Latest Updates
-
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ! -
ಹೊರಗೆ ಬಿರುಗಾಳಿ, ಮನೆಯಲ್ಲಿ ಫಿಟ್ನೆಸ್: ಇಂದಿನ ಹವಾಮಾನಕ್ಕೆ ಈ ವರ್ಕೌಟ್ ಬೆಸ್ಟ್! -
ಮದುವೆ ಮನೆಯಲ್ಲಿ ನೋಟಿನ ಹಾರ: ಸಂಭ್ರಮದ ನಡುವೆ ಅನಿರೀಕ್ಷಿತವಾಗಿ ನುಗ್ಗಿ ಬಂತು ರಣರಂಗ! -
ಮಕ್ಕಳಲ್ಲಿ ಹೆಚ್ಚುತ್ತಿದೆ ಮಧುಮೇಹದ ಭೀತಿ: ಇಂದೇ ಬದಲಾಯಿಸಿ ನಿಮ್ಮ ಅಡುಗೆಮನೆಯ ಈ ಅಭ್ಯಾಸಗಳನ್ನು! -
ಮೆಟ್ ಗಾಲಾ 2026: ಜಾಗತಿಕ ವೇದಿಕೆಯಲ್ಲಿ ಅಬ್ಬರಿಸಿದ ಭಾರತೀಯ ಸಂಸ್ಕೃತಿ, ಫ್ಯಾನ್ಸ್ ಫಿದಾ! -
ಬೇಸಿಗೆಯ ಬಿಸಿಲಿಗೆ ಸುಸ್ತಾದ್ರಾ? ಕೇವಲ 1000 ರೂಪಾಯಿಯಲ್ಲಿ ನಿಮ್ಮ ಮನೆಯನ್ನು ತಂಪಾಗಿಸಿ! -
ದೆಹಲಿ ಮಂದೆದ್ದಿದೆ: ವರ್ಷದಲ್ಲೇ ಮೊದಲ ಬಾರಿಗೆ ಸಿಕ್ಕಿದೆ ಇಂತಹ ಅದ್ಭುತ ಅವಕಾಶ!
ಶುಕ್ರ ಗೋಚಾರ ಫಲ: ಈ 5 ರಾಶಿಯವರಿಗೆ ಲಕ್ಷ್ಮಿ ಕೃಪೆಯಿಂದಾಗಿ ಅದೃಷ್ಟವೇ ಅದೃಷ್ಟ
ಮೇ 23 ರಂದು ಶುಕ್ರವು ಮೇಷ ರಾಶಿಗೆ ಪ್ರವೇಶಿಸಿದೆ. ಜ್ಯೋತಿಷ್ಯದಲ್ಲಿ ಶುಕ್ರನಿಗೆ ವಿಶೇಷ ಸ್ಥಾನವಿದೆ. ಶುಕ್ರದೇವನು ಮಂಗಳಕರ ಸ್ಥಾನದಲ್ಲಿದ್ದಾಗ ಆ ರಾಶಿಯ ವ್ಯಕ್ತಿಗೆ ಶುಕ್ರದೆಸೆ ಪ್ರಾರಂಭವಾಗುವುದು.
ಈ ಸಮಯದಲ್ಲಿ ಲಕ್ಷ್ಮಿಯ ವಿಶೇಷವಾದ ಕೃಪೆ ಇರುತ್ತದೆ. ಈ ಸಮಯದಲ್ಲಿ ಮುಟ್ಟಿದ್ದೆಲ್ಲಾ ಚಿನ್ನವಾಗುವುದು. ಏನಾದರೂ ಖರೀದಿಗೆ, ಹೂಡಿಕೆಗೆ ಸೂಕ್ತವಾದ ಸಮಯವಾಗಿರುತ್ತದೆ.

ಇದೀಗ ಶುಕ್ರನು ಮೇಷ ರಾಶಿಯಲ್ಲಿ ಇದೆ. ಶುಕ್ರನು ಈ ರಾಶಿಯಲ್ಲಿ ಇರುವಾಗ ಕೆಲವು ರಾಶಿಗಳಿಗೆ ಒಳ್ಳೆಯ ದಿನಗಳಾಗಿರುತ್ತದೆ. ಈ ಸಮಯದಲ್ಲಿ ಆ ರಾಶಿಯವರ ಅದೃಷ್ಟವೇ ಬದಲಾಗುವುದು.
ಈ ಶುಕ್ರ ಸಂಚಾರದಲ್ಲಿ ಈ ರಾಶಿಯವರ ಮೇಲೆ ವಿಶೇಷವಾದ ಲಕ್ಷ್ಮಿ ಕೃಪೆ ಇರುತ್ತದೆ:

ಮೇಷ ರಾಶಿ
ಮೇಷ ರಾಶಿಯವರ ಆರ್ಥಿಕ ಭಾಗವು ಬಲವಾಗಿರುತ್ತದೆ. ನಿಮಗೆ ಈ ಅವಧಿಯಲ್ಲಿ ಹೂಡಿಕೆಯಿಂದ ಲಾಭವಾಗಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.
ಲಕ್ಷ್ಮಿಯ ಕೃಪೆಯಿಂದ ಜೀವನ ಸುಖಮಯವಾಗುತ್ತದೆ. ಈ ಸಮಯದಲ್ಲಿ ಖರ್ಚು ಕಡಿಮೆಯಾಗಲಿದೆ. ವಹಿವಾಟುಗಳಿಗೆ ಈ ತಿಂಗಳು ತುಂಬಾ ಅನುಕೂಲಕರವಾಗಿರುತ್ತದೆ.

ಮಿಥುನ ರಾಶಿ
ಈ ಸಮಯದಲ್ಲಿ ನೀವು ಹೊಸ ಮನೆ ಅಥವಾ ಆಸ್ತಿ ಖರೀದಿಸಲು ಬಯಸುವುದಾದರೆ ಅದು ಸಾಧ್ಯವಾಗುವುದು, ಏಕೆಂದರೆ ಲಕ್ಷ್ಮಿಯ ವಿಶೇಷ ಕೃಪೆ ನಿಮ್ಮ ಮೇಲಿರುತ್ತದೆ. ನಿಮ್ಮ ದಾಂಪತ್ಯ ಜೀವನ ಸುಖಮಯವಾಗಿರುತ್ತದೆ.ಯಾವುದಾದರೂ ಹೊಸ ಕಾರ್ಯಕ್ಕೆ ಕೈ ಹಾಕುವುದಾದರೆ ಹೊಸ ಕೆಲಸವನ್ನು ಪ್ರಾರಂಭಿಸಲು ಉತ್ತಮ ಸಮಯ.
ವ್ಯಾಪಾರ-ವಹಿವಾಟುಗಳಿಗೆ ಸಮಯವು ಮಂಗಳಕರವಾಗಿದೆ, ಆದರೆ ವ್ಯವಹಾರಗಳನ್ನು ಮಾಡುವ ಮೊದಲು, ಎಚ್ಚರಿಕೆಯಿಂದ ಮಾಡಿ. ಹಣಕಾಸಿನ ಪರಿಸ್ಥಿತಿ ತುಂಬಾ ಚೆನ್ನಾಗಿರುತ್ತದೆ.

ವೃಶ್ಚಿಕ ರಾಶಿ
ಲಕ್ಷ್ಮಿಯ ಕೃಪೆಯಿಂದ ನಿಮ್ಮ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ನೀವು ಹೊಸ ಮನೆ ಅಥವಾ ವಾಹನವನ್ನು ಖರೀದಿಸಬಹುದು. ವ್ಯಾಪಾರಕ್ಕೆ ಈ ಸಮಯವು ತುಂಬಾ ಅನುಕೂಲಕರವಾಗಿದೆ. ವ್ಯವಹಾರದಲ್ಲಿ ಲಾಭ ಸಿಗುವುದು. ವ್ಯಾಪಾರಸ್ಥರಿಗೆ ಅನುಕೂಲಕರವಾದ ಸಮಯವಾಗಿದೆ.

ಧನು ರಾಶಿ
ಶುಕ್ರನ ಕೃಪೆಯಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಹೂಡಿಕೆ ಮಾಡಲು ಈ ಸಮಯ ಉತ್ತಮವಾಗಿದೆ. ಹೊಸ ವಾಹನ ಖರೀದಿಸಬಹುದು.
ವ್ಯಾಪಾರ-ವಹಿವಾಟುಗಳಿಗೂ ಸಮಯ ಉತ್ತಮವಾಗಿದೆ. ಲಕ್ಷ್ಮಿಯ ಕೃಪೆಯಿಂದಾಗಿ ಆದಾಯದ ಮೂಲಗಳು ಹೆಚ್ಚಾಗುತ್ತವೆ.

ಕುಂಭ ರಾಶಿ
ಈ ಸಮಯದಲ್ಲಿ ಮಾಡುವ ಹೂಡಿಕೆಯಿಂದ ಆಭ ಗಳಿಸುವಿರಿ. ಈ ಸಮಯದಲ್ಲಿ ಖರ್ಚುಗಳು ಕಡಿಮೆಯಾಗಲಿದೆ. ವ್ಯಾಪಾರ ವರ್ಗದವರಿಗೆ ಈ ಸಮಯ ಒಳ್ಳೆಯದಿದೆ. ಲಕ್ಷ್ಮಿಯ ವಿಶೇಷ ಕೃಪೆ ಇರುವುದರಿಂದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ. ನೀವು ವಾಹನ ಅಥವಾ ಆಸ್ತಿ ಖರೀದಿಗೆ ಪ್ರಯತ್ನಿಸುತ್ತಿದ್ದರೆ ಈ ಸಮಯದಲ್ಲಿ ಸಾಧ್ಯವಾಗುವುದು.



Click it and Unblock the Notifications