Latest Updates
-
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ತುಲಾದಿಂದ ಮೀನ ರಾಶಿವರೆಗಿನ ವಾರ ಭವಿಷ್ಯ! -
Weekly Horoscope: ಮಾರ್ಚ್ 22 ರಿಂದ ಮಾರ್ಚ್ 29ರ ವರೆಗೆ ಮೇಷದಿಂದ ಕನ್ಯಾ ರಾಶಿವರೆಗಿನ ವಾರ ಭವಿಷ್ಯ! -
ಮಳೆಗಾಲಕ್ಕೆ ತಯಾರಾಗಿ: ನಿತ್ಯ ಊಟದೊಂದಿಗೆ ಸವಿಯಲು ರವೆ ಸಂಡಿಗೆ ಮಾಡಿ! -
ಮೀನ ರಾಶಿಯಲ್ಲಿ ಶನಿ-ಮಂಗಳ ಸಂಯೋಗ: ಅಪರೂಪದ ಸಮ್ಮಿಲನವು ತರಲಿದೆ ಬಿಕ್ಕಟ್ಟು, ಆರ್ಥಿಕ ಸಮಸ್ಯೆ! -
ಈ 2 ರಾಶಿಯವರ ಪ್ರೇಮ ಸಂಬಂಧಗಳು ಸಿಹಿ! ಸಣ್ಣಪುಟ್ಟ ಸಮಸ್ಯೆಗಳು ಖಚಿತ -
March 21 Horoscope: ಹೊಸ ಆರಂಭಗಳಲ್ಲಿ ಹಣ ಹೂಡಿಕೆಗೆ ಯೋಗ್ಯ ದಿನ! -
ಒಂದು ಹನಿ ಎಣ್ಣೆ ಇಲ್ಲದೆ ಮಾಡಿ ದಹೀ ಭಲ್ಲಾ! ರುಚಿ, ಆರೋಗ್ಯದಲ್ಲಿ ರಾಜಿ ಇಲ್ಲ.. ತೂಕ ಡಬಲ್ ಇಳಿಯುತ್ತೆ -
ಸುಸ್ತು & ಆಯಾಸದಿಂದ ಬಳಲುತ್ತಿದ್ದೀರಾ? ಈ ರಾಗಿ ಖರ್ಜೂರದ ಲಾಡು ಸೇವಿಸಿ.. ಸಕ್ಕರೆ, ಬೆಲ್ಲ ಬೇಕಿಲ್ಲ.. ಮಾಡೋದು ಹೇಗೆ? -
ಎಂದಾದ್ರೂ ಚೆಟ್ಟಿನಾಡ್ ಚಿಕನ್ ಸವಿದ್ದೀರಾ? ಬಾಯಲ್ಲಿ ನೀರೂರಿರುವ ರುಚಿ.. ಮಸಾಲೆ ರುಬ್ಬದೇ ಮಾಡಿ -
ಕುಂಭ ರಾಶಿಯಲ್ಲಿ ಬುಧ ಮಾರ್ಗಿ: ಈ ರಾಶಿಯವರಿಗೆ ಶುಭಕಾಲ ಆರಂಭ! ಕಷ್ಟಗಳಿಗೆ ಮುಕ್ತಿ.. ಕುಬೇರನ ಕೃಪೆ ಶುರು
ಸೆ. 13ಕ್ಕೆ ವಿಘ್ನರಾಜ ಸಂಕಷ್ಟಿ ಚತುರ್ಥಿ: ಕಷ್ಟ ನಿವಾರಣೆ ಈ ಶುಭ ಮುಹೂರ್ತದಲ್ಲಿ ಪೂಜೆ ಮಾಡಿ
ವಿಘ್ನ ನಿವಾರಕನನ್ನು ಪ್ರಾರ್ಥಿಸಿದರೆ ಖಂಡಿತ ನಮ್ಮ ಬದುಕಿನಲ್ಲಿರುವ ಎಲ್ಲಾ ವಿಘ್ನಗಳನ್ನು ದೂರ ಮಾಡಿ ಮನಸ್ಸಿಗೆ ನೆಮ್ಮದಿ, ಕುಟುಂಬದಲ್ಲಿ ಸಂತೋಷ ಎಲ್ಲವನ್ನೂ ನೀಡುತ್ತಾನೆ. ಹಿಂದೂ ಧರ್ಮದಲ್ಲಿ ಯಾವುದೇ ದೇವರಿಗೆ ಪೂಜೆ ಸಲ್ಲಿಸುವ ಮುನ್ನ ಶ್ರೀ ಗಣೇಶನಿಗೆ ಪೂಜೆ ಸಲ್ಲಿಸಿದ ಬಳಿಕವಷ್ಟೇ ಪೂಜೆ ಮಾಡಲಾಗುವುದು, ಯಾವುದೇ ಶುಭ ಕಾರ್ಯ ಪ್ರಾರಮಭ ಮಾಡುವ ಮುನ್ನ ಗಣೇಶನಿಗೆ ಪೂಜೆ ಮಾಡಲಾಗುವುದು. ಗಣೇಶನ ಪೂಜೆಗೆ ಸಂಕಷ್ಟಿ ತುಂಬಾ ವಿಶೇಷವಾದ ದಿನ.

ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಕೂಡ ಇದೆ. ಈ ತಿಂಗಳಿನಲ್ಲಿ ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ? ಪೂಜೆಗೆ ಶುಭ ಮುಹೂರ್ತ ಯಾವಾಗ, ಈ ಸಂಕಷ್ಟಿಯ ಮಹತ್ವವೇನು ಎಂದು ನೋಡೋಣ ಬನ್ನಿ:

ವಿಘ್ನರಾಜ ಸಂಕಷ್ಟಿ ಚತುರ್ಥಿ ಯಾವಾಗ?
ಪಂಚಾಂಗದ ಪ್ರಕಾರಶ್ವಿನ್ ಮಾಸದ ಕೃಷ್ಣ ಪಕ್ಷದ ಚತುರ್ಥಿ ತಿಥಿಯು ಮಂಗಳವಾರ, ಸೆಪ್ಟೆಂಬರ್ 13 ರಂದು ಬೆಳಗ್ಗೆ 10.37 ರಿಂದ ಪ್ರಾರಂಭವಾಗಿ ಮರುದಿನ ಸೆಪ್ಟೆಂಬರ್ 14 ರಂದು ಬೆಳಗ್ಗೆ 10.23 ಕ್ಕೆ ಕೊನೆಗೊಳ್ಳುತ್ತದೆ.
ಸಂಕಷ್ಟಿ ಆಚರಣೆ
ಈಗ ಚತುರ್ಥಿಯಂದು ಉಪವಾಸವಿದ್ದು ಗಣೇಶನನ್ನು ಆರಾಧಿಸಬೇಕು. . ಸಂಕಷ್ಟಿ ಚತುರ್ಥಿಯನ್ನು ಸೆಪ್ಟೆಂಬರ್ 13ರಂದು ಆಚರಿಸಲಾಗುವುದು.

ವಿಘ್ನರಾಜ ಸಂಕಷ್ಟಿ ಚತುರ್ಥಿ ಮುಹೂರ್ತ ಮತ್ತು ಯೋಗ
ಸಂಕಷ್ಟಿ ಚತುರ್ಥಿಯ ದಿನ ಬೆಳಗ್ಗೆ 07.37ರ ವರೆಗೆ ವೃದ್ಧಿ ಯೋಗವಿದ್ದು, ಬಳಿಕ ಧ್ರುವಯೋಗ ನಡೆಯಲಿದೆ. ಇವುಗಳಲ್ಲದೆ ಈ ದಿನ ಬಳಿಗ್ಗೆ 06:36 ರಿಂದ ಮರುದಿನ ಬೆಳಿಗ್ಗೆ 06.05 ರವರೆಗೆ ಸರ್ವಾರ್ಥ ಸಿದ್ಧಿ ಯೋಗ ಮತ್ತು ಅಮೃತ ಸಿದ್ಧಿ ಯೋಗವೂ ಇದೆ. ಈ ಸಮಯದಲ್ಲಿ ಪೂಜೆ ಮಾಡಬಹುದು.
ಈ ಶುಭ ಯೋಗಗಳಲ್ಲಿ ಗಣೇಶ, ವಿಘ್ನರಾಜನನ್ನು ಪೂಜಿಸುವುದರಿಂದ ನಿಮ್ಮ ಇಷ್ಟಾರ್ಥಗಳು ಈಡೇರುತ್ತವೆ ಮತ್ತು ತೊಂದರೆಗಳು ನಿವಾರಣೆಯಾಗುತ್ತವೆ. ಈ ದಿನ ಗಣೇಶನಿಗೆ ಮೋದಕ ಮತ್ತು ದೂರವನ್ನು ಅರ್ಪಿಸಲು ಮರೆಯಬೇಡಿ.

ವಿಘ್ನರಾಜ್ ಸಂಕಷ್ಟಿ ಚತುರ್ಥಿ 2022 ಚಂದ್ರೋದಯ ಸಮಯ
ಸೆಪ್ಟೆಂಬರ್ 13ರಂದು ರಾತ್ರಿ 08:26 ಕ್ಕೆ ಚಂದ್ರೋದಯವಾಗುತ್ತದೆ. ಉಪವಾಸ ಮಾಡುವವರು ಚಂದ್ರೋದಯದ ಸಮಯದಲ್ಲಿ ಚಂದ್ರನಿಗೆ ಆರ್ಘ್ಯ ಸಲ್ಲಿಸಿ ಪೂಜಿಸಿ,, ಉಪವಾಸವನ್ನು ಮುರಿಯಿರಿ.



Click it and Unblock the Notifications