Latest Updates
-
ಗುರು ಪೂರ್ಣಿಮೆ 2026: ಸರಳ ಪೂಜಾ ವಿಧಿ ಮತ್ತು ಕಡಿಮೆ ಬಜೆಟ್ನಲ್ಲಿ ಗುರುಗಳಿಗೆ ನೀಡಬಹುದಾದ ಬೆಸ್ಟ್ ಗಿಫ್ಟ್ ಐಡಿಯಾಗಳು! -
10 ನಿಮಿಷದ 'ಟೈಗರ್ ಫ್ಲೋ': ಬೆನ್ನುನೋವಿಗೆ ಮುಕ್ತಿ ನೀಡುವ ಅದ್ಭುತ ವ್ಯಾಯಾಮ ಇಲ್ಲಿದೆ! -
ಪ್ರತಿಭಟನೆಯಲ್ಲಿ ಪ್ರೀತಿ: 'ಪ್ರೊಟೆಸ್ಟ್ ನೇ ಬನಾ ದಿ ಜೋಡಿ' ಟ್ರೆಂಡ್ ಹಿಂದೆ ಅಡಗಿದೆ ದೊಡ್ಡ ಅಪಾಯ! -
ಮಳೆಗಾಲದಲ್ಲಿ ಮನೆಯಲ್ಲಿ ಬೂಷ್ಟು ಹರಡುತ್ತಿದೆಯೇ? ಈ 20 ನಿಮಿಷದ ಟಿಪ್ಸ್ ಪಾಲಿಸಿ, ಮನೆ ಫ್ರೆಶ್ ಆಗಿಡಿ! -
ಕೇವಲ 200 ರೂಪಾಯಿಯಲ್ಲಿ ಪರಿಸರ ಸ್ನೇಹಿ ಊಟ: ವಿಶ್ವ ಪ್ರಕೃತಿ ಸಂರಕ್ಷಣಾ ದಿನಕ್ಕೆ ನಿಮ್ಮ ಅಡುಗೆಮನೆಯೇ ಮೊದಲ ಹೆಜ್ಜೆ! -
CWG 2026: 6ನೇ ದಿನ ಭಾರತದ ಪದಕದ ಬೇಟೆ; ಮನೆಯಲ್ಲೇ ಕಮ್ಮಿ ಬಜೆಟ್ನಲ್ಲಿ ಅದ್ಭುತ ವಾಚ್ ಪಾರ್ಟಿ ಪ್ಲಾನ್! -
ವಿಶ್ವ ಹೆಪಟೈಟಿಸ್ ದಿನ: ಲಿವರ್ ಆರೋಗ್ಯ ಹೆಚ್ಚಿಸಲು ಈ 10 ನಿಮಿಷದ ಬೆಳಗಿನ ದಿನಚರಿ ಪಾಲಿಸಿ! -
ಮಳೆಗಾಲದ ರಜೆ: ವರ್ಕ್ ಫ್ರಮ್ ಹೋಮ್ ಪೋಷಕರಿಗೆ ಮಕ್ಕಳನ್ನು ನಿಭಾಯಿಸುವುದು ಹೇಗೆ? ಇಲ್ಲಿದೆ ಸರಳ ಟಿಪ್ಸ್ -
ಮಳೆಗಾಲದಲ್ಲಿ ನಿಮ್ಮ ಮನೆಯ ಗಿಡಗಳು ಸಾಯುತ್ತಿವೆಯೇ? ಈ 15 ನಿಮಿಷದ ಟಿಪ್ಸ್ ಪಾಲಿಸಿ! -
ಮಳೆಗಾಲದಲ್ಲಿ ಕರೆಂಟ್ ಹೋದರೆ ಫ್ರಿಜ್ ಆಹಾರ ಹಾಳಾಗುತ್ತಾ? ಸುರಕ್ಷಿತವಾಗಿಡಲು ಇಲ್ಲಿವೆ ಸರಳ ಟಿಪ್ಸ್
ವಾಸ್ತು ಸಲಹೆ: ವಾಸ್ತುಶಾಸ್ತ್ರದ ಪ್ರಕಾರ ಜೀರಿಗೆಯನ್ನು ಹೀಗೆ ಬಳಸಿದರೆ ಆರ್ಥಿಕ ಸಮಸ್ಯೆ ನಿವಾರಣೆಯಾಗುತ್ತದೆ
ಅಡುಗೆಮನೆಯ ಮಸಾಲೆ ಪದಾರ್ಥಗಳು ಅಡುಗೆಯ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಂದ ನಮ್ಮನ್ನು ದೂರ ಇಡುತ್ತದೆ ಎಂಬುದು ಗೊತ್ತು ಆದರೆ ವಾಸ್ತುಶಾಸ್ತ್ರದ ಪ್ರಕಾರ ಅಡುಗೆ ಮನೆಯ ಕೆಲವು ಮಸಾಲೆ ಪದಾರ್ಥಗಳು ಮನೆಯ ವಾಸ್ತು ಸಮಸ್ಯೆ ಹಾಗೂ ನಮ್ಮ ಕೆಲವು ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಹೇಳಲಾಗುತ್ತದೆ.

ಇಂಥಾ ಮಸಾಲೆ ಪದಾರ್ಥಗಳಲ್ಲಿ ಒಂದಾದ ಜೀರಿಗೆ ನಮ್ಮ ದೈನಂದಿನ ಜೀವನದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ ಎಂದು ಜ್ಯೋತಿಶಾಸ್ತ್ರಜ್ಞರು ಹೇಳುತ್ತಾರೆ. ವಾಸ್ತುತಜ್ಞರು ಹೇಳುವ ಪ್ರಕಾರ ಜೀರಿಗೆಯನ್ನು ಈ ರೀತಿ ಬಳಸಿದರೆ ನಮ್ಮ ಆರ್ಥಿಕ ಸಮಸ್ಯೆ, ಕೆಲಸದ ಸಮಸ್ಯೆಗಳು ನಿವಾರಣೆಯಾಗುತ್ತದೆ. ದೇವಿ ಆಶೀರ್ವಾದ ನಮ್ ಮೇಲೆ ಸದಾ ಇರುತ್ತದೆ.

ಜೀರಿಗೆ ಈ ಗ್ರಹಗಳನ್ನು ಬಲಪಡಿಸುತ್ತದೆ
ವಾಸ್ತು ಶಾಸ್ತ್ರದಲ್ಲಿ ಜೀರಿಗೆ ರಾಹು-ಕೇತು ಗ್ರಹಕ್ಕೆ ಸಂಬಂಧಿಸಿದೆ ಎಂದು ನಂಬಲಾಗಿದೆ. ಈ ಗ್ರಹಗಳ ದುಷ್ಪರಿಣಾಮಗಳ ಕಾರಣದಿಂದಾಗಿ, ವ್ಯಕ್ತಿಯು ಜೀವನದಲ್ಲಿ ಎಲ್ಲಾ ರೀತಿಯ ದುಃಖಗಳನ್ನು ಎದುರಿಸಬೇಕಾಗುತ್ತದೆ. ವಾಸ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ರಾಹು-ಕೇತುಗಳ ಕೆಟ್ಟ ಸ್ಥಿತಿ ಇರುವವರು ಶನಿವಾರದಂದು ಜೀರಿಗೆಯನ್ನು ದಾನ ಮಾಡಬೇಕು.

ಲಕ್ಷ್ಮಿಯನ್ನು ಆಶೀರ್ವದಿಸುತ್ತಾಳೆ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯಲು ಶುಕ್ರವಾರದಂದು ಲಕ್ಷ್ಮಿ ದೇವಿಯ ಮುಂದೆ ಕೆಂಪು ಬಟ್ಟೆಯನ್ನು ಹರಡಿ ಮತ್ತು ಅದರಲ್ಲಿ ಒಂದು ಹಿಡಿ ಜೀರಿಗೆಯನ್ನು ಹಾಕಿ ಮತ್ತು ಅದರಲ್ಲಿ ಕೆಲವು ನಾಣ್ಯಗಳನ್ನು ಇಡಿ. ನಂತರ ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿ ದೇವಿಯನ್ನು ಪೂಜಿಸಿದ ನಂತರ ಜೀರಿಗೆ ಮತ್ತು ಹಣವನ್ನು ಸುತ್ತಿ ನೀವು ಹಣವನ್ನು ಇಡುವ ಸ್ಥಳದಲ್ಲಿ ಇರಿಸಿ. ಹೀಗೆ ಮಾಡುವುದರಿಂದ ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ಉಳಿಯುತ್ತದೆ, ಆರ್ಥಿಕವಾಗಿ ಸಬಲವಾಗಬಹುದು ಎಂದು ನಂಬಲಾಗಿದೆ.

ಋಣಾತ್ಮಕ ಶಕ್ತಿ ದೂರ
ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಇರುವ ಋಣಾತ್ಮಕ ಶಕ್ತಿಯನ್ನು ಹೋಗಲಾಡಿಸಲು ಸ್ವಲ್ಪ ಜೀರಿಗೆಯನ್ನು ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ. ಹೀಗೆ ಮಾಡುವುದರಿಂದ ಮನೆಯಲ್ಲಿ ಋಣಾತ್ಮಕ ಶಕ್ತಿ ದೂರವಾಗಿ ಧನಾತ್ಮಕ ಶಕ್ತಿ ಹರಡುತ್ತದೆ ಎಂದು ನಂಬಲಾಗಿದೆ.

ಕೆಲಸದಲ್ಲಿ ಯಶಸ್ಸನ್ನು ಪಡೆಯಲು ಜೀರಿಗೆ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವಾರ ಬೆಳಿಗ್ಗೆ ಜೀರಿಗೆ ತಿಂದ ನಂತರ ಮನೆಯಿಂದ ಹೊರಡುವುದು ಯಾವುದೇ ಕೆಲಸದಲ್ಲಿ ಯಶಸ್ವಿಯಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಜೀರಿಗೆಯನ್ನು ಸೇವಿಸುವುದರಿಂದ ದೈನಂದಿನ ಜೀವನದಲ್ಲಿ ಸಾಮರಸ್ಯ ಮತ್ತು ಶಾಂತಿ ಉಳಿಯುತ್ತದೆ ಎಂದು ನಂಬಲಾಗಿದೆ. ಮಂಗಳವಾರದಂದು ಮೊಸರಿನಲ್ಲಿ ಜೀರಿಗೆಯನ್ನು ತಿನ್ನುವುದು ತುಂಬಾ ಮಂಗಳಕರವೆಂದು ಪರಿಗಣಿಸಲಾಗಿದೆ.



Click it and Unblock the Notifications