Latest Updates
-
ಮಳೆಯ ನಡುವೆ ಯುಜಿಸಿ ನೆಟ್ ಪರೀಕ್ಷೆ: ಸಂಗಾತಿಯ ಈ ಸಣ್ಣ ಬೆಂಬಲವೇ ಯಶಸ್ಸಿನ ಗುಟ್ಟು -
ಮಳೆಗಾಲದಲ್ಲಿ ಮನೆಯ ಪೀಠೋಪಕರಣ ಹಾಳಾಗುತ್ತಿದೆಯೇ? ಬೂಸು ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ಮುಂಬೈ ಆರೆಂಜ್ ಅಲರ್ಟ್: ಮಳೆಯಲ್ಲಿ ಆಫೀಸ್ ಹೋಗುವವರೇ, ಈ 'ನೋ-ಕುಕ್' ಪ್ರೋಟೀನ್ ಮೀಲ್ಸ್ ಮಿಸ್ ಮಾಡ್ಬೇಡಿ! -
ಅಮೆಜಾನ್ ಪ್ರೈಮ್ ಡೇ ಸೇಲ್: ಕಡಿಮೆ ಬೆಲೆಗೆ ವಸ್ತುಗಳನ್ನು ಖರೀದಿಸಲು ಈ ಸ್ಮಾರ್ಟ್ ಟ್ರಿಕ್ಸ್ ಮಿಸ್ ಮಾಡ್ಬೇಡಿ! -
ಯೋಗದ ನಂತರ ಮೈಕೈ ನೋವು ಕಾಡುತ್ತಿದೆಯೇ? ಕಚೇರಿಯಲ್ಲಿ ಕೆಲಸ ಮಾಡುವಾಗ ಈ 12 ನಿಮಿಷದ ಟಿಪ್ಸ್ ಪಾಲಿಸಿ -
NEET ಮರುಪರೀಕ್ಷೆ ಮುಗಿದಿದೆ: ಮಕ್ಕಳ ಆತಂಕ ದೂರ ಮಾಡಲು ಪೋಷಕರು ಮಾಡಬೇಕಾದ ಅತ್ಯಗತ್ಯ ಕೆಲಸಗಳಿವು! -
ಪುಣೆ-ಮುಂಬೈ ಮಳೆಗಾಲ: ನಿಮ್ಮ ಮನೆಯನ್ನು ಸುರಕ್ಷಿತವಾಗಿಡಲು ಇಂದೇ ರಾತ್ರಿ ಈ 45 ನಿಮಿಷಗಳ ಕೆಲಸ ಮಾಡಿ! -
ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಎಚ್ಚರ: ಅತಿಸಾರ ತಡೆಯಲು ಮತ್ತು ಸುರಕ್ಷಿತ ಆಹಾರಕ್ಕಾಗಿ ಈ ಸರಳ ಟಿಪ್ಸ್ ಪಾಲಿಸಿ -
ಫಾದರ್ಸ್ ಡೇ 2026: ಅಪ್ಪನ ಮುಖದಲ್ಲಿ ನಗು ಮೂಡಿಸಲು ಇಲ್ಲಿದೆ ಸಿಂಪಲ್ ಮತ್ತು ಬೆಸ್ಟ್ ಐಡಿಯಾಗಳು! -
10ನೇ ಅಂತರಾಷ್ಟ್ರೀಯ ಯೋಗ ದಿನ: ಮಳೆಯನ್ನೂ ಮೀರಿ ಕೋಲ್ಕತ್ತಾದಲ್ಲಿ ಯೋಗ ಸಂಭ್ರಮ, ಮನೆಯಲ್ಲೇ ಅಭ್ಯಾಸ ಮಾಡಲು ಇಲ್ಲಿದೆ ಸರಳ ಟಿಪ್ಸ್!
Vinayaka Chaturthi March 2021: ಗಣೇಶನ ಭಕ್ತರಿಗೆ ಈ ದಿನ ತುಂಬಾ ಮಹತ್ವವಾದದ್ದು ಏಕೆ?
ಮಾರ್ಚ್ 17ಕ್ಕೆ ವಿನಾಯಕ ಚತುರ್ಥಿ. ವಿಘ್ನ ನಿವಾರಕನನ್ನು ಆರಾಧಿಸುವ ದಿನ. ವಿಘ್ನ ನಿವಾರಕನನ್ನು ಆರಾಧಿಸಿದರೆ ಆತ ಎಂದಿಗೂ ತನ್ನ ಭಕ್ತರನ್ನು ಕೈ ಬಿಡುವುದಿಲ್ಲ. ವಿನಾಯಕ ಚತುರ್ಥಿಯನ್ನು ಪ್ರತಿ ತಿಂಗಳು ಆಚರಿಸಲಾಗುವುದು.

ಈ ದಿನ ಭಕ್ತರು ಬೆಳಗ್ಗೆ ಎದ್ದು ಮನೆಯನ್ನು ಸ್ವಚ್ಛ ಮಾಡಿ, ಸ್ನಾನ ಮಾಡಿ ಮಧ್ಯಾಹ್ನ ವಿನಾಯಕನಿಗೆ ಪೂಜೆ ಮಾಡಿ ಸೂರ್ಯ ಮುಳುಗುವವರೆಗೆ ಉಪವಾಸ ವ್ರತ ಪಾಲಿಸುತ್ತಾರೆ.
ನಾವಿಲ್ಲಿ ವಿನಾಯಕ ಚತುರ್ಥಿ ಮುಹೂರ್ತ, ತಿಥಿ ಸಮಯ, ವ್ರತದ ನಿಯಮಗಳ ಕುರಿತು ಹೇಳಲಾಗಿದೆ ನೋಡಿ:

ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ
ಕೃಷ್ಣ ಪಕ್ಷದಲ್ಲಿ ಸಂಕಷ್ಟಿ ಆಚರಿಸಿದರೆ ಶುಕ್ಲ ಪಕ್ಷದ ನಾಲ್ಕನೇ ದಿನ ವಿನಾಯಕ ಚತುರ್ಥಿ ಆಚರಿಸಲಾಗುವುದು. ಈ ದಿನ ಭಕ್ತರು ಬೆಳಗ್ಗೆಯಿಂದ ಉಪವಾಸವಿದ್ದು ಸೂರ್ಯಾಸ್ತವಾದ ಮೇಲೆ ಉಪವಾಸ ವ್ರತ ಮುಕ್ತಾಯವಾಗುವುದು.

ಮುಹೂರ್ತ, ತಿಥಿ ಸಮಯ
ವಿನಾಯಕ ಚತುರ್ಥಿಯ ತಿಥಿ ಪ್ರಾರಂಭ ಮಾರ್ಚ್ 16, 8:58ಕ್ಕೆ ಪ್ರಾರಂಭ
ಮುಕ್ತಾಯ: ಮಾರ್ಚ್ 17, ರಾತ್ರಿ 11:28
ಪೂಜೆಗೆ ಸಮಯ: ಬೆಳಗ್ಗೆ 11:17ರಿಂದ ಮಧ್ಯಾಹ್ನ 1:42

ವಿನಾಯಕ ಚತುರ್ಥಿಯಂದು ಪಾಲಿಸಬೇಕಾದ ನಿಯಮಗಳು
* ಬೆಳಗ್ಗೆ ಬೇಗನೆ ಅಂದ್ರೆ ಸೂರ್ಯೋದಯಕ್ಕಿಂತ 2 ಗಂಟೆ ಮುಂಚೆ ಎದ್ದೇಳಿ.
* ಸ್ನಾನ ಮಾಡಿ ಶುಭ್ರವಾದ ಬಟ್ಟೆ ಧರಿಸಿ.
* ಈ ದಿನ ಏನಾದರೂ ಸಂಕಲ್ಪ ಕೈಗೊಳ್ಳಿ.
* ಗಣೇಶನಿಗೆ ಧ್ಯಾನ ಮಾಡಿ.
* ದೇವರಿಗೆ ಅರ್ಘ್ಯ ನೀಡಿ.
* ಈ ದಿನ ಈರುಳ್ಳಿ, ಬೆಳ್ಳುಳ್ಳಿ, ಮಾಂಸ ಸೇವಿಸಬೇಡಿ.
* ಈ ದಿನ ತಂಬಾಕು ಹಾಗೂ ಮದ್ಯ ಸೇವನೆ ಒಳ್ಳೆಯದಲ್ಲ.
* ಪೂಜಾ ಸಮಯದಲ್ಲಿ ಪೂಜೆ ಸಲ್ಲಿಸಿ.
* ಗಣೇಶನಿಗೆ ಮೋದಕ, ಹಣ್ಣುಮ ಹಂಪಲು ಅರ್ಪಿಸಿ.

ಮಹತ್ವ
ಈ ದಿನ ಗಣೇಶನನ್ನು ಆರಾಧನೆ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತೆ ಅಲ್ಲದೆ ಏನಾದರೂ ಸಂಕಲ್ಪ ತೆಗೆದುಕೊಂಡರೆ ಅದು ನೆರವೇರಲು ಗಣೇಶ ಸಹಾಯ ಮಾಡುತ್ತಾನೆ ಎಂಬ ಅಚಲ ನಂಬಿಕೆ ಆತನನ್ನು ನಂಬಿದ ಭಕ್ತರಲ್ಲಿ ಇರುತ್ತದೆ.



Click it and Unblock the Notifications