Latest Updates
-
ಐಟಿಆರ್ ಗಡುವು ಮಿಸ್ ಆಯ್ತಾ? ದಂಡ ತಪ್ಪಿಸಲು ಈಗಲೇ ಈ ಕೆಲಸ ಮಾಡಿ, ಆರ್ಥಿಕ ನಷ್ಟದಿಂದ ಪಾರಾಗಿ! -
ಕರ್ನಾಟಕದಲ್ಲಿ ಭಾರಿ ಮಳೆ: ನಿಮ್ಮ ಮನೆ ಮತ್ತು ಕುಟುಂಬವನ್ನು ಸುರಕ್ಷಿತವಾಗಿಡಲು ಇಂದೇ ಈ ಕೆಲಸ ಮಾಡಿ! -
ಪೀನಟ್ ಬಟರ್ನಲ್ಲಿ ವಿಷಕಾರಿ ಶಿಲೀಂಧ್ರ? ನಿಮ್ಮ ಆರೋಗ್ಯ ಕಾಪಾಡಲು ಈ ವಿಷಯಗಳನ್ನು ಮರೆಯದಿರಿ -
ಫ್ರೆಂಡ್ಶಿಪ್ ಡೇ: ಕೊನೆಯ ನಿಮಿಷದಲ್ಲಿ ಸ್ನೇಹಿತರಿಗೆ ನೀಡಲು 499 ರೂ. ಒಳಗಿನ ಬೆಸ್ಟ್ ಗಿಫ್ಟ್ ಐಡಿಯಾಗಳು! -
CWG 2026: ಗಂಟೆಗಟ್ಟಲೆ ಟಿವಿ ಮುಂದೆ ಕುಳಿತು ಪಂದ್ಯ ನೋಡುವಿರಾ? ಈ 8 ನಿಮಿಷದ ವರ್ಕೌಟ್ ಮಿಸ್ ಮಾಡ್ಬೇಡಿ! -
ಶ್ರಾವಣ ಮಾಸದ ಉಪವಾಸ: ದಂಪತಿಗಳೇ, ಹಬ್ಬದ ಆಚರಣೆಯಲ್ಲಿ ಗೊಂದಲ ಬೇಡ, ಈ ಟಿಪ್ಸ್ ಫಾಲೋ ಮಾಡಿ! -
ಬೆಂಗಳೂರಿನಲ್ಲಿ ಹೊಸ ನಿಯಮ: ಆಗಸ್ಟ್ 15ರೊಳಗೆ ನಿಮ್ಮ ಮನೆ ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರಿ ದಂಡ! -
ಎನರ್ಜಿ ಡ್ರಿಂಕ್ಸ್ ಪ್ರಿಯರೇ ಎಚ್ಚರ! FSSAI ಹೊಸ ನಿಯಮದ ಹಿಂದಿನ ಅಸಲಿ ಸತ್ಯವೇನು? -
ಭಾರತದ ಆಕಾಶದಲ್ಲಿ ಬೆಂಕಿಯ ಉಂಡೆಗಳ ಸಂಭ್ರಮ: ಈ ಅದ್ಭುತ ಉಲ್ಕಾಪಾತವನ್ನು ಮಿಸ್ ಮಾಡ್ಬೇಡಿ! -
ಶ್ವಾಸಕೋಶದ ಆರೋಗ್ಯಕ್ಕೆ 7 ನಿಮಿಷದ ಬೆಳಗಿನ ಅಭ್ಯಾಸ: ಕಲುಷಿತ ಗಾಳಿಯಿಂದ ರಕ್ಷಣೆ ಪಡೆಯುವುದು ಹೇಗೆ?
Vrushabha Rashi Ugadi Bhavishya 2022 : ಯುಗಾದಿ ಪಂಚಾಂಗ: ವೃಷಭ ರಾಶಿಯವರಿಗೆ ಹೊಸ ಸಂವತ್ಸರ ಹೇಗಿರಲಿದೆ?
ಹಿಂದೂಗಳಿಗೆ ಹೊಸ ವರ್ಷವೆಂದರೆ ಅದು ಯುಗಾದಿ, ಈ ದಿನದಿಂದ ಹೊಸ ಸಂವತ್ಸರ ಪ್ರಾರಂಭವಾಗುವುದು, ಹೊಸ ಸಂವತ್ಸರವನ್ನು ಬೇವು-ಬೆಲ್ಲ ಸವಿಯುತ್ತಾ ಸಡಗರ-ಸಂಭ್ರಮದಿಂದ ಸ್ವಾಗತಿಸುವುದೇ ಯುಗಾದಿ. ಈ ವರ್ಷ ಶ್ರೀ ಶುಭಕೃತ ನಾಮ ಸಂವತ್ಸರ.

ಈ ಹೊಸ ವರ್ಷದಲ್ಲಿ ಯುಗಾದಿ ಪಂಚಾಂಗ ಪ್ರಕಾರ ನಿಮ್ಮ ರಾಶಿ ಭವಿಷ್ಯ ಹೇಳಲಾಗುವುದು. ನಾವಿಲ್ಲಿಈ ಶುಭಕೃತ ನಾಮ ಸಂವತ್ಸರದಲ್ಲಿ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಎಂದು ವಿವರವಾಗಿ ನೀಡಲಾಗಿದೆ ನೋಡಿ:
ವೃಷಭ ರಾಶಿ
ವೃಷಭ ರಾಶಿಯ ಅಧಿಪತಿ ಶುಕ್ರ. ಯುಗಾದಿ ಪಂಚಾಂಗ ಪ್ರಕಾರ ನಿಮಗೆ ಆದಾಯ 8 ಇದ್ದರೆ ವ್ಯಯ ಕೂಡ 8 ಇರುತ್ತದೆ, ಅಂದರೆ ಗಳಿಸಿದ್ದು ಹಾಗೆಯೇ ಖರ್ಚಾಗುವುದು, ಇನ್ನು ಯೋಗ 6 ಇದ್ದರೆ ಅವಮಾನ 6 ಇದೆ.
ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರ 2, 3, 4ನೇ ಪಾದ, ರೋಹಿಣಿ ನಕ್ಷತ್ರ 4 ಪಾದ, ಮೃಗಶಿರ ನಕ್ಷತ್ರ 1 ಮತ್ತು 2ನೇ ಪಾದದಲ್ಲಿದೆ.
ಈ ವರ್ಷ ಆದಾಯ ಚೆನ್ನಾಗಿರುತ್ತದೆ, ಹಣ ಲಾಭ ಪಡೆಯುವಿರಿ, ವೃತ್ತಿಯಲ್ಲಿ ಪ್ರಗತಿ ಪಡೆಯುವಿರಿ. ಗುರು 11ನೇ ಮನೆಯಲ್ಲಿ ಇರುವುದರಿಂದ ಉದ್ಯೋಗಸ್ಥರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಕಳೆದ ವರ್ಷಕ್ಕಿಂತ ಚೆನ್ನಾಗಿ ಆದಾಯ ಗಳಿಸಲು ಸಾಧ್ಯವಾಗುವುದು. ಅಲ್ಲದೆ 9ನೇ ಮನೆಯಲ್ಲಿ ಶನಿ ಸಾಗುವುದರಿಂದ ನಿಮಗೇ ತುಂಬಾನೇ ಒಳ್ಳೆಯದು ಆಗಲಿದೆ.
ವಿದೇಶದಲ್ಲಿ ಕಲಿಯ ಬಯಸುವ ವಿದ್ಯಾರ್ಥಿಗಳಿಗೆ ಅವಕಾಶ ಸಿಗುವುದು. ಸ್ಪರ್ಧಾತ್ಮಾಕ ಪರೀಕ್ಷೆಗೆ ಸಿದ್ಧತೆ ಮಾಡುತ್ತಿದ್ದರೆ ಒಳ್ಳೆಯ ಫಲಿತಾಂಶ ಸಿಗಲಿದೆ. ಹೆಣ್ಣು ಮಕ್ಕಳು ಉನ್ನತಿಯನ್ನು ಕಾಣುವಿರಿ, ಹೂಡಿಕೆ ಮಾಡುವವರಿಗೂ ಒಳ್ಳೆಯದಾಗಲಿದೆ. ಲಾಭದ ಸ್ಥಾನದಲ್ಲಿ ಗುರು ಇರುವುದರಿಂದ ಒಳ್ಳೆಯದಾಗಲಿದೆ.
ಈ ವರ್ಷ ಮಧ್ಯದಲ್ಲಿ ಗುರುವಿನ ಸ್ಥಾನ ಬದಲಾವಣೆಯನ್ನು ಆಸ್ತಿ ಖರೀದಿಸುವ ಸಾಧ್ಯತೆ ಇದೆ ಅಥವಾ ಹಿರಿಯರ ಪಾಲು ದೊರೆಯಬಹುದು. ಪಿತೃಕರ್ಮ ತಪ್ಪದೆ ಮಾಡಿ. ರಾಹು ಹನ್ನೆರಡನೇಯ ಮನೆಯಲ್ಲಿರುವುದರಿಂದ ಒಳ್ಳೆಯದು, ಆದರೆ ಕೇತು 6 ನೇ ಮನೆಯಲ್ಲಿ ಇರುವುದರಿಂದ ಶತ್ರುವಿನ ಭಾದೆ ಇರಬಹುದು. ಅವರ ಬಗ್ಗೆ ಜಾಗ್ರತೆ.
ಮನೆಯಲ್ಲಿ ಶುಭ ಕಾರ್ಯಗಳಿಗೆ ಖರ್ಚು ಮಾಡುವಿರಿ. ಸೆಪ್ಟೆಂಬರ್ನಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬಲವಾಗುವುದು. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಲಿದೆ. ಮದುವೆ ವಯಸ್ಸಿನಲ್ಲಿ ಇರುವವರಿಗೆ ಕಂಕಣ ಬಲ ಕೂಡಿ ಬರಲಿದೆ.
ಆರೋಗ್ಯದ ಬಗ್ಗೆ ಹೇಳುವುದಾದರೆ ಈ ವರ್ಷ ಅಂಥ ಯಾವುದೇ ದೊಡ್ಡ ತೊಂದರೆಯಿಲ್ಲ, ಆರೋಗ್ಯಕರ ಆಹಾರ ಸೇವನೆ ಒಳ್ಳೆಯದು.
ಅದೃಷ್ಟದ ಬಣ್ಣ: ಬಿಳಿ
ಪರಿಹಾರ:
ಗುರುವಾರ ಗುರುವಿನ ಆರಾಧನೆ, ಶನಿವಾರ ಶನೇಶ್ವರನ ಆರಾಧನೆ ಮಾಡಿ
7 ಮಂಗಳವಾರ ದುರ್ಗೆಯನ್ನು ಪೂಜಿಸಿ.



Click it and Unblock the Notifications