Latest Updates
-
ಎಲ್ಜಿಪಿ ಬಳಸದೆ ನೀರಿನಿಂದ ಅಡುಗೆ ಮಾಡಿ: ರವಿಶಂಕರ್ ಗುರೂಜಿ ವಿಡಿಯೋ ವೈರಲ್ -
ಬೇಸಿಗೆಯ ಉರಿಗೆ ಪೈನಾಪಲ್ ರಸಂ ಮಾಡಿ: ಎಷ್ಟು ಸುಲಭ ಮಾಡೋದು ಗೊತ್ತಾ? -
ಅಕ್ಕಿ ಬೇಡ, ನೆನೆಸೋ ಸಮಯವೂ ಬೇಡ.. ತಕ್ಷಣ ಮಾಡಿ ಈ ದೋಸೆ! ಈ ಟ್ರಿಕ್ ಗೊತ್ತಿದ್ರೆ ಯಾರೂ ಮಾಡಬಹುದು -
ಸುಡು ಬಿಸಿಲಲ್ಲೂ ನಿಮ್ಮ ಮುಖ ಹಾಲಿನಂತೆ ಬೆಳ್ಳಗಾಗುತ್ತೆ! ಕೇವಲ 2 ನಿಮಿಷ ಈ ಮಸಾಜ್ ಸಾಕು.. ಮುಖ ಹೊಳೆಯುತ್ತೆ! -
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ
ವಾಸ್ತು ಸಲಹೆ: ಹಣದ ಸಮಸ್ಯೆಯಿಂದ ಮುಕ್ತಿ ಪಡೆಯಲು ಬುಧವಾರ ಹೀಗೆ ಮಾಡಿ
ಬುಧವಾರ ಗಣೇಶನಿಗೆ ಸಮರ್ಪಿಸಲಾಗಿದೆ ಅಲ್ಲದೇ ಬುಧ ಗ್ರಹದ ಆಡಳಿತ ದಿನ. ಬುಧ ಗ್ರಹವು ಬುದ್ಧಿವಂತಿಕೆ ಮತ್ತು ವಿವೇಚನೆಯ ಅಧಿಪತಿ ಎಂದು ಹೇಳಲಾಗುತ್ತದೆ. ಈ ದಿನದಂದು ಗಣಪತಿಯನ್ನು ಪೂಜಿಸುವುದರಿಂದ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಗಣೇಶ ಎಲ್ಲಿ ನೆಲೆಸುತ್ತಾನೆಯೋ ಅಲ್ಲಿ ಎಲ್ಲವೂ ಶುಭ ಎಂದು ಹೇಳಲಾಗುತ್ತದೆ. ಇದಲ್ಲದೇ ಬುಧ ಗ್ರಹವನ್ನು ಶಾಂತಗೊಳಿಸಲು ಪೂಜೆಯನ್ನು ಮಾಡಲಾಗುತ್ತದೆ.
ಜಾತಕದಲ್ಲಿ ಬುಧ ಗ್ರಹವನ್ನು ಶಾಂತಗೊಳಿಸಲು ಅನೇಕ ಜನರು ವಿವಿಧ ರೀತಿಯ ಪೂಜಾ ಕ್ರಮಗಳನ್ನು ಮಾಡುತ್ತಾರೆ. ಇದೆಲ್ಲದರ ಹೊರತಾಗಿ ಬುಧವಾರ ಕೆಲವು ಕೆಲಸಗಳನ್ನು ಮಾಡಬಾರದು ಹಾಗೂ ಮಾಡಿದರೆ ಅಶುಭ ಎಂದು ನಂಬಲಾಗಿದೆ. ನೀವೂ ಸಹ ಹಣಕಾಸಿನ ತೊಂದರೆಯಿಂದ ಬಳಲುತ್ತಿದ್ದರೆ, ಕೌಟುಂಬಿಕ ಸಮಸ್ಯೆ ಹೆಚ್ಚಾಗಿದ್ದರೆ, ಮಾನಸಿಕ ನೆಮ್ಮದಿ ಇಲ್ಲವಾಗಿದ್ದರೆ ಬುಧವಾರದಂದು ಇಂಥಾ ಕೆಲಸಗಳನ್ನು ಮಾಡಬೇಡಿ. ಅಲ್ಲದೆ ಇದನ್ನು ಮಾಡುವುದರಿಂದ ಮನೆಯಲ್ಲಿ ಹಣದ ಕೊರತೆ ಇರುವುದಿಲ್ಲ.

ಹೂಡಿಕೆ ಮಾಡಬೇಡಿ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಬುಧವಾರ ಹಣಕಾಸು ಹೂಡಿಕೆಗೆ ಒಳ್ಳೆಯ ದಿನವಲ್ಲ. ಈ ದಿನ ಹೂಡಿಕೆ ಮಾಡಬಾರದು. ನೀವು ಬುಧವಾರದ ಬದಲು ಶುಕ್ರವಾರ ಹೂಡಿಕೆ ಮಾಡಿ, ಶುಕ್ರವಾರ ಲಕ್ಷ್ಮಿಯ ದಿನ, ಈ ದಿನ ಹೂಡಿಗೆಯು ಹಣವನ್ನು ದುಪ್ಪಟ್ಟು ಮಾಡುತ್ತದೆ.

ಸಾಲ ಮಾಡಬೇಡಿ
ಬುಧವಾರದಂದು ಸಾಲ ಮಾಡುವುದನ್ನು ತಪ್ಪಿಸಬೇಕು. ಆದರೆ ಈ ದಿನ ಹಣ ನಿಮ್ಮ ಕೈಗೆ ಬಂದರೆ ಅದು ಶುಭದ ಸಂಕೇತ. ಆದರೆ ನೀವು ಯಾರಿಗಾದರೂ ಹಣವನ್ನು ಕೊಡುವುದು, ಇತರ ಹಣದ ವಹಿವಾಟು ಹಾನಿಕಾರಕವಾಗಿದೆ. ಆದ್ದರಿಂದ ಬುಧವಾರ ಸಾಲವನ್ನು ತೆಗೆದುಕೊಳ್ಳಬೇಡಿ.

ಕಪ್ಪು ಬಟ್ಟೆಗಳನ್ನು ಧರಿಸಬೇಡಿ
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ದಂಪತಿಗಳ ನಡುವೆ ಸಮಸ್ಯೆ ಇದ್ದರೆ, ಆಗಾಗ್ಗೆ ಜಗಳ ಆಗುತ್ತಿದ್ದರೆ ಬುಧವಾರದಂದು ಮಹಿಳೆಯರು ಕಪ್ಪು ಬಟ್ಟೆಗಳನ್ನು ಧರಿಸಬಾರದು. ಇದು ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು.

ಪಶ್ಚಿಮಕ್ಕೆ ಪ್ರಯಾಣಿಸಬೇಡಿ
ಬುಧವಾರದಂದು ಪಶ್ಚಿಮ ದಿಕ್ಕಿನಲ್ಲಿ ಪ್ರಯಾಣ ಮಾಡುವುದು ಅಶುಭವೆಂದು ಜ್ಯೋತಿಷಿಗಳು ನಂಬುತ್ತಾರೆ. ಈ ದಿನದ ಪ್ರಯಾಣವು ನಿಮ್ಮ ಕೆಲಸವನ್ನು ಹಾಳು ಮಾಡುತ್ತದೆ. ಮುಂದಿನ ಬಾರಿ ಬುಧವಾರದಂದು ಪ್ರಯಾಣ ಮಾಡುವ ಮುನ್ನ ಎಚ್ಚರವಹಿಸಿ.

ಕಠಿಣ ಪದಗಳನ್ನು ಆಡಬೇಡಿ
ಬುಧ ಗ್ರಹವನ್ನು ಮಾತು ಮತ್ತು ಸಂವಹನದ ಅಂಶವೆಂದು ಪರಿಗಣಿಸಲಾಗುತ್ತದೆ. ಈ ದಿನ ಕಹಿ ಮಾತುಗಳನ್ನಾಡಬಾರದು. ಈ ದಿನ ಕಹಿ ವಿಷಯಗಳನ್ನು ಮಾತನಾಡುವುದು ಮನೆಯಲ್ಲಿ ಆರ್ಥಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ನಂಬಲಾಗಿದೆ. ಇದಲ್ಲದೇ ಮನೆಯಲ್ಲಿ ಜಗಳವಾಗಬಹುದು.



Click it and Unblock the Notifications











