Latest Updates
-
ಬಿಸಿಗಾಳಿಯ ಎಚ್ಚರಿಕೆ: ಮಧ್ಯಾಹ್ನ ವರ್ಕೌಟ್ ಮಾಡ್ತಿದ್ದೀರಾ? ಈ ತಪ್ಪು ನಿಮ್ಮ ಆರೋಗ್ಯಕ್ಕೆ ಕುತ್ತು ತರಬಹುದು! -
ಬಿಸಿಗಾಳಿಯ ನಡುವೆ ಮದುವೆ ಸಂಭ್ರಮ: ಅತಿಥಿಗಳ ಸುರಕ್ಷತೆಗಾಗಿ ನೀವು ಮಾಡಲೇಬೇಕಾದ ಬದಲಾವಣೆಗಳಿವು! -
ಬಿಸಿಗಾಳಿಯ ಅಬ್ಬರ ಶುರು: ನಿಮ್ಮ ಮನೆ ತಂಪಾಗಿರಲು ಮತ್ತು ಗಿಡಗಳನ್ನು ಉಳಿಸಲು ಈ ಸೀಕ್ರೆಟ್ ಟಿಪ್ಸ್ ಮಿಸ್ ಮಾಡ್ಬೇಡಿ! -
ಸುಡುವ ಬಿಸಿಲಿಗೆ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮ ಪಾಲಿಸಿ! -
ಮದರ್ಸ್ ಡೇ 2026: ಅಮ್ಮನಿಗೆ ಸರ್ಪ್ರೈಸ್ ನೀಡಲು ಈ ವೈರಲ್ ಟ್ರೆಂಡ್ಸ್ ಫಾಲೋ ಮಾಡಿ, ಮಿಸ್ ಮಾಡ್ಬೇಡಿ! -
ಅಮ್ಮನಿಗೆ ಈ ಬಾರಿ ವಿಶೇಷ ಉಡುಗೊರೆ: ತಾಯಂದಿರ ದಿನದಂದು 20 ನಿಮಿಷದ ಯೋಗದ ಮ್ಯಾಜಿಕ್! -
ದೆಹಲಿ ಮಳೆಯಲ್ಲಿ ಮದುವೆ ಸಂಭ್ರಮಕ್ಕೆ ಅಡ್ಡಿಯೇ? ಈ ಸಣ್ಣ ಬದಲಾವಣೆಗಳು ನಿಮ್ಮ ಮದುವೆಯನ್ನು ಉಳಿಸುತ್ತವೆ! -
ಬಿರುಗಾಳಿ ಅಬ್ಬರಕ್ಕೆ ಬಾಲ್ಕನಿ ಗಾರ್ಡನ್ ಹಾಳಾಗುತ್ತಾ? ನಿಮ್ಮ ಮನೆ ಮತ್ತು ಗಿಡಗಳನ್ನು ರಕ್ಷಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ! -
ಬಿಸಿಲಿನ ಬೇಗೆಗೆ ಸುಸ್ತಾಗಿದ್ದೀರಾ? ದೆಹಲಿ ಸರ್ಕಾರದ ಈ 'ರಿಲೀಫ್ ವ್ಯಾನ್' ನಿಮ್ಮ ಜೀವ ರಕ್ಷಕವಾಗಬಹುದು! -
ಮೆಟ್ ಗಾಲಾ 2026: ದುಬಾರಿ ಫ್ಯಾಷನ್ ಅನ್ನು ನಮ್ಮೂರಿನ ಕ್ರಿಯೇಟರ್ಗಳು ದೇಸಿ ಶೈಲಿಯಲ್ಲಿ ಮರುಸೃಷ್ಟಿಸಿದ್ದು ಹೇಗೆ? ಅಚ್ಚರಿ ಪಡಬೇಡಿ!
ಸೆ. 13ಕ್ಕೆ ವಿಘ್ನರಾಜ ಸಂಕಷ್ಟಿ ಚತುರ್ಥಿ: ಕಷ್ಟ ನಿವಾರಣೆ ಈ ಶುಭ ಮುಹೂರ್ತದಲ್ಲಿ ಪೂಜೆ ಮಾಡಿ
ವಿಘ್ನ ನಿವಾರಕನನ್ನು ಪ್ರಾರ್ಥಿಸಿದರೆ ಖಂಡಿತ ನಮ್ಮ ಬದುಕಿನಲ್ಲಿರುವ ಎಲ್ಲಾ ವಿಘ್ನಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ, ಕುಟುಂಬದಲ್ಲಿ ಸಂತೋಷ ಎಲ್ಲವನ್ನೂ ನೀಡುತ್ತಾನೆ. ಹಿಂದೂ ಧರ್ಮದಲ್ಲಿ ಯಾವುದೇ ದೇವರಿಗೆ ಪೂಜೆ ಸಲ್ಲಿಸುವ ಮುನ್ನ ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಯಾವುದೇ ಶುಭ ಕಾರ್ಯ ಪ್ರಾರಮಭ ಮಾಡುವ ಮುನ್ನ ಗಣೇಶನಿಗೆ ಪೂಜೆ ಮಾಡಲಾಗುವುದು. ಗಣೇಶನ ಪೂಜೆಗೆ ಸಂಕಷ್ಟಿ ತುಂಬಾ ವಿಶೇಷವಾದ ದಿನ.

ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಕೂಡ ಇದೆ. ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಯಾವಾಗ, ಈ ಸಂಕಷ್ಟಿಯ ಮಹತ್ವವೇನು ಎಂದು ನೋಡೋಣ ಬನ್ನಿ:

ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ?
ಪಂಚಾಂಗದ ಪ್ರಕಾರಶ್ವಿನ್ ಮಾಸದ ಕೃಷ್ಣ ಪಕ್ಷದ ಚತುರ್ಥಿ ತಿಥಿಯು ಮಂಗಳವಾರ, ಸೆಪ್ಟೆಂಬರ್ 13 ರಂದು ಬೆಳಗ್ಗೆ 10.37 ರಿಂದ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 14 ರಂದು ಬೆಳಗ್ಗೆ 10.23 ಕ್ಕೆ ಕೊನೆಗೊಳ್ಳುತ್ತದೆ.
ಸಂಕಷ್ಟಿ ಆಚರಣೆ
ಈಗ ಚತುರ್ಥಿಯಂದು ಉಪವಾಸವಿದ್ದು ಗಣೇಶನನ್ನು ಆರಾಧಿಸಬೇಕು. . ಸಂಕಷ್ಟಿ ಚತುರ್ಥಿಯನ್ನು ಸೆಪ್ಟೆಂಬರ್ 13ರಂದು ಆಚರಿಸಲಾಗುವುದು.

ವಿಘ್ನರಾಜ ಸಂಕಷ್ಟಿ ಚತುರ್ಥಿ ಮುಹೂರ್ತ ಮತ್ತು ಯೋಗ
ಸಂಕಷ್ಟಿ ಚತುರ್ಥಿಯ ದಿನ ಬೆಳಗ್ಗೆ 07.37ರ ವರೆಗೆ ವೃದ್ಧಿ ಯೋಗವಿದ್ದು, ಬಳಿಕ ಧ್ರುವಯೋಗ ನಡೆಯಲಿದೆ. ಇವುಗಳಲ್ಲದೆ ಈ ದಿನ ಬಳಿಗ್ಗೆ 06:36 ರಿಂದ ಮರುದಿನ ಬೆಳಿಗ್ಗೆ 06.05 ರವರೆಗೆ ಸರ್ವಾರ್ಥ ಸಿದ್ಧಿ ಯೋಗ ಮತ್ತು ಅಮೃತ ಸಿದ್ಧಿ ಯೋಗವೂ ಇದೆ. ಈ ಸಮಯದಲ್ಲಿ ಪೂಜೆ ಮಾಡಬಹುದು.
ಈ ಶುಭ ಯೋಗಗಳಲ್ಲಿ ಗಣೇಶ, ವಿಘ್ನರಾಜನನ್ನು ಪೂಜಿಸುವುದರಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ತೊಂದರೆಗಳು ನಿವಾರಣೆಯಾಗುತ್ತವೆ. ಈ ದಿನ ಗಣೇಶನಿಗೆ ಮೋದಕ ಮತ್ತು ದೂರವನ್ನು ಅರ್ಪಿಸಲು ಮರೆಯಬೇಡಿ.

ವಿಘ್ನರಾಜ್ ಸಂಕಷ್ಟಿ ಚತುರ್ಥಿ 2022 ಚಂದ್ರೋದಯ ಸಮಯ
ಸೆಪ್ಟೆಂಬರ್ 13ರಂದು ರಾತ್ರಿ 08:26 ಕ್ಕೆ ಚಂದ್ರೋದಯವಾಗುತ್ತದೆ. ಉಪವಾಸ ಮಾಡುವವರು ಚಂದ್ರೋದಯದ ಸಮಯದಲ್ಲಿ ಚಂದ್ರನಿಗೆ ಆರ್ಘ್ಯ ಸಲ್ಲಿಸಿ ಪೂಜಿಸಿ,, ಉಪವಾಸವನ್ನು ಮುರಿಯಿರಿ.



Click it and Unblock the Notifications