Latest Updates
-
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು! -
ದೆಹಲಿ ವಾಯು ಮಾಲಿನ್ಯ: ಮನೆಯಲ್ಲಿ ಶುದ್ಧ ಗಾಳಿ ಪಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಪ್ಯಾಕ್ ಮಾಡಿದ ಆಹಾರದ ಮೇಲೆ 'ರೆಡ್ ಹೆಕ್ಸಗನ್' ಎಚ್ಚರಿಕೆ: ಇನ್ಮುಂದೆ ತಿನ್ನುವ ಮುನ್ನ ಈ ವಿಷಯ ಗಮನಿಸಿ! -
ಆಪಲ್ 'ಸರ್ಪ್ರೈಸ್ ಆಂಡ್ ಶೈನ್' ಈವೆಂಟ್: ಐಫೋನ್ 18 ಪ್ರೋ ಮತ್ತು ಫೋಲ್ಡಬಲ್ ಆಲ್ಟ್ರಾ ಲಾಂಚ್, ಭಾರತದಲ್ಲಿ ಬೆಲೆ ಎಷ್ಟು? -
ಟಾಟಾ ಮುಂಬೈ ಮ್ಯಾರಥಾನ್ ಡ್ರೀಮ್ ರನ್: ಇಂದೇ ನೋಂದಣಿ ಮುಕ್ತಾಯ, ಓಟಕ್ಕೆ ಸಜ್ಜಾಗಲು 20 ನಿಮಿಷದ ಪ್ಲಾನ್ ಇಲ್ಲಿದೆ! -
ಲೈವ್-ಇನ್ ಸಂಬಂಧಕ್ಕೂ ಅನ್ವಯವಾಗುತ್ತೆ 498A: ಕಲ್ಕತ್ತಾ ಹೈಕೋರ್ಟ್ ಮಹತ್ವದ ತೀರ್ಪು ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಕ್ರಮಗಳು -
ಬೆಂಗಳೂರಿನ ಬಿಸಿಲಿಗೆ ಹೈರಾಣಾಗಿದ್ದೀರಾ? ಎಸಿ ಇಲ್ಲದೆ ಮನೆ ತಂಪು ಮಾಡೋದು ಹೇಗೆ? ಇಲ್ಲಿದೆ ಸಿಂಪಲ್ ಟಿಪ್ಸ್ -
ವೆಜ್ ಥಾಲಿ ಬೆಲೆ ಗಗನಕ್ಕೆ: ಕಡಿಮೆ ಖರ್ಚಿನಲ್ಲಿ ಪೌಷ್ಟಿಕ ಊಟ ತಯಾರಿಸುವ ಸರಳ ಟಿಪ್ಸ್ -
ಶಿವಾಜಿನಗರ ಸೇಂಟ್ ಮೇರಿಸ್ ಬಾಸಿಲಿಕಾ ಜಾತ್ರೆ: ಇಂದಿನ ಸಂಚಾರ ಮಾರ್ಗ ಬದಲಾವಣೆ ಮತ್ತು ಪಾರ್ಕಿಂಗ್ ಬಗ್ಗೆ ನೀವು ತಿಳಿಯಲೇಬೇಕಾದ ವಿಷಯಗಳು!
Vinayaka Chaturthi March 2021: ಗಣೇಶನ ಭಕ್ತರಿಗೆ ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಮಾರ್ಚ್ 17ಕ್ಕೆ ವಿನಾಯಕ ಚತುರ್ಥಿ. ವಿಘ್ನ ನಿವಾರಕನನ್ನು ಆರಾಧಿಸುವ ದಿನ. ವಿಘ್ನ ನಿವಾರಕನನ್ನು ಆರಾಧಿಸಿದರೆ ಆತ ಎಂದಿಗೂ ತನ್ನ ಭಕ್ತರನ್ನು ಕೈ ಬಿಡುವುದಿಲ್ಲ. ವಿನಾಯಕ ಚತುರ್ಥಿಯನ್ನು ಪ್ರತಿ ತಿಂಗಳು ಆಚರಿಸಲಾಗುವುದು.

ಈ ದಿನ ಭಕ್ತರು ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛ ಮಾಡಿ, ಸ್ನಾನ ಮಾಡಿ ಮಧ್ಯಾಹ್ನ ವಿನಾಯಕನಿಗೆ ಪೂಜೆ ಮಾಡಿ ಸೂರ್ಯ ಮುಳುಗುವವರೆಗೆ ಉಪವಾಸ ವ್ರತ ಪಾಲಿಸುತ್ತಾರೆ.
ನಾವಿಲ್ಲಿ ವಿನಾಯಕ ಚತುರ್ಥಿ ಮುಹೂರ್ತ, ತಿಥಿ ಸಮಯ, ವ್ರತದ ನಿಯಮಗಳ ಕುರಿತು ಹೇಳಲಾಗಿದೆ ನೋಡಿ:

ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ
ಕೃಷ್ಣ ಪಕ್ಷದಲ್ಲಿ ಸಂಕಷ್ಟಿ ಆಚರಿಸಿದರೆ ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ ಆಚರಿಸಲಾಗುವುದು. ಈ ದಿನ ಭಕ್ತರು ಬೆಳಗ್ಗೆಯಿಂದ ಉಪವಾಸವಿದ್ದು ಸೂರ್ಯಾಸ್ತವಾದ ಮೇಲೆ ಉಪವಾಸ ವ್ರತ ಮುಕ್ತಾಯವಾಗುವುದು.

ಮುಹೂರ್ತ, ತಿಥಿ ಸಮಯ
ವಿನಾಯಕ ಚತುರ್ಥಿಯ ತಿಥಿ ಪ್ರಾರಂಭ ಮಾರ್ಚ್ 16, 8:58ಕ್ಕೆ ಪ್ರಾರಂಭ
ಮುಕ್ತಾಯ: ಮಾರ್ಚ್ 17, ರಾತ್ರಿ 11:28
ಪೂಜೆಗೆ ಸಮಯ: ಬೆಳಗ್ಗೆ 11:17ರಿಂದ ಮಧ್ಯಾಹ್ನ 1:42

ವಿನಾಯಕ ಚತುರ್ಥಿಯಂದು ಪಾಲಿಸಬೇಕಾದ ನಿಯಮಗಳು
* ಬೆಳಗ್ಗೆ ಬೇಗನೆ ಅಂದ್ರೆ ಸೂರ್ಯೋದಯಕ್ಕಿಂತ 2 ಗಂಟೆ ಮುಂಚೆ ಎದ್ದೇಳಿ.
* ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ.
* ಈ ದಿನ ಏನಾದರೂ ಸಂಕಲ್ಪ ಕೈಗೊಳ್ಳಿ.
* ಗಣೇಶನಿಗೆ ಧ್ಯಾನ ಮಾಡಿ.
* ದೇವರಿಗೆ ಅರ್ಘ್ಯ ನೀಡಿ.
* ಈ ದಿನ ಈರುಳ್ಳಿ, ಬೆಳ್ಳುಳ್ಳಿ, ಮಾಂಸ ಸೇವಿಸಬೇಡಿ.
* ಈ ದಿನ ತಂಬಾಕು ಹಾಗೂ ಮದ್ಯ ಸೇವನೆ ಒಳ್ಳೆಯದಲ್ಲ.
* ಪೂಜಾ ಸಮಯದಲ್ಲಿ ಪೂಜೆ ಸಲ್ಲಿಸಿ.
* ಗಣೇಶನಿಗೆ ಮೋದಕ, ಹಣ್ಣುಮ ಹಂಪಲು ಅರ್ಪಿಸಿ.

ಮಹತ್ವ
ಈ ದಿನ ಗಣೇಶನನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತೆ ಅಲ್ಲದೆ ಏನಾದರೂ ಸಂಕಲ್ಪ ತೆಗೆದುಕೊಂಡರೆ ಅದು ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ಅಚಲ ನಂಬಿಕೆ ಆತನನ್ನು ನಂಬಿದ ಭಕ್ತರಲ್ಲಿ ಇರುತ್ತದೆ.



Click it and Unblock the Notifications
