Latest Updates
-
ಬಿಸಿಲ ಧಗೆಯಲ್ಲಿ ಮದುವೆ ಸಮಾರಂಭಗಳ ಸಂಕಟ: ಅತಿಥಿಗಳಿಗೂ ನಿಮಗೂ ಆರಾಮ ನೀಡುವ ಸೀಕ್ರೆಟ್ ಟಿಪ್ಸ್ ಇಲ್ಲಿದೆ! -
ಬಿಸಿಲ ಬೇಗೆಯಿಂದ ಮನೆ ತತ್ತರ: ಎಸಿ ಇಲ್ಲದೆಯೇ ಮನೆಯನ್ನು ತಂಪಾಗಿಡಲು ಮತ್ತು ಗಿಡಗಳನ್ನು ಉಳಿಸಲು ಈ ಸರಳ ಉಪಾಯಗಳನ್ನು ಮಿಸ್ ಮಾಡ್ಬೇಡಿ! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ದೇಹವನ್ನು ತಂಪಾಗಿಡಲು ಈ ಆಹಾರ ಕ್ರಮಗಳನ್ನು ಪಾಲಿಸಿ, ಆರೋಗ್ಯವಾಗಿರಿ! -
ಕಾನ್ ರೆಡ್ ಕಾರ್ಪೆಟ್ ಮೇಲೆ ದಿಶಾ ಮದನ್ ಅಬ್ಬರ: ಹಳೆಯ ಸೀರೆಯಿಂದ ಸೃಷ್ಟಿಯಾದ ಈ ಫ್ಯಾಷನ್ ಮ್ಯಾಜಿಕ್ ನೋಡಿ! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಜೀವಕ್ಕೆ ಅಪಾಯವಾಗದಂತೆ ತಡೆಯಲು ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಬಿಸಿಲ ಬೇಗೆಯಲ್ಲಿ ದಂಪತಿಗಳ ನಡುವೆ ಹೆಚ್ಚಿದ ಕಿರಿಕಿರಿ: ಸಂಬಂಧ ಹಾಳಾಗದಂತೆ ತಡೆಯಲು ಈ ಟಿಪ್ಸ್ ಪಾಲಿಸಿ -
ಬಿಸಿಗಾಳಿಯ ಆರ್ಭಟಕ್ಕೆ ಹೆದರಬೇಡಿ: ಎಸಿ ಇಲ್ಲದಿದ್ದರೂ ನಿಮ್ಮ ಮನೆಯನ್ನು ಐಸ್ನಂತೆ ತಂಪಾಗಿರಿಸುವ ಅದ್ಭುತ ಟ್ರಿಕ್ಸ್! -
ಬಿಸಿಲ ಬೇಗೆಯಿಂದ ಸುಸ್ತಾಗಿದ್ದೀರಾ? ಹೀಟ್ಸ್ಟ್ರೋಕ್ ತಡೆಯಲು ಈ ಆಹಾರಗಳೇ ನಿಮ್ಮ ಬೆಸ್ಟ್ ಫ್ರೆಂಡ್! -
ಬಿಸಿಲ ಬೇಗೆಯಲ್ಲಿ ವರ್ಕೌಟ್ ಮಾಡ್ತಿದ್ದೀರಾ? ನಿಮ್ಮ ಆರೋಗ್ಯಕ್ಕೆ ಕಾದಿದೆ ದೊಡ್ಡ ಅಪಾಯ, ಎಚ್ಚರವಿರಲಿ! -
ಬಿಸಿಲ ಬೇಗೆಯಲ್ಲಿ ಮದುವೆ ಮಾಡ್ತಿದ್ದೀರಾ? ಅತಿಥಿಗಳ ಆರೋಗ್ಯಕ್ಕಾಗಿ ಈ ಸಣ್ಣ ಬದಲಾವಣೆಗಳನ್ನು ಮಿಸ್ ಮಾಡ್ಬೇಡಿ!
Vinayaka Chaturthi March 2021: ಗಣೇಶನ ಭಕ್ತರಿಗೆ ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಮಾರ್ಚ್ 17ಕ್ಕೆ ವಿನಾಯಕ ಚತುರ್ಥಿ. ವಿಘ್ನ ನಿವಾರಕನನ್ನು ಆರಾಧಿಸುವ ದಿನ. ವಿಘ್ನ ನಿವಾರಕನನ್ನು ಆರಾಧಿಸಿದರೆ ಆತ ಎಂದಿಗೂ ತನ್ನ ಭಕ್ತರನ್ನು ಕೈ ಬಿಡುವುದಿಲ್ಲ. ವಿನಾಯಕ ಚತುರ್ಥಿಯನ್ನು ಪ್ರತಿ ತಿಂಗಳು ಆಚರಿಸಲಾಗುವುದು.

ಈ ದಿನ ಭಕ್ತರು ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛ ಮಾಡಿ, ಸ್ನಾನ ಮಾಡಿ ಮಧ್ಯಾಹ್ನ ವಿನಾಯಕನಿಗೆ ಪೂಜೆ ಮಾಡಿ ಸೂರ್ಯ ಮುಳುಗುವವರೆಗೆ ಉಪವಾಸ ವ್ರತ ಪಾಲಿಸುತ್ತಾರೆ.
ನಾವಿಲ್ಲಿ ವಿನಾಯಕ ಚತುರ್ಥಿ ಮುಹೂರ್ತ, ತಿಥಿ ಸಮಯ, ವ್ರತದ ನಿಯಮಗಳ ಕುರಿತು ಹೇಳಲಾಗಿದೆ ನೋಡಿ:

ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ
ಕೃಷ್ಣ ಪಕ್ಷದಲ್ಲಿ ಸಂಕಷ್ಟಿ ಆಚರಿಸಿದರೆ ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ ಆಚರಿಸಲಾಗುವುದು. ಈ ದಿನ ಭಕ್ತರು ಬೆಳಗ್ಗೆಯಿಂದ ಉಪವಾಸವಿದ್ದು ಸೂರ್ಯಾಸ್ತವಾದ ಮೇಲೆ ಉಪವಾಸ ವ್ರತ ಮುಕ್ತಾಯವಾಗುವುದು.

ಮುಹೂರ್ತ, ತಿಥಿ ಸಮಯ
ವಿನಾಯಕ ಚತುರ್ಥಿಯ ತಿಥಿ ಪ್ರಾರಂಭ ಮಾರ್ಚ್ 16, 8:58ಕ್ಕೆ ಪ್ರಾರಂಭ
ಮುಕ್ತಾಯ: ಮಾರ್ಚ್ 17, ರಾತ್ರಿ 11:28
ಪೂಜೆಗೆ ಸಮಯ: ಬೆಳಗ್ಗೆ 11:17ರಿಂದ ಮಧ್ಯಾಹ್ನ 1:42

ವಿನಾಯಕ ಚತುರ್ಥಿಯಂದು ಪಾಲಿಸಬೇಕಾದ ನಿಯಮಗಳು
* ಬೆಳಗ್ಗೆ ಬೇಗನೆ ಅಂದ್ರೆ ಸೂರ್ಯೋದಯಕ್ಕಿಂತ 2 ಗಂಟೆ ಮುಂಚೆ ಎದ್ದೇಳಿ.
* ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ.
* ಈ ದಿನ ಏನಾದರೂ ಸಂಕಲ್ಪ ಕೈಗೊಳ್ಳಿ.
* ಗಣೇಶನಿಗೆ ಧ್ಯಾನ ಮಾಡಿ.
* ದೇವರಿಗೆ ಅರ್ಘ್ಯ ನೀಡಿ.
* ಈ ದಿನ ಈರುಳ್ಳಿ, ಬೆಳ್ಳುಳ್ಳಿ, ಮಾಂಸ ಸೇವಿಸಬೇಡಿ.
* ಈ ದಿನ ತಂಬಾಕು ಹಾಗೂ ಮದ್ಯ ಸೇವನೆ ಒಳ್ಳೆಯದಲ್ಲ.
* ಪೂಜಾ ಸಮಯದಲ್ಲಿ ಪೂಜೆ ಸಲ್ಲಿಸಿ.
* ಗಣೇಶನಿಗೆ ಮೋದಕ, ಹಣ್ಣುಮ ಹಂಪಲು ಅರ್ಪಿಸಿ.

ಮಹತ್ವ
ಈ ದಿನ ಗಣೇಶನನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತೆ ಅಲ್ಲದೆ ಏನಾದರೂ ಸಂಕಲ್ಪ ತೆಗೆದುಕೊಂಡರೆ ಅದು ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ಅಚಲ ನಂಬಿಕೆ ಆತನನ್ನು ನಂಬಿದ ಭಕ್ತರಲ್ಲಿ ಇರುತ್ತದೆ.



Click it and Unblock the Notifications