Latest Updates
-
March 08 Horoscope: ಯಾರ ಬಳಿಯಾದರು ಸಾಲ ಪಡೆಯುವ ಆಲೋಚನೆ ಮುಂದೂಡಿ! -
ನೀನೇ ನನ್ನ ಶಕ್ತಿ.. ನಿಮ್ಮ ಪ್ರಿಯತಮೆಗೆ ಕಳಿಸಿ ಈ ರೊಮ್ಯಾಂಟಿಕ್ ಶುಭಾಶಯಗಳು! ಆಕೆಯ ಮುಖದಲ್ಲಿ ನಗು ತರಿಸಿ -
ಕೊನೆಗೂ ಬಂತು ರಾಜಯೋಗ: ಈ ರಾಶಿಗಳಿಗೆ ನಸೀಬಲ್ಲೇ ಇಲ್ಲದ ಸುಖ-ಸಂಪತ್ತು ಪ್ರಾಪ್ತಿ! ಪ್ರೀತಿಯಲ್ಲಿ ದೊಡ್ಡ ಯಶಸ್ಸು -
ಎಂದಾದರೂ ಮೊಸರು ಪರೋಟ ತಿಂದಿದ್ದೀರಾ? ಒಮ್ಮೆ ಇದರ ರುಚಿ ನೋಡಿ.. ಹಿಟ್ಟು ಕಲಸುವಾಗ ಈ ಟ್ರಿಕ್ ಬಳಸಿ -
ಹುಷಾರ್.. ಗಂಡನಿಗೆ ಈ 4 ಮಾತು ಹೇಳ್ತೀರಾ? ಮನೇಲಿ ಬೆಂಕಿ ಉರಿಯುತ್ತೆ.. ಹೀಗೆ ಮಾಡಿದ್ರೆ ಸಂಸಾರದಲ್ಲಿ ಸುಖ ಇರುತ್ತೆ -
ಸಿಸ್ಟರ್.. 30+ ಬಳಿಕ ಈ ಸೂತ್ರಗಳನ್ನು ಬೆಳೆಸಿಕೊಳ್ಳಿ! ಆರೋಗ್ಯ ಸದಾ ಚೆನ್ನಾಗಿ ಇರುತ್ತೆ -
10 ನಿಮಿಷದ ಹಾಟ್ ಹಾಟ್ ಪರೋಟ! ಈ ರೀತಿ ಮಾಡಿದ್ರೆ ಮೃದು & ಕ್ರಿಸ್ಪಿಯಾಗಿ ಬರುತ್ತೆ.. ಹೋಟೆಲ್ ಸ್ಟೈಲ್ ಸೀಕ್ರೆಟ್ ಇಲ್ಲಿದೆ -
ಹೋಟೆಲ್ ಸ್ಟೈಲ್ ರಾಯಲ್ ಚಟ್ನಿ! ಈ ಒಂದು ವಸ್ತು ಸೇರಿಸಿ ನೋಡಿ.. ರುಚಿ ಡಬಲ್, 2 ಇಡ್ಲಿ ಜಾಸ್ತಿ ತಿಂತೀರಾ -
ಈ ದಿನ ಆರ್ಥಿಕ ಲಾಭದ ಸಾಧ್ಯತೆಗಳೂ ಇವೆ! ನಿಮ್ಮ ಕ್ರಶ್ ಭೇಟಿಯಾಗುವ ಯೋಗ -
March 07 Horoscope: ಪ್ರಯಾಣ ಮಾಡುವಾಗ ಎಚ್ಚರವಿಡಿ!
ಸೆ. 13ಕ್ಕೆ ವಿಘ್ನರಾಜ ಸಂಕಷ್ಟಿ ಚತುರ್ಥಿ: ಕಷ್ಟ ನಿವಾರಣೆ ಈ ಶುಭ ಮುಹೂರ್ತದಲ್ಲಿ ಪೂಜೆ ಮಾಡಿ
ವಿಘ್ನ ನಿವಾರಕನನ್ನು ಪ್ರಾರ್ಥಿಸಿದರೆ ಖಂಡಿತ ನಮ್ಮ ಬದುಕಿನಲ್ಲಿರುವ ಎಲ್ಲಾ ವಿಘ್ನಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ, ಕುಟುಂಬದಲ್ಲಿ ಸಂತೋಷ ಎಲ್ಲವನ್ನೂ ನೀಡುತ್ತಾನೆ. ಹಿಂದೂ ಧರ್ಮದಲ್ಲಿ ಯಾವುದೇ ದೇವರಿಗೆ ಪೂಜೆ ಸಲ್ಲಿಸುವ ಮುನ್ನ ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಯಾವುದೇ ಶುಭ ಕಾರ್ಯ ಪ್ರಾರಮಭ ಮಾಡುವ ಮುನ್ನ ಗಣೇಶನಿಗೆ ಪೂಜೆ ಮಾಡಲಾಗುವುದು. ಗಣೇಶನ ಪೂಜೆಗೆ ಸಂಕಷ್ಟಿ ತುಂಬಾ ವಿಶೇಷವಾದ ದಿನ.

ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಕೂಡ ಇದೆ. ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಯಾವಾಗ, ಈ ಸಂಕಷ್ಟಿಯ ಮಹತ್ವವೇನು ಎಂದು ನೋಡೋಣ ಬನ್ನಿ:

ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ?
ಪಂಚಾಂಗದ ಪ್ರಕಾರಶ್ವಿನ್ ಮಾಸದ ಕೃಷ್ಣ ಪಕ್ಷದ ಚತುರ್ಥಿ ತಿಥಿಯು ಮಂಗಳವಾರ, ಸೆಪ್ಟೆಂಬರ್ 13 ರಂದು ಬೆಳಗ್ಗೆ 10.37 ರಿಂದ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 14 ರಂದು ಬೆಳಗ್ಗೆ 10.23 ಕ್ಕೆ ಕೊನೆಗೊಳ್ಳುತ್ತದೆ.
ಸಂಕಷ್ಟಿ ಆಚರಣೆ
ಈಗ ಚತುರ್ಥಿಯಂದು ಉಪವಾಸವಿದ್ದು ಗಣೇಶನನ್ನು ಆರಾಧಿಸಬೇಕು. . ಸಂಕಷ್ಟಿ ಚತುರ್ಥಿಯನ್ನು ಸೆಪ್ಟೆಂಬರ್ 13ರಂದು ಆಚರಿಸಲಾಗುವುದು.

ವಿಘ್ನರಾಜ ಸಂಕಷ್ಟಿ ಚತುರ್ಥಿ ಮುಹೂರ್ತ ಮತ್ತು ಯೋಗ
ಸಂಕಷ್ಟಿ ಚತುರ್ಥಿಯ ದಿನ ಬೆಳಗ್ಗೆ 07.37ರ ವರೆಗೆ ವೃದ್ಧಿ ಯೋಗವಿದ್ದು, ಬಳಿಕ ಧ್ರುವಯೋಗ ನಡೆಯಲಿದೆ. ಇವುಗಳಲ್ಲದೆ ಈ ದಿನ ಬಳಿಗ್ಗೆ 06:36 ರಿಂದ ಮರುದಿನ ಬೆಳಿಗ್ಗೆ 06.05 ರವರೆಗೆ ಸರ್ವಾರ್ಥ ಸಿದ್ಧಿ ಯೋಗ ಮತ್ತು ಅಮೃತ ಸಿದ್ಧಿ ಯೋಗವೂ ಇದೆ. ಈ ಸಮಯದಲ್ಲಿ ಪೂಜೆ ಮಾಡಬಹುದು.
ಈ ಶುಭ ಯೋಗಗಳಲ್ಲಿ ಗಣೇಶ, ವಿಘ್ನರಾಜನನ್ನು ಪೂಜಿಸುವುದರಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ತೊಂದರೆಗಳು ನಿವಾರಣೆಯಾಗುತ್ತವೆ. ಈ ದಿನ ಗಣೇಶನಿಗೆ ಮೋದಕ ಮತ್ತು ದೂರವನ್ನು ಅರ್ಪಿಸಲು ಮರೆಯಬೇಡಿ.

ವಿಘ್ನರಾಜ್ ಸಂಕಷ್ಟಿ ಚತುರ್ಥಿ 2022 ಚಂದ್ರೋದಯ ಸಮಯ
ಸೆಪ್ಟೆಂಬರ್ 13ರಂದು ರಾತ್ರಿ 08:26 ಕ್ಕೆ ಚಂದ್ರೋದಯವಾಗುತ್ತದೆ. ಉಪವಾಸ ಮಾಡುವವರು ಚಂದ್ರೋದಯದ ಸಮಯದಲ್ಲಿ ಚಂದ್ರನಿಗೆ ಆರ್ಘ್ಯ ಸಲ್ಲಿಸಿ ಪೂಜಿಸಿ,, ಉಪವಾಸವನ್ನು ಮುರಿಯಿರಿ.



Click it and Unblock the Notifications











