Latest Updates
-
ಸುಡುವ ಬಿಸಿಲಲ್ಲೂ ಮನೆ ತಂಪಾಗಿರಬೇಕೆ? ಕಡಿಮೆ ಖರ್ಚಿನಲ್ಲಿ ಕೂಲರ್ ಇಲ್ಲದೆ ತಂಪಾಗಿಸಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಬಿಸಿಲಿನ ಅಲೆ: ಸುಡುವ ಬಿಸಿಲಿನಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಪಾನೀಯಗಳೇ ಮದ್ದು! -
ಬಿಸಿಲ ಧಗೆಗೆ ಕಂಗಾಲಾಗಿದ್ದೀರಾ? ಸ್ಟೈಲಿಶ್ ಆಗಿ ಕೂಲ್ ಆಗಿರಲು ಇಲ್ಲಿದೆ ವೈರಲ್ ಸಮ್ಮರ್ ಹ್ಯಾಕ್ಸ್! -
ಬಿಸಿಗಾಳಿಯ ಅಬ್ಬರ: ಫಿಟ್ನೆಸ್ ಕಾಪಾಡಿಕೊಳ್ಳಲು ನಿಮ್ಮ ವರ್ಕೌಟ್ ಸಮಯ ಬದಲಾಯಿಸುವುದು ಅನಿವಾರ್ಯವೇ? -
ಡೇಟಿಂಗ್ ಆ್ಯಪ್ಗಳಲ್ಲಿ ಪ್ರೀತಿಯ ಬಲೆ: ಎಐ ಡೀಪ್ಫೇಕ್ ವಂಚನೆಯಿಂದ ಪಾರಾಗುವುದು ಹೇಗೆ? -
ಬಿಸಿಲ ಬೇಗೆಯಿಂದ ತತ್ತರಿಸಿದ್ದೀರಾ? ಎಸಿ ಇಲ್ಲದೆಯೇ ನಿಮ್ಮ ಮನೆಯನ್ನು ತಂಪಾಗಿಡಲು ಇಲ್ಲಿದೆ ಮ್ಯಾಜಿಕ್ ಟಿಪ್ಸ್! -
ಅಶ್ವಗಂಧದ ಎಲೆಗಳ ಬಳಕೆ ನಿಷೇಧ: ನಿಮ್ಮ ನೆಚ್ಚಿನ ಹೆಲ್ತ್ ಸಪ್ಲಿಮೆಂಟ್ಸ್ ಮಾರುಕಟ್ಟೆಯಿಂದ ಮಾಯವಾಗುತ್ತಾ? -
ಬಿಸಿಗಾಳಿಯ ಅಬ್ಬರ: ಸುಡುವ ಬಿಸಿಲಿನಲ್ಲಿ ಆರೋಗ್ಯ ಮತ್ತು ಫಿಟ್ನೆಸ್ ಕಾಪಾಡಿಕೊಳ್ಳುವುದು ಹೇಗೆ? -
ದೆಹಲಿ ಬಿಸಿಲಿನಲ್ಲಿ ಮದುವೆ ಸಂಭ್ರಮ: ಹೀಟ್ವೇವ್ ನಡುವೆ ನಿಮ್ಮ ಮದುವೆ ಪ್ಲಾನ್ ಬದಲಾಯಿಸುವುದು ಹೇಗೆ? -
ಬೇಸಿಗೆ ಬಿಸಿಲಿಗೆ ಮನೆ ತಂಪಾಗಿಡಲು ಈ ಟಿಪ್ಸ್ ಫಾಲೋ ಮಾಡಿ
ಜಾತಕದಲ್ಲಿ ಕೇತುವಿನ ಅಶುಭ ಫಲವಿದ್ದರೆ ಪರಿಹಾರವೇನು?
ಹಿಂದೂ ಧರ್ಮದಲ್ಲಿ ನವಗ್ರಹಗಳಲ್ಲಿ ರಾಹು ಮತ್ತು ಕೇತು ಗ್ರಹಗಳನ್ನು ಪಾಪ ಗ್ರಹಗಳೆಂದು ಪರಿಗಣಿಸಲಾಗಿದೆ. ಪೌರಾಣಿಕ ಕತೆಯಲ್ಲಿ ಕೇತುವನ್ನು ರಾಹು ಗ್ರಹದ ಶರೀರವೆಂದು ಹೇಳಲಾಗಿದೆ. ರಾಹು-ಕೇತು ಗ್ರಹಗಳನ್ನು ಛಾಯಾ ಗ್ರಹಗಳು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಈ ಗ್ರಹಗಳು ದೈಹಿಕವಾಗಿ ಅಸ್ತಿತ್ವದಲ್ಲಿ ಇಲ್ಲದಿದ್ದರೂ ಅವುಗಳ ಪ್ರಭಾವ ಮನುಷ್ಯರ ಮೇಲಿರುತ್ತದೆ ಎಂದು ಹೇಳಲಾಗುವುದು.
ಜಾತಕದಲ್ಲಿ ಕೇತುವಿನ ಋಣಾತ್ಮಕ ಪ್ರಭಾವವಿದ್ದರೆ ಇದರಿಂದಾಗಿ ಜೀವನದಲ್ಲಿ ಹಲವು ರೀತಿಯ ಕಷ್ಟಗಳು, ಸವಾಲುಗಳು ಎದುರಾಗುವುದು ಎಂದು ಹೇಳಲಾಗುವುದು. ಹಾಗಾದರೆ ಕೇತುವಿನ ಅಶುಭ ಪ್ರಭಾವಕ್ಕೆ ಪರಿಹಾರವಿದೆಯೇ ಎಂದು ನೋಡುವಾಗ ಜ್ಯೋತಿಷ್ಯದಲ್ಲಿ ಅದಕ್ಕೂ ಪರಿಹಾರ ಇದೆ.
ಕೇತುವಿನ ಕೆಟ್ಟ ಪ್ರಭಾವವಿದ್ದರೆ ಅದು ಹೋಗಲು ಏನು ಮಾಡಬೇಕೆಂದು ಹೇಳಲಾಗಿದೆ ನೋಡಿ:

ಗಣಪತಿ ಪೂಜೆ
ಎಲ್ಲಾ ವಿಘ್ನಗಳನ್ನು ತೊಡೆದು ಹಾಕಲು ಗಣೇಶನನ್ನು ಪೂಜಿಸಲಾಗುವುದು. ಕೇತು ನೀಡುವ ಕಷ್ಟದಿಂದ ಪಾರಾಗಲು ಕೂಡ ಗಣಪತಿಯನ್ನು ಪೂಜೆ ಮಾಡಿ. ಬುಧವಾರ ಗಣಪತಿಯ ಅಥರ್ವಶಿರ್ಷ ಪಠಿಸಿದರೆ ಶುಭ ಫಲಿತಾಂಶ ದೊರೆಯುವುದು.

ಕಪ್ಪು ಹಸು ದಾನ ಮಾಡಿ ಅಥವಾ ಗೋಶಾಲೆಗೆ ಮೇವನ್ನು ದಾನ ಮಾಡಿ
ಬ್ರಾಹ್ಮಣರಿಗೆ ಹಸುವನ್ನು ದಾನ ಮಾಡಿ ಇಲ್ಲದಿದ್ದರೆ ಗೋಶಾಲೆಗೆ ಅಕ್ಕಿ-ಬೆಲ್ಲ ದಾನ ಮಾಡಿ.

ನೀರಿಗೆ ಇದ್ದಿಲು ಹಾಕಿ
ಕೇತುವಿನ ಅಶುಭ ಫಲದಿಂದ ಮುಕ್ತಿ ಪಡೆಯಲು ಇದ್ದಿಲನ್ನು 8 ಭಾಗಗಳನ್ನಾಗಿ ಮಾಡಿ ಹರಿಯುವ ನೀರಿನಲ್ಲಿ ಬಿಡಬೇಕು. ಕೆಂಪು ಇರುವೆಗೆ ಆಹಾರ ನೀಡಬೇಕು. ಅಂಗವಿಕಲರಿಗೆ ಬಣ್ಣದ ವಸ್ತ್ರಗಳನ್ನು ದಾನ ಮಾಡಬೇಕು.

ಕಪ್ಪು ನಾಯಿಗೆ ಆಹಾರ ನೋಡಿ
ಕಪ್ಪು ನಾಯಿಗೆ ಆಹಾರವನ್ನು ನೀಡಬೇಕು ಅಲ್ಲದೆ ಕಪ್ಪು ಹಾಗೂ ಬಿಳಿ ಎಳ್ಳನ್ನು ನೀರಿನಲ್ಲಿ ಬಿಡಿ. ಮೀನುಗಳಿಗೆ ಹಿಟ್ಟಿನಿಂದ ತಯಾರಿಸಿದ ಉಂಡೆಗಳನ್ನು ಹಾಕಿ.

ತುಪ್ಪದ ದೀಪ ಹಚ್ಚಿ
ಜಾತಕದಲ್ಲಿ ಕೇತು ದೋಷವಿದ್ದವರು ದೇವಾಲಯಕ್ಕೆ ಹೋಗಿ ತುಪ್ಪದ ದೀಪ ಹಚ್ಚಬೇಕು.
ಲೋಹ, ಎಳ್ಳು, ತೆಂಗಿನಕಾಯಿ, ಉದ್ದು, ಗೋವು ಇವುಳನ್ನು ದಾನ ಮಾಡಿ..

ಕೇತುವಿನ ಕೆಟ್ಟ ಪ್ರಭಾವ ತಗ್ಗಲು ಮಂತ್ರ ಪಠಿಸಿ:
ಕೇತು ವೈದಿಕ ಮಂತ್ರ
ಓಂ ಕೇತು ಕೃಣ್ವನ್ನಕೆತವೇ ಪೇಷೋ ಮರ್ಯಾ ಅಪೇಶ ಸೆ. ಸುಮುಷದ್ಭಿರಜಾಯತಃ
ಕೇತು ತಾಂತ್ರಿಕ ಮಂತ್ರ
ಓಂ ಸ್ತ್ರಂ ಸ್ತ್ರಿಂ ಸ್ತ್ರೌಂ ಸಃ ಕೆತವೇನಮಃ
ಕೇತು ಏಕಾಕ್ಷರಿ ಮಂತ್ರ
ಓಂ ಕೆತವೇನಮಃ



Click it and Unblock the Notifications











