Latest Updates
-
ಮಾರ್ಚ್ 15ಕ್ಕೆ ರೇವತಿ ನಕ್ಷತ್ರಕ್ಕೆ ಶುಕ್ರ ಸಂಚಾರ: ಈ 4 ರಾಶಿಯವರಿಗೆ ಹೆಚ್ಚಲಿದೆ ಸಂಕಷ್ಟ! -
ಜಿಡ್ಡು ಬೊಜ್ಜು ಬೆಣ್ಣೆಯಂತೆ ಕರಗುತ್ತೆ! ದಿನಾ ಈ ಮ್ಯಾಜಿಕಲ್ ಸೂಪ್ ಕುಡಿಯಿರಿ.. 15 ದಿನಗಳಲ್ಲಿ ಕೊಬ್ಬು ಮಾಯ -
ಮೆಂತ್ಯ ಸೊಪ್ಪಿನ ಮೊಟ್ಟೆ ಪಲ್ಯ: ಊಟ, ತಿಂಡಿಯೊಂದಿಗೆ ಇದು ಬೆಸ್ಟ್! -
ಕಾಲಾಷ್ಟಮಿ 2026: ನಾಳೆ ಕಾಲಾಷ್ಟಮಿ ಆಚರಣೆ, ಶಿವನ ಉಗ್ರವತಾರ ಕಾಲಭೈರವನ ಪೂಜಿಸುವುದು ಏಕೆ? -
ಅಜ್ಜಿಯ ಕಾಲದ ಅಮೃತ! ಬೇಸಿಗೆಯಲ್ಲಿ ದೇಹ ತಂಪಾಗಿರಬೇಕಾ? ಒಂದು ಗ್ಲಾಸ್ ಸಾಕು.. ಟ್ರೈ ಮಾಡಿ ನೋಡಿ -
ಗುರು ನೇರ ಸಂಚಾರ: ಮಾರ್ಚ್ 11 ರಿಂದ ಗಜಕೇಸರಿ ಯೋಗ.. ಈ ರಾಶಿಯವರ ಸಕಲ ಕಷ್ಟಗಳಿಗೂ ಮುಕ್ತಿ ಸಿಗುವ ಕಾಲ -
ದೇಹಕ್ಕೆ ಬಲ ನೀಡುವ ಹುರಿದಕ್ಕಿ ಉಂಡೆ ಸಲೀಸಾಗಿ ಮಾಡಿ! ಇಲ್ಲಿದೆ ಸುಲಭದ ಮನೆಮದ್ದು! -
ಹೋಟೆಲ್ ರುಚಿಯ ಅಕ್ಕಿ ರೊಟ್ಟಿ.. ಮುರಿಯದಂತೆ ಸಾಫ್ಟ್ ಆಗಿ ಮಾಡೋದು ಹೇಗೆ? ಹೊಸಬರಿಗೆ ಕೂಡ ಸುಲಭ -
ಹೊಸ ಮನೆ, ವಾಹನ ಖರೀದಿಸುವ ಯೋಗ! ಜೀವನದಲ್ಲಿ ಹೆಚ್ಚಲಿದೆ ಸಂತಸ -
March 10 Horoscope: ಆದಾಯ ಗಳಿಕೆಯ ಆಸೆಯಿಂದ ಹಣ ಕಳೆದುಕೊಳ್ಳಬೇಡಿ
Vinayaka Chaturthi March 2021: ಗಣೇಶನ ಭಕ್ತರಿಗೆ ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಮಾರ್ಚ್ 17ಕ್ಕೆ ವಿನಾಯಕ ಚತುರ್ಥಿ. ವಿಘ್ನ ನಿವಾರಕನನ್ನು ಆರಾಧಿಸುವ ದಿನ. ವಿಘ್ನ ನಿವಾರಕನನ್ನು ಆರಾಧಿಸಿದರೆ ಆತ ಎಂದಿಗೂ ತನ್ನ ಭಕ್ತರನ್ನು ಕೈ ಬಿಡುವುದಿಲ್ಲ. ವಿನಾಯಕ ಚತುರ್ಥಿಯನ್ನು ಪ್ರತಿ ತಿಂಗಳು ಆಚರಿಸಲಾಗುವುದು.

ಈ ದಿನ ಭಕ್ತರು ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛ ಮಾಡಿ, ಸ್ನಾನ ಮಾಡಿ ಮಧ್ಯಾಹ್ನ ವಿನಾಯಕನಿಗೆ ಪೂಜೆ ಮಾಡಿ ಸೂರ್ಯ ಮುಳುಗುವವರೆಗೆ ಉಪವಾಸ ವ್ರತ ಪಾಲಿಸುತ್ತಾರೆ.
ನಾವಿಲ್ಲಿ ವಿನಾಯಕ ಚತುರ್ಥಿ ಮುಹೂರ್ತ, ತಿಥಿ ಸಮಯ, ವ್ರತದ ನಿಯಮಗಳ ಕುರಿತು ಹೇಳಲಾಗಿದೆ ನೋಡಿ:

ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ
ಕೃಷ್ಣ ಪಕ್ಷದಲ್ಲಿ ಸಂಕಷ್ಟಿ ಆಚರಿಸಿದರೆ ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ ಆಚರಿಸಲಾಗುವುದು. ಈ ದಿನ ಭಕ್ತರು ಬೆಳಗ್ಗೆಯಿಂದ ಉಪವಾಸವಿದ್ದು ಸೂರ್ಯಾಸ್ತವಾದ ಮೇಲೆ ಉಪವಾಸ ವ್ರತ ಮುಕ್ತಾಯವಾಗುವುದು.

ಮುಹೂರ್ತ, ತಿಥಿ ಸಮಯ
ವಿನಾಯಕ ಚತುರ್ಥಿಯ ತಿಥಿ ಪ್ರಾರಂಭ ಮಾರ್ಚ್ 16, 8:58ಕ್ಕೆ ಪ್ರಾರಂಭ
ಮುಕ್ತಾಯ: ಮಾರ್ಚ್ 17, ರಾತ್ರಿ 11:28
ಪೂಜೆಗೆ ಸಮಯ: ಬೆಳಗ್ಗೆ 11:17ರಿಂದ ಮಧ್ಯಾಹ್ನ 1:42

ವಿನಾಯಕ ಚತುರ್ಥಿಯಂದು ಪಾಲಿಸಬೇಕಾದ ನಿಯಮಗಳು
* ಬೆಳಗ್ಗೆ ಬೇಗನೆ ಅಂದ್ರೆ ಸೂರ್ಯೋದಯಕ್ಕಿಂತ 2 ಗಂಟೆ ಮುಂಚೆ ಎದ್ದೇಳಿ.
* ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ.
* ಈ ದಿನ ಏನಾದರೂ ಸಂಕಲ್ಪ ಕೈಗೊಳ್ಳಿ.
* ಗಣೇಶನಿಗೆ ಧ್ಯಾನ ಮಾಡಿ.
* ದೇವರಿಗೆ ಅರ್ಘ್ಯ ನೀಡಿ.
* ಈ ದಿನ ಈರುಳ್ಳಿ, ಬೆಳ್ಳುಳ್ಳಿ, ಮಾಂಸ ಸೇವಿಸಬೇಡಿ.
* ಈ ದಿನ ತಂಬಾಕು ಹಾಗೂ ಮದ್ಯ ಸೇವನೆ ಒಳ್ಳೆಯದಲ್ಲ.
* ಪೂಜಾ ಸಮಯದಲ್ಲಿ ಪೂಜೆ ಸಲ್ಲಿಸಿ.
* ಗಣೇಶನಿಗೆ ಮೋದಕ, ಹಣ್ಣುಮ ಹಂಪಲು ಅರ್ಪಿಸಿ.

ಮಹತ್ವ
ಈ ದಿನ ಗಣೇಶನನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತೆ ಅಲ್ಲದೆ ಏನಾದರೂ ಸಂಕಲ್ಪ ತೆಗೆದುಕೊಂಡರೆ ಅದು ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ಅಚಲ ನಂಬಿಕೆ ಆತನನ್ನು ನಂಬಿದ ಭಕ್ತರಲ್ಲಿ ಇರುತ್ತದೆ.



Click it and Unblock the Notifications











