Latest Updates
-
ಮಾವಿನ ಹಣ್ಣು ಖರೀದಿಸುವ ಮುನ್ನ ಈ ತಪ್ಪು ಮಾಡಬೇಡಿ! -
ಅಕ್ಷಯ ತೃತೀಯ ಚಿನ್ನದ ಖರೀದಿ: ಈ ಆಫರ್ ಮಿಸ್ ಮಾಡ್ಬೇಡಿ! -
ಬಿಸಿಲ ಧಗೆಯಲ್ಲೂ ಫಿಟ್ ಆಗಿರಲು ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಷಯ ತೃತೀಯ: ಸಾಲದ ಸುಳಿಯಿಲ್ಲದೆ ಚಿನ್ನ ಖರೀದಿಸುವುದು ಹೇಗೆ? -
ಬಿಸಿಲಿನ ತಾಪ: ನಿಮ್ಮ ಮನೆಯನ್ನು ತಂಪಾಗಿಡಲು ಅದ್ಭುತ ಟಿಪ್ಸ್ -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ತಂಪು ಆಹಾರಗಳೇ ಮದ್ದು -
ಹಬ್ಬದ ಸೀರೆ ಫ್ಯಾಷನ್: ಈ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಬಿಸಿಗಾಳಿ ಎಚ್ಚರಿಕೆ: ಸುಡುವ ಬಿಸಿಲಿನಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ -
ಸುಪ್ರೀಂ ಕೋರ್ಟ್ ಶಾಕ್: ವಿಚ್ಛೇದನ ಒಪ್ಪಂದ ಮುರಿದರೆ ಕಾದಿದೆ ಕಠಿಣ ಶಿಕ್ಷೆ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
Vinayaka Chaturthi March 2021: ಗಣೇಶನ ಭಕ್ತರಿಗೆ ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಮಾರ್ಚ್ 17ಕ್ಕೆ ವಿನಾಯಕ ಚತುರ್ಥಿ. ವಿಘ್ನ ನಿವಾರಕನನ್ನು ಆರಾಧಿಸುವ ದಿನ. ವಿಘ್ನ ನಿವಾರಕನನ್ನು ಆರಾಧಿಸಿದರೆ ಆತ ಎಂದಿಗೂ ತನ್ನ ಭಕ್ತರನ್ನು ಕೈ ಬಿಡುವುದಿಲ್ಲ. ವಿನಾಯಕ ಚತುರ್ಥಿಯನ್ನು ಪ್ರತಿ ತಿಂಗಳು ಆಚರಿಸಲಾಗುವುದು.

ಈ ದಿನ ಭಕ್ತರು ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛ ಮಾಡಿ, ಸ್ನಾನ ಮಾಡಿ ಮಧ್ಯಾಹ್ನ ವಿನಾಯಕನಿಗೆ ಪೂಜೆ ಮಾಡಿ ಸೂರ್ಯ ಮುಳುಗುವವರೆಗೆ ಉಪವಾಸ ವ್ರತ ಪಾಲಿಸುತ್ತಾರೆ.
ನಾವಿಲ್ಲಿ ವಿನಾಯಕ ಚತುರ್ಥಿ ಮುಹೂರ್ತ, ತಿಥಿ ಸಮಯ, ವ್ರತದ ನಿಯಮಗಳ ಕುರಿತು ಹೇಳಲಾಗಿದೆ ನೋಡಿ:

ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ
ಕೃಷ್ಣ ಪಕ್ಷದಲ್ಲಿ ಸಂಕಷ್ಟಿ ಆಚರಿಸಿದರೆ ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ ಆಚರಿಸಲಾಗುವುದು. ಈ ದಿನ ಭಕ್ತರು ಬೆಳಗ್ಗೆಯಿಂದ ಉಪವಾಸವಿದ್ದು ಸೂರ್ಯಾಸ್ತವಾದ ಮೇಲೆ ಉಪವಾಸ ವ್ರತ ಮುಕ್ತಾಯವಾಗುವುದು.

ಮುಹೂರ್ತ, ತಿಥಿ ಸಮಯ
ವಿನಾಯಕ ಚತುರ್ಥಿಯ ತಿಥಿ ಪ್ರಾರಂಭ ಮಾರ್ಚ್ 16, 8:58ಕ್ಕೆ ಪ್ರಾರಂಭ
ಮುಕ್ತಾಯ: ಮಾರ್ಚ್ 17, ರಾತ್ರಿ 11:28
ಪೂಜೆಗೆ ಸಮಯ: ಬೆಳಗ್ಗೆ 11:17ರಿಂದ ಮಧ್ಯಾಹ್ನ 1:42

ವಿನಾಯಕ ಚತುರ್ಥಿಯಂದು ಪಾಲಿಸಬೇಕಾದ ನಿಯಮಗಳು
* ಬೆಳಗ್ಗೆ ಬೇಗನೆ ಅಂದ್ರೆ ಸೂರ್ಯೋದಯಕ್ಕಿಂತ 2 ಗಂಟೆ ಮುಂಚೆ ಎದ್ದೇಳಿ.
* ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ.
* ಈ ದಿನ ಏನಾದರೂ ಸಂಕಲ್ಪ ಕೈಗೊಳ್ಳಿ.
* ಗಣೇಶನಿಗೆ ಧ್ಯಾನ ಮಾಡಿ.
* ದೇವರಿಗೆ ಅರ್ಘ್ಯ ನೀಡಿ.
* ಈ ದಿನ ಈರುಳ್ಳಿ, ಬೆಳ್ಳುಳ್ಳಿ, ಮಾಂಸ ಸೇವಿಸಬೇಡಿ.
* ಈ ದಿನ ತಂಬಾಕು ಹಾಗೂ ಮದ್ಯ ಸೇವನೆ ಒಳ್ಳೆಯದಲ್ಲ.
* ಪೂಜಾ ಸಮಯದಲ್ಲಿ ಪೂಜೆ ಸಲ್ಲಿಸಿ.
* ಗಣೇಶನಿಗೆ ಮೋದಕ, ಹಣ್ಣುಮ ಹಂಪಲು ಅರ್ಪಿಸಿ.

ಮಹತ್ವ
ಈ ದಿನ ಗಣೇಶನನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತೆ ಅಲ್ಲದೆ ಏನಾದರೂ ಸಂಕಲ್ಪ ತೆಗೆದುಕೊಂಡರೆ ಅದು ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ಅಚಲ ನಂಬಿಕೆ ಆತನನ್ನು ನಂಬಿದ ಭಕ್ತರಲ್ಲಿ ಇರುತ್ತದೆ.



Click it and Unblock the Notifications











