Latest Updates
-
ನೈನಿತಾಲ್ನಲ್ಲಿ ಭಾರಿ ಮಳೆ: ಶಾಲೆಗಳಿಗೆ ರಜೆ ಘೋಷಣೆ, ಪ್ರವಾಸಿಗರಿಗೆ ಹೈ ಅಲರ್ಟ್! -
ರಾಷ್ಟ್ರಧ್ವಜ ಅಂಗೀಕಾರ ದಿನ: ಧ್ವಜಾರೋಹಣದ ವೇಳೆ ಲವಲವಿಕೆಯಿಂದ ಇರಲು ಈ 'ತ್ರಿವರ್ಣ' ವ್ಯಾಯಾಮಗಳನ್ನು ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ಕೊನೆ ಕ್ಷಣದ ಗಡಿಬಿಡಿ ತಪ್ಪಿಸಲು ಈ ಸ್ಮಾರ್ಟ್ ಟಿಪ್ಸ್ ಪಾಲಿಸಿ -
ಮಳೆಗಾಲದ ತೇವಾಂಶದಿಂದ ಬಟ್ಟೆ ಹಾಳಾಗುತ್ತಿದೆಯೇ? ನಿಮ್ಮ ಕಬೋರ್ಡ್ ಮತ್ತು ಬಟ್ಟೆಗಳನ್ನು ರಕ್ಷಿಸಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಇನ್ಮುಂದೆ ಸ್ನ್ಯಾಕ್ಸ್ ಪ್ಯಾಕೆಟ್ ಮೇಲೆ ಎಚ್ಚರಿಕೆ! FSSAI ತರುತ್ತಿದೆ ಹೊಸ ನಿಯಮ, ಗ್ರಾಹಕರಿಗೆ ಲಾಭವೇನು? -
ಮುಂಬೈನಲ್ಲಿ ವರುಣನ ಅಬ್ಬರ: IMDಯಿಂದ ಆರೆಂಜ್ ಅಲರ್ಟ್ ಘೋಷಣೆ, ಕನ್ನಡಿಗರು ಎಚ್ಚರ! -
ವಿಶ್ವ ಮೆದುಳು ದಿನ: ದಿನವಿಡೀ ಚುರುಕಾಗಿರಲು ಬೆಳಿಗ್ಗೆ ಈ 10 ನಿಮಿಷದ 'ನ್ಯೂರೋ-ವಾರ್ಮಪ್' ಮಾಡಿ! -
ದೆಹಲಿ ಮೆಟ್ರೋ ಸಂಚಾರ ವ್ಯತ್ಯಯ: ಸಂಗಾತಿಯೊಂದಿಗೆ ಟೆನ್ಷನ್ ಇಲ್ಲದೆ ಪ್ರಯಾಣಿಸುವುದು ಹೇಗೆ? -
ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್: ಭಾರಿ ಮಳೆ ಮತ್ತು ಭೂಕುಸಿತದಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ದೆಹಲಿಯಲ್ಲಿ ಯೆಲ್ಲೋ ಅಲರ್ಟ್: ಮಳೆಗಾಲದಲ್ಲಿ ಕಚೇರಿಗೆ ಹೋಗುವವರು ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ
ಅಕ್ಷಯ ತೃತೀಯ 2021: ನಿಮ್ಮ ರಾಶಿ ಪ್ರಕಾರ ಯಾವ ವಸ್ತುಗಳನ್ನು ದಾನ ಮಾಡಿದರೆ ಒಳಿತಾಗುವುದು
ಅಕ್ಷಯ ತೃತೀಯ ಹಿಂದೂಗಳಿಗೆ ತುಂಬಾ ವಿಶೇಷವಾದ ದಿನವಾಗಿದೆ. ಈ ದಿನ ಐಶ್ವರ್ಯ ಪ್ರಾಪ್ತಿಗಾಗಿ ವಿಷ್ಣು, ಲಕ್ಷ್ಮೀ, ಕುಬೇರನನ್ನು ಪೂಜಿಸಲಾಗುವುದು. ಅಲ್ಲದೆ ಈ ದಿನ ಚಿನ್ನ, ಆಸ್ತಿ, ವಾಹನ ಖರೀದಿಗೆ ಹೀಗೆ ಏನಾದರೂ ಸಂಪತ್ತು ಖರೀದಿಗೆ ಶ್ರೇಷ್ಠವಾದ ದಿನವಾಗಿದೆ, ಈ ದಿನ ದಾನಕ್ಕೂ ಕೂಡ ತುಂಬಾ ಮಹತ್ವವನ್ನು ಪಡೆದಿದೆ.

ಈ ದಿನ ದಾನ ಮಾಡುವುದರಿಂದ ಬದುಕಿನಲ್ಲಿ ಒಳಿತಾಗುವುದು ಎಂಬ ನಂಬಿಕೆ ಇದೆ. ನಾವಿಲ್ಲಿ ನಿಮ್ಮ ರಾಶಿಗೆ ಅನುಗುಣವಾಗಿ ಈ ದಿನ ಯಾವ ವಸ್ತುಗಳನ್ನು ದಾನ ಮಾಡಿದರೆ ಒಳ್ಳೆಯದು ಎಂದು ಹೇಳಲಾಗಿದೆ ನೋಡಿ:

ಮೇಷ ರಾಶಿ
ನೀವು ಈ ದಿನ ಧಾನ್ಯಗಳು, ಕೆಂಒಉ ಹೂಗಳು, ಕೆಂಪು ಬಟ್ಟೆ, ತಾಮ್ರ ಇವುಗಳನ್ನು ದಾನ ಮಾಡುವುದರಿಂದ ಯಾವುದೇ ದೋಷವಿದ್ದರೆ ಪರಿಹಾರವಾಗುತ್ತದೆ ಹಾಗೂ ಶುಭ ಉಂಟಾಗುವುದು.

ವೃಷಭ ರಾಶಿ
ದನಗಳಿಗೆ ಮೇವು, ವಜ್ರ, ಅಕ್ಕಿ, ಸುಗಂಧ ದ್ರವ್ಯ, ಬಟ್ಟೆ ಇವುಗಳನ್ನು ದಾನ ಮಾಡಿ. ಇದರಿಂದ ಅವಾಹಿತರಿಗೆ ವಿವಾಹಕ್ಕೆ ಏನಾದರೂ ದೋಷವಿದ್ದರೆ ಅದು ನಿವಾರಣೆಯಾಗುವುದು.

ಮಿಥುನ ರಾಶಿ
ಧಾನ್ಯಗಳು, ಚಿನ್ನ-ಹರಳು, ಹಸಿರು ಬಟ್ಟೆ, ತರಕಾರಿ, ಮನಿ ಪ್ಲ್ಯಾಂಟ್ ಇವುಗಳನ್ನು ದಾನ ಮಾಡಿ. ಇದರಿಂದ ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಒಳ್ಳೆಯದಾಗುತ್ತದೆ, ಏಕಾಗ್ರತೆ ಹೆಚ್ಚುವುದು.

ಕರ್ಕ ರಾಶಿ
ಕರ್ಕ ರಾಶಿಯವರು ಸಕ್ಕರೆ,ಅಕ್ಕಿ, ತುಪ್ಪ, ಹಾಲು, ಮೊಸರು, ನೀರು, ಬೆಳ್ಳಿ, ಮುತ್ತು ಹಾಗೂ ಬಿಳಿ ಬಟ್ಟೆ ಇವುಗಳನ್ನು ದಾನ ಮಾಡಬೇಕು. ಹೀಗೆ ಮಾಡುವುದರಿಂದ ಮಾನಸಿಕ ಆರೋಗ್ಯ ಉತ್ತಮವಾಗುವುದು.

ಸಿಂಹ ರಾಶಿ
ಕೆಂಪು ಬಟ್ಟೆ, ಸಿಂಧೂರ, ಮೇಣದ ಬತ್ತಿ, ಕರ್ಪೂರ, ತಾಮ್ರ ಹಾಗೂ ಪಾತ್ರೆಗಳು ಇವುಗಳನ್ನು ದಾನ ಮಾಡಬಹುದು. ಇದರಿಂದ ಖ್ಯಾತಿ ಹೆಚ್ಚುವುದು.

ಕನ್ಯಾ ರಾಶಿ
ಕನ್ಯಾ ರಾಶಿಯವರು ತರಕಾರಿಗಳು, ಗಿಡ, ಹಸಿರು ಬಟ್ಟೆ, ಹಸರು ಬಳೆ, ಪುಸ್ತಕ ಹಾಗೂ ಕಲಿಕೆಗೆ ಸಂಬಂಧಿಸಿದ ವಸ್ತುಗಳು, ಬೀಜ, ಆಹಾರ ವಸ್ತುಗಳನ್ನು ದಾನ ಮಾಡಬೇಕು. ಹೀಗೆ ಮಾಡುವುದರಿಂದ ನೀವು ವಿದೇಶಕ್ಕೆ ಹೋಗಲು ಬಯಸಿದ್ದರೆ ಆ ಇಚ್ಛೆ ನೆರವೇರುವುದು. ಇನ್ನು ಬರವಣಿಗೆ, ನಿರ್ದೇಶನ, ಸಂಗೀತ ಈ ಕ್ಷೇತ್ರದಲ್ಲಿರುವವರಿಗೆ ತುಂಬಾ ಒಳಿತಾಗುತ್ತದೆ.

ತುಲಾ ರಾಶಿ
ಸುಗಂಧ ದ್ರವ್ಯ, ಹಾಲಿನ ಉತ್ಪನ್ನಗಳು, ನೀಲಿ ಬಟ್ಟೆ, ನೀಲಿ ಬಣ್ಣದ ಬಳೆ, ಸೌಂದರ್ಯವರ್ಧಕಗಳು, ಶ್ರೀಗಂಧದ ಪುಡಿ ಇವುಗಳನ್ನು ದಾನ ಮಾಡಬಹುದು. ಇದರಿಂದ ದಾಂಪತ್ಯ ಚೆನ್ನಾಗಿರುತ್ತದೆ, ಸಹಭಾಗಿತ್ವದಲ್ಲಿ ವ್ಯವಹಾರ ಮಾಡುತ್ತಿದ್ದರೆ ಅದರಿಂದ ಒಳಿತಾಗುತ್ತದೆ, ಸಿನಿಮಾ, ಗ್ಲಾಮರ್ ಕ್ಷೇತ್ರದಲ್ಲಿ ಇರುವವರ ಮೇಲೆ ಏನಾದರೂ ಆಪಾದನೆ ಇದ್ದರೆ ಅದು ದೂರವಾಗುತ್ತದೆ.

ವೃಶ್ಚಿಕ ರಾಶಿ
ವೃಶ್ಚಿಕ ರಾಶಿಯವರು ಸಿಂಧೂರ, ಕೆಂಪು ಬಳೆ, ಸೌಂದರ್ಯವರ್ಧಕಗಳು, ಶ್ರೀಗಂಧ, ಕೆಂಪು ಬಟ್ಟೆ, ಕೆಂಪು ಹೂಗಳು ಇವುಗಳನ್ನು ಯಾರಿಗಾದರೂ ನೀಡಿ. ಹೀಗೆ ಮಾಡುವುದರಿಂದ ಏನಾದರೂ ದೋಷವಿದ್ದರೆ ಅದು ದೂರವಾಗುವುದು.

ಧನು ರಾಶಿ
ನೀವು ಧರ್ಮ ಗ್ರಂಥಗಳು, ಪುಸ್ತಕ, ಹಳದಿ ಬಟ್ಟೆ, ಪಾತ್ರೆಗಳು, ಅಕ್ಕಿ, ಕಡಲೆ ಬೇಳೆ ಇವುಗಳನ್ನು ದಾನ ಮಾಡಬೇಕು. ಇದರಿಂದ ವೃತ್ತಿ ಬದುಕಿನಲ್ಲಿ ಪ್ರಗತಿ ಉಂಟಾಗುತ್ತದೆ. ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಶ್ರಮ ತಕ್ಕಂತೆ ಉತ್ತಮ ಫಲಿತಾಂಶ ಲಭಿಸುವುದು.

ಮಕರ ರಾಶಿ
ಎಣ್ಣೆ, ಕಬ್ಬಿಣದ ಪಾತ್ರೆಗಳು, ಕಪ್ಪು ಬಟ್ಟೆ, ಚಪ್ಪಲಿ, ಪೆನ್ನು ಇಂಥ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಧಾರ್ಮಿಕ ಹಾಗೂ ರಾಜಕೀಯ ಬದುಕಿನಲ್ಲಿ ಒಳಿತಾಗುವುದು.

ಕುಂಭ ರಾಶಿ
ಸಾಸಿವೆಯೆಣ್ಣೆ, ಎಳನೀರು, ಕೊಡೆ, ಹೊದಿಕೆ, ಶೂ, ಏಳು ಬಗೆಯ ಧಾನ್ಯಗಳು ಈ ರೀತಿಯ ವಸ್ತುಗಳನ್ನು ದಾನ ಮಾಡಬೇಕು. ಇದರಿಂದ ಕೋರ್ಟ್ ಕೇಸ್ಗಳಿದ್ದರೆ ಅದರಲ್ಲಿ ಜಯ ಸಿಗುವುದು, ವಿದೇಶ ಪ್ರಯಾಣದ ಯೋಗ ಕೂಡಿ ಬರುವುದು.

ಮೀನ ರಾಶಿ
ಕಡಲೆ ಬೇಳೆ, ಚಿನ್ನ, ಕೇಸರಿ, ಪುಸ್ತಕ, ವಿದ್ಯಾರ್ಥಿಗಳಿಗೆ ಸಮವಸ್ತ್ರ, ಅರಿಶಿಣ ಇವುಗಳನ್ನು ದಾನ ಮಾಡಬೇಕು. ಇದರಿಂದ ವೃತ್ತಿ ಬದುಕಿನಲ್ಲಿ ಏಳಿಗೆ ಉಂಟಾಗುವುದು, ವಿದ್ಯಾರ್ಥಿಗಳಿಗೂ ಒಳ್ಳೆಯದಾಗುವುದು.



Click it and Unblock the Notifications