
ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಆದರೆ, ಸಂಗಾತಿಯ ಆರೋಗ್ಯ ಏರುಪೇರಾಗಬಹುದು. ಇದರಿಂದ ಒತ್ತಡವೂ ಹೆಚ್ಚಾಗಬಹುದು. ಜೊತೆಗೆ ಸಂಬಂಧದಲ್ಲಿ ಇರುವ ಎಲ್ಲಾ ಮನಸ್ಥಾಪಗಳು ವರ್ಷದ ಅಂತ್ಯದಲ್ಲಿ ಪರಿಹಾರವಾಗುತ್ತವೆ. ಕೌಟಂಬಿಕ ಜೀವನ ಉತ್ತಮವಾಗಿರುತ್ತದೆ. ಮನೆಯಲ್ಲಿ ಶುಭ ಕಾರ್ಯ ನಡೆಯುವುದು.
ಆರೋಗ್ಯದ ಬಗ್ಗೆ ಹೇಳುವುದಾದರೆ, ಉತ್ತಮವಾಗಿರುತ್ತದೆ. ಆದರೆ, ರಾಹುವಿನ ಸ್ಥಾನ ಬದಲಾವಣೆಯಿಂದ ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಒಟ್ಟಾರೆಯಾಗಿ ಹೇಳುವುದಾದರೆ ಈ ವರ್ಷ ನಿಮ್ಮ ಭವಿಷ್ಯ ಚೆನ್ನಾಗಿದ್ದು, ಸಣ್ಣ ಸಣ್ಣ ಸಮಸ್ಯೆಗಳು ಎದುರಾಗಲಿವೆ.
ಅದೃಷ್ಟ ಸಂಖ್ಯೆ -2
ಪರಿಹಾರ:
ರತ್ನಪುಷ್ಪಗಳನ್ನು ಸುರಿಸುವ ಮೂಲಕ ಸೂರ್ಯನಿಗೆ ನೀರನ್ನು ಅರ್ಪಿಸಿ.



Click it and Unblock the Notifications