Latest Updates
-
ಕುಟುಂಬದಲ್ಲಿ ಉಡುಪಿನ ಬಗ್ಗೆ ಟೀಕೆಗಳೇ? ಈ 7 ವಾಕ್ಯಗಳ ಮೂಲಕ ಗೌರವಯುತವಾಗಿ ಉತ್ತರಿಸಿ! -
ಈರುಳ್ಳಿ ಬೆಲೆ ಏರಿಕೆ: ಅಡುಗೆಮನೆಯ ಬಜೆಟ್ ಉಳಿಸಲು ಸರಳ ಟಿಪ್ಸ್ ಮತ್ತು ಪರ್ಯಾಯಗಳು! -
ಪ್ಯಾಕೆಟ್ ಆಹಾರದ ಮೇಲೆ ಕಡ್ಡಾಯ ಎಚ್ಚರಿಕೆ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಅಂತಿಮ ಗಡುವು! -
ಇಂದಿನ ಪೆಟ್ರೋಲ್ ದರ ಸ್ಥಿರ: ಪ್ರಯಾಣದ ವೆಚ್ಚ ಉಳಿಸಲು ಈ 5 ಸಿಂಪಲ್ ಟಿಪ್ಸ್ ಫಾಲೋ ಮಾಡಿ! -
ದೆಹಲಿ ವಾಯು ಮಾಲಿನ್ಯ: ಆರೋಗ್ಯ ಕಾಪಾಡಿಕೊಳ್ಳಲು 12 ನಿಮಿಷದ ವರ್ಕೌಟ್ ಮತ್ತು ಸುರಕ್ಷತಾ ಟಿಪ್ಸ್ -
ಸ್ಮ್ಯಾಶ್ ಪ್ಯಾಟ್ರಿಯಾರ್ಕಿ: ದಂಪತಿಗಳ ನಡುವಿನ ಜಗಳಕ್ಕೆ 20 ನಿಮಿಷದ 'ಹೋಮ್ ರಿಸೆಟ್' ಪ್ಲಾನ್! -
ಮಳೆಗಾಲದಲ್ಲಿ ನಿಮ್ಮ ಮನೆ ಮತ್ತು ಬಲ್ಕನಿ ಸುರಕ್ಷಿತವಾಗಿಡಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್: ಕೇರಳದಲ್ಲಿ ಯೆಲ್ಲೋ ಅಲರ್ಟ್! -
ರಕ್ಷಾಬಂಧನಕ್ಕೆ ಪನ್ನೀರ್ ಖರೀದಿಸುವ ಮುನ್ನ ಎಚ್ಚರ: ಕಲಬೆರಕೆ ಪತ್ತೆ ಹಚ್ಚುವುದು ಹೇಗೆ? -
ರಾಖಿ ಹಬ್ಬ 2026: ಆಗಸ್ಟ್ 28ರಂದು ರಕ್ಷಾಬಂಧನ ಆಚರಣೆ; ಶುಭ ಮುಹೂರ್ತ ಮತ್ತು ಭದ್ರಾ ಕಾಲದ ಸಂಪೂರ್ಣ ಮಾಹಿತಿ ಇಲ್ಲಿದೆ -
ಬೆಂಗಳೂರು ಮಳೆ: ಮನೆಯಲ್ಲೇ ಮಾಡಿ 15 ನಿಮಿಷದ ನೋ-ಜಂಪ್ ವರ್ಕೌಟ್, ಫಿಟ್ ಆಗಿರಿ!
ಸೆ. 17ಕ್ಕೆ ವಿಶ್ವಕರ್ಮ ಪೂಜೆ: ಈ ದಿನ ಪೂಜೆಗೆ 3 ಮುಹೂರ್ತ ಇದೆ
ಪ್ರತಿ ವರ್ಷ ಬ್ರಹ್ಮಾಂಡದ ವಾಸ್ತುಶಿಲ್ಪಿ ಭಗವಂತ ವಿಶ್ವಕರ್ಮರ ಜನ್ಮದಿನವನ್ನು ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತದೆ. ಈ ಭೂಮಿಯಲ್ಲಿ ಇರುವುದೆಲ್ಲವೂ ಭಗವಂತ ವಿಶ್ವಕರ್ಮನಿಂದ ಸೃಷ್ಟಿಯಾಗಿದೆ ಎಂಬುದು ಒಂದು ನಂಬಿಕೆ. ಶಾಸ್ತ್ರಗಳ ಪ್ರಕಾರ, ಬ್ರಹ್ಮ ದೇವರು ಈ ಸಂಪೂರ್ಣ ಭೂ ಮಂಡಲವನ್ನು ಸೃಷ್ಟಿಸಿದನು ಎಂದು ನಂಬಲಾಗಿದೆ.

ಭಗವಂತ ವಿಶ್ವಕರ್ಮನನ್ನು ವಾಸ್ತು ಶಾಸ್ತ್ರದ ಪಿತಾಮಹ ಎಂದು ಪರಿಗಣಿಸಲಾಗಿದೆ. ಅದರಲ್ಲೂ ವಿಶ್ವಕರ್ಮ ಜಯಂತಿಯಂದು ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಬಳಸುವ ಸಾಮಾನು, ಉಪಕರಣಗಳಿಗೆ ಪೂಜೆ ಸಲ್ಲಿಸಿ, ಈ ದಿನ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಮಾಡುವುದಿಲ್ಲ.

ವಿಶ್ವಕರ್ಮ ಜಯಂತಿ ಪೂಜೆ 2022 ಶುಭ ಮುಹೂರ್ತ
ಹಿಂದೂ ಪಂಚಾಂಗದ ಪ್ರಕಾರ, ಸೆಪ್ಟೆಂಬರ್ 17 ರಂದು ವಿಶ್ವಕರ್ಮ ಪೂಜೆಗೆ ಮೂರು ಮಂಗಳಕರ ಸಮಯಗಳಿವೆ.
ಮೊದಲ ಶುಭ ಮುಹೂರ್ತ - ಬೆಳಗ್ಗೆ 07:39 ರಿಂದ ಬೆಳಗ್ಗೆ 09:11 ರವರೆಗೆ
ಎರಡನೇ ಶುಭ ಮುಹೂರ್ತ-ಮಧ್ಯಾಹ್ನ 01:48 ರಿಂದ 03:20 ರವರೆಗೆ
ಮೂರನೇ ಶುಭ ಮುಹೂರ್ತ - ಮಧ್ಯಾಹ್ನ 03:20 ರಿಂದ ಸಂಜೆ 04:52

ವಿಶ್ವಕರ್ಮ ಜಯಂತಿ ಪೂಜಾ ವಿಧಾನ
* ಮೊದಲನೆಯದಾಗಿ ವಿಶ್ವಕರ್ಮ ಜಯಂತಿಯಂದು ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ಮಡಿ ಬಟ್ಟೆಗಳನ್ನು ಧರಿಸಿ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ.
* ನಂತರ ಸಂಕಲ್ಪ ತೆಗೆದುಕೊಂಡು ವಿಶ್ವಕರ್ಮ ದೇವರ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಪ್ರಾರಂಭಿಸಿ.
* ವಿಶ್ವಕರ್ಮ ದೇವರ ವಿಗ್ರಹಕ್ಕೆ ಸಂಬಂಧಿಸಿದ ಸಾಧನಗಳನ್ನು ಪೂಜಿಸಿ.
*ಭಗವಂತ ವಿಶ್ವಕರ್ಮನಿಗೆ ವೀಳ್ಯದೆಲೆ, ಅರಿಶಿನ, ಅಕ್ಷತೆ, ಹೂವುಗಳು, ಲವಂಗ, ಹಣ್ಣುಗಳು ಮತ್ತು ಸಿಹಿತಿಂಡಿಗಳನ್ನು ಅರ್ಪಿಸಿ.
* ನಂತರ ಧೂಪ ಮತ್ತು ದೀಪಗಳನ್ನು ಬೆಳಗಿಸಿ, ಭಗವಂತ ವಿಶ್ವಕರ್ಮನನ್ನು ಪೂಜಿಸಿ ಮತ್ತು ರಕ್ಷಾಸೂತ್ರವನ್ನು ಅರ್ಪಿಸಿ.

ಪ್ರಗತಿಗಾಗಿ ಪ್ರಾರ್ಥಿಸಿ
ವಿಶ್ವಕರ್ಮ ದೇವರ ಪೂಜೆಯ ನಂತರ ಕಚೇರಿಯ ಯಂತ್ರಗಳು ಮತ್ತು ಉಪಕರಣಗಳನ್ನು ಪೂಜಿಸಿ.
ಕೊನೆಯಲ್ಲಿ, ಪೂಜೆಯಲ್ಲಿ ಯಾವುದೇ ತಪ್ಪಾಗಿದ್ದರೆ ವಿಶ್ವಕರ್ಮ ದೇವರಲ್ಲಿ ಕ್ಷಮೆಯಾಚಿಸಿ, ವ್ಯಾಪಾರದಲ್ಲಿ ಪ್ರಗತಿಗಾಗಿ ಪ್ರಾರ್ಥಿಸಿ ಮತ್ತು ಪ್ರಸಾದವನ್ನು ವಿತರಿಸಿ.



Click it and Unblock the Notifications