Latest Updates
-
₹1,000 ಕ್ಕಿಂತ ಕಡಿಮೆ ಬಜೆಟ್ನಲ್ಲಿ ಮನೆಗೆ ಹೊಸ ಲುಕ್: ಬಿದಿರಿನ ಅಲಂಕಾರಿಕ ವಸ್ತುಗಳ ಮ್ಯಾಜಿಕ್! -
ನೆಸ್ಲೆ ಶಿಶು ಆಹಾರದ ಮೇಲೆ FSSAI ಕಣ್ಣು: ನಿಮ್ಮ ಮಗುವಿನ ಸುರಕ್ಷತೆಗಾಗಿ ಪೋಷಕರು ತಿಳಿಯಲೇಬೇಕಾದ ವಿಷಯಗಳು -
ವಿಶ್ವಕರ್ಮ ಪೂಜೆ ಸಂಭ್ರಮ: ಗಾಳಿಪಟ ಹಾರಿಸುವಾಗ ಈ ಸುರಕ್ಷತಾ ನಿಯಮಗಳನ್ನು ಮರೆಯದಿರಿ! -
IMD ಮಳೆ ಅಲರ್ಟ್: ಸಿಡಿಲು-ಮಳೆಯಿಂದ ಪಾರಾಗಲು ಈ ನಿಯಮ ಪಾಲಿಸಿ, ಮನೆಯಲ್ಲೇ ಫಿಟ್ ಆಗಿರಿ -
ಡೇಟಿಂಗ್ ಆಪ್ಗಳಲ್ಲಿ ಎಐ ಚಾಟ್ಬಾಟ್ ವಂಚನೆ: ನಿಮ್ಮ ಪ್ರೀತಿಯೇ ಬಲೆ ಆಗಬಹುದು, ಎಚ್ಚರ! -
ಚೆನ್ನೈನಲ್ಲಿ ಭಾರಿ ಮಳೆ: ಅಪಾರ್ಟ್ಮೆಂಟ್ ನಿವಾಸಿಗಳು ಮರೆಯದೆ ಮಾಡಬೇಕಾದ 20 ನಿಮಿಷದ ಸೇಫ್ಟಿ ಚೆಕ್ಲಿಸ್ಟ್ -
ಗಣೇಶ ಹಬ್ಬದ ಪ್ರಸಾದ: ಕಲಬೆರಕೆ ಸಿಹಿತಿಂಡಿಗಳನ್ನು ಪತ್ತೆಹಚ್ಚುವುದು ಹೇಗೆ? ಇಲ್ಲಿದೆ ಎಫ್ಎಸ್ಎಸ್ಎಐ ಟಿಪ್ಸ್ -
ನಾಳೆ ಗಣೇಶ ವಿಸರ್ಜನೆ: ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ಬಂದ್, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ -
ಸೇವಾ ಪಖ್ವಾಡ: ರಕ್ತದಾನಕ್ಕೆ ಹೋಗುವ ಮುನ್ನ ಈ ಸಿಂಪಲ್ ಪ್ಲಾನ್ ಮಿಸ್ ಮಾಡ್ಬೇಡಿ! -
ಪರಿಸರ ಸ್ನೇಹಿ ಡೇಟಿಂಗ್: ₹300 ರೊಳಗೆ ನಿಮ್ಮ ಪ್ರೀತಿಯನ್ನು ಹಸಿರಾಗಿಸುವ 12 ಅದ್ಭುತ ಐಡಿಯಾಗಳು!
Vrushabha Rashi Ugadi Bhavishya 2022 : ಯುಗಾದಿ ಪಂಚಾಂಗ: ವೃಷಭ ರಾಶಿಯವರಿಗೆ ಹೊಸ ಸಂವತ್ಸರ ಹೇಗಿರಲಿದೆ?
ಹಿಂದೂಗಳಿಗೆ ಹೊಸ ವರ್ಷವೆಂದರೆ ಅದು ಯುಗಾದಿ, ಈ ದಿನದಿಂದ ಹೊಸ ಸಂವತ್ಸರ ಪ್ರಾರಂಭವಾಗುವುದು, ಹೊಸ ಸಂವತ್ಸರವನ್ನು ಬೇವು-ಬೆಲ್ಲ ಸವಿಯುತ್ತಾ ಸಡಗರ-ಸಂಭ್ರಮದಿಂದ ಸ್ವಾಗತಿಸುವುದೇ ಯುಗಾದಿ. ಈ ವರ್ಷ ಶ್ರೀ ಶುಭಕೃತ ನಾಮ ಸಂವತ್ಸರ.

ಈ ಹೊಸ ವರ್ಷದಲ್ಲಿ ಯುಗಾದಿ ಪಂಚಾಂಗ ಪ್ರಕಾರ ನಿಮ್ಮ ರಾಶಿ ಭವಿಷ್ಯ ಹೇಳಲಾಗುವುದು. ನಾವಿಲ್ಲಿಈ ಶುಭಕೃತ ನಾಮ ಸಂವತ್ಸರದಲ್ಲಿ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಎಂದು ವಿವರವಾಗಿ ನೀಡಲಾಗಿದೆ ನೋಡಿ:
ವೃಷಭ ರಾಶಿ
ವೃಷಭ ರಾಶಿಯ ಅಧಿಪತಿ ಶುಕ್ರ. ಯುಗಾದಿ ಪಂಚಾಂಗ ಪ್ರಕಾರ ನಿಮಗೆ ಆದಾಯ 8 ಇದ್ದರೆ ವ್ಯಯ ಕೂಡ 8 ಇರುತ್ತದೆ, ಅಂದರೆ ಗಳಿಸಿದ್ದು ಹಾಗೆಯೇ ಖರ್ಚಾಗುವುದು, ಇನ್ನು ಯೋಗ 6 ಇದ್ದರೆ ಅವಮಾನ 6 ಇದೆ.
ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರ 2, 3, 4ನೇ ಪಾದ, ರೋಹಿಣಿ ನಕ್ಷತ್ರ 4 ಪಾದ, ಮೃಗಶಿರ ನಕ್ಷತ್ರ 1 ಮತ್ತು 2ನೇ ಪಾದದಲ್ಲಿದೆ.
ಈ ವರ್ಷ ಆದಾಯ ಚೆನ್ನಾಗಿರುತ್ತದೆ, ಹಣ ಲಾಭ ಪಡೆಯುವಿರಿ, ವೃತ್ತಿಯಲ್ಲಿ ಪ್ರಗತಿ ಪಡೆಯುವಿರಿ. ಗುರು 11ನೇ ಮನೆಯಲ್ಲಿ ಇರುವುದರಿಂದ ಉದ್ಯೋಗಸ್ಥರಿಗೆ ಹಾಗೂ ವ್ಯಾಪಾರಸ್ಥರಿಗೆ ಅನುಕೂಲಕರವಾಗಿದೆ. ಕಳೆದ ವರ್ಷಕ್ಕಿಂತ ಚೆನ್ನಾಗಿ ಆದಾಯ ಗಳಿಸಲು ಸಾಧ್ಯವಾಗುವುದು. ಅಲ್ಲದೆ 9ನೇ ಮನೆಯಲ್ಲಿ ಶನಿ ಸಾಗುವುದರಿಂದ ನಿಮಗೇ ತುಂಬಾನೇ ಒಳ್ಳೆಯದು ಆಗಲಿದೆ.
ವಿದೇಶದಲ್ಲಿ ಕಲಿಯ ಬಯಸುವ ವಿದ್ಯಾರ್ಥಿಗಳಿಗೆ ಅವಕಾಶ ಸಿಗುವುದು. ಸ್ಪರ್ಧಾತ್ಮಾಕ ಪರೀಕ್ಷೆಗೆ ಸಿದ್ಧತೆ ಮಾಡುತ್ತಿದ್ದರೆ ಒಳ್ಳೆಯ ಫಲಿತಾಂಶ ಸಿಗಲಿದೆ. ಹೆಣ್ಣು ಮಕ್ಕಳು ಉನ್ನತಿಯನ್ನು ಕಾಣುವಿರಿ, ಹೂಡಿಕೆ ಮಾಡುವವರಿಗೂ ಒಳ್ಳೆಯದಾಗಲಿದೆ. ಲಾಭದ ಸ್ಥಾನದಲ್ಲಿ ಗುರು ಇರುವುದರಿಂದ ಒಳ್ಳೆಯದಾಗಲಿದೆ.
ಈ ವರ್ಷ ಮಧ್ಯದಲ್ಲಿ ಗುರುವಿನ ಸ್ಥಾನ ಬದಲಾವಣೆಯನ್ನು ಆಸ್ತಿ ಖರೀದಿಸುವ ಸಾಧ್ಯತೆ ಇದೆ ಅಥವಾ ಹಿರಿಯರ ಪಾಲು ದೊರೆಯಬಹುದು. ಪಿತೃಕರ್ಮ ತಪ್ಪದೆ ಮಾಡಿ. ರಾಹು ಹನ್ನೆರಡನೇಯ ಮನೆಯಲ್ಲಿರುವುದರಿಂದ ಒಳ್ಳೆಯದು, ಆದರೆ ಕೇತು 6 ನೇ ಮನೆಯಲ್ಲಿ ಇರುವುದರಿಂದ ಶತ್ರುವಿನ ಭಾದೆ ಇರಬಹುದು. ಅವರ ಬಗ್ಗೆ ಜಾಗ್ರತೆ.
ಮನೆಯಲ್ಲಿ ಶುಭ ಕಾರ್ಯಗಳಿಗೆ ಖರ್ಚು ಮಾಡುವಿರಿ. ಸೆಪ್ಟೆಂಬರ್ನಲ್ಲಿ ನಿಮ್ಮ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಬಲವಾಗುವುದು. ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಆಗಮನವಾಗಲಿದೆ. ಮದುವೆ ವಯಸ್ಸಿನಲ್ಲಿ ಇರುವವರಿಗೆ ಕಂಕಣ ಬಲ ಕೂಡಿ ಬರಲಿದೆ.
ಆರೋಗ್ಯದ ಬಗ್ಗೆ ಹೇಳುವುದಾದರೆ ಈ ವರ್ಷ ಅಂಥ ಯಾವುದೇ ದೊಡ್ಡ ತೊಂದರೆಯಿಲ್ಲ, ಆರೋಗ್ಯಕರ ಆಹಾರ ಸೇವನೆ ಒಳ್ಳೆಯದು.
ಅದೃಷ್ಟದ ಬಣ್ಣ: ಬಿಳಿ
ಪರಿಹಾರ:
ಗುರುವಾರ ಗುರುವಿನ ಆರಾಧನೆ, ಶನಿವಾರ ಶನೇಶ್ವರನ ಆರಾಧನೆ ಮಾಡಿ
7 ಮಂಗಳವಾರ ದುರ್ಗೆಯನ್ನು ಪೂಜಿಸಿ.



Click it and Unblock the Notifications
