Latest Updates
-
ರಾಷ್ಟ್ರಧ್ವಜ ಅಂಗೀಕಾರ ದಿನ: ಧ್ವಜಾರೋಹಣದ ವೇಳೆ ಲವಲವಿಕೆಯಿಂದ ಇರಲು ಈ 'ತ್ರಿವರ್ಣ' ವ್ಯಾಯಾಮಗಳನ್ನು ಮಾಡಿ! -
ಐಟಿಆರ್ ಸಲ್ಲಿಕೆ ಗಡುವು ಹತ್ತಿರ: ಕೊನೆ ಕ್ಷಣದ ಗಡಿಬಿಡಿ ತಪ್ಪಿಸಲು ಈ ಸ್ಮಾರ್ಟ್ ಟಿಪ್ಸ್ ಪಾಲಿಸಿ -
ಮಳೆಗಾಲದ ತೇವಾಂಶದಿಂದ ಬಟ್ಟೆ ಹಾಳಾಗುತ್ತಿದೆಯೇ? ನಿಮ್ಮ ಕಬೋರ್ಡ್ ಮತ್ತು ಬಟ್ಟೆಗಳನ್ನು ರಕ್ಷಿಸಲು ಇಲ್ಲಿವೆ ಸ್ಮಾರ್ಟ್ ಟಿಪ್ಸ್! -
ಇನ್ಮುಂದೆ ಸ್ನ್ಯಾಕ್ಸ್ ಪ್ಯಾಕೆಟ್ ಮೇಲೆ ಎಚ್ಚರಿಕೆ! FSSAI ತರುತ್ತಿದೆ ಹೊಸ ನಿಯಮ, ಗ್ರಾಹಕರಿಗೆ ಲಾಭವೇನು? -
ಮುಂಬೈನಲ್ಲಿ ವರುಣನ ಅಬ್ಬರ: IMDಯಿಂದ ಆರೆಂಜ್ ಅಲರ್ಟ್ ಘೋಷಣೆ, ಕನ್ನಡಿಗರು ಎಚ್ಚರ! -
ವಿಶ್ವ ಮೆದುಳು ದಿನ: ದಿನವಿಡೀ ಚುರುಕಾಗಿರಲು ಬೆಳಿಗ್ಗೆ ಈ 10 ನಿಮಿಷದ 'ನ್ಯೂರೋ-ವಾರ್ಮಪ್' ಮಾಡಿ! -
ದೆಹಲಿ ಮೆಟ್ರೋ ಸಂಚಾರ ವ್ಯತ್ಯಯ: ಸಂಗಾತಿಯೊಂದಿಗೆ ಟೆನ್ಷನ್ ಇಲ್ಲದೆ ಪ್ರಯಾಣಿಸುವುದು ಹೇಗೆ? -
ಹಿಮಾಚಲ ಪ್ರದೇಶದಲ್ಲಿ ರೆಡ್ ಅಲರ್ಟ್: ಭಾರಿ ಮಳೆ ಮತ್ತು ಭೂಕುಸಿತದಿಂದ ಪಾರಾಗಲು ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ದೆಹಲಿಯಲ್ಲಿ ಯೆಲ್ಲೋ ಅಲರ್ಟ್: ಮಳೆಗಾಲದಲ್ಲಿ ಕಚೇರಿಗೆ ಹೋಗುವವರು ಆರೋಗ್ಯವಾಗಿರಲು ಈ ಟಿಪ್ಸ್ ಪಾಲಿಸಿ -
ಸ್ಯಾಮ್ಸಂಗ್ ಗ್ಯಾಲಕ್ಸಿ ಅನ್ಪ್ಯಾಕ್ಡ್: ಹೊಸ ಫೋಲ್ಡಬಲ್ ಫೋನ್ಗಳ ಲಾಂಚ್ಗೆ ಕೌಂಟ್ಡೌನ್, ನೀವು ರೆಡಿನಾ?
ಜಾತಕದಲ್ಲಿ ಕೇತುವಿನ ಅಶುಭ ಫಲವಿದ್ದರೆ ಪರಿಹಾರವೇನು?
ಹಿಂದೂ ಧರ್ಮದಲ್ಲಿ ನವಗ್ರಹಗಳಲ್ಲಿ ರಾಹು ಮತ್ತು ಕೇತು ಗ್ರಹಗಳನ್ನು ಪಾಪ ಗ್ರಹಗಳೆಂದು ಪರಿಗಣಿಸಲಾಗಿದೆ. ಪೌರಾಣಿಕ ಕತೆಯಲ್ಲಿ ಕೇತುವನ್ನು ರಾಹು ಗ್ರಹದ ಶರೀರವೆಂದು ಹೇಳಲಾಗಿದೆ. ರಾಹು-ಕೇತು ಗ್ರಹಗಳನ್ನು ಛಾಯಾ ಗ್ರಹಗಳು ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಈ ಗ್ರಹಗಳು ದೈಹಿಕವಾಗಿ ಅಸ್ತಿತ್ವದಲ್ಲಿ ಇಲ್ಲದಿದ್ದರೂ ಅವುಗಳ ಪ್ರಭಾವ ಮನುಷ್ಯರ ಮೇಲಿರುತ್ತದೆ ಎಂದು ಹೇಳಲಾಗುವುದು.
ಜಾತಕದಲ್ಲಿ ಕೇತುವಿನ ಋಣಾತ್ಮಕ ಪ್ರಭಾವವಿದ್ದರೆ ಇದರಿಂದಾಗಿ ಜೀವನದಲ್ಲಿ ಹಲವು ರೀತಿಯ ಕಷ್ಟಗಳು, ಸವಾಲುಗಳು ಎದುರಾಗುವುದು ಎಂದು ಹೇಳಲಾಗುವುದು. ಹಾಗಾದರೆ ಕೇತುವಿನ ಅಶುಭ ಪ್ರಭಾವಕ್ಕೆ ಪರಿಹಾರವಿದೆಯೇ ಎಂದು ನೋಡುವಾಗ ಜ್ಯೋತಿಷ್ಯದಲ್ಲಿ ಅದಕ್ಕೂ ಪರಿಹಾರ ಇದೆ.
ಕೇತುವಿನ ಕೆಟ್ಟ ಪ್ರಭಾವವಿದ್ದರೆ ಅದು ಹೋಗಲು ಏನು ಮಾಡಬೇಕೆಂದು ಹೇಳಲಾಗಿದೆ ನೋಡಿ:

ಗಣಪತಿ ಪೂಜೆ
ಎಲ್ಲಾ ವಿಘ್ನಗಳನ್ನು ತೊಡೆದು ಹಾಕಲು ಗಣೇಶನನ್ನು ಪೂಜಿಸಲಾಗುವುದು. ಕೇತು ನೀಡುವ ಕಷ್ಟದಿಂದ ಪಾರಾಗಲು ಕೂಡ ಗಣಪತಿಯನ್ನು ಪೂಜೆ ಮಾಡಿ. ಬುಧವಾರ ಗಣಪತಿಯ ಅಥರ್ವಶಿರ್ಷ ಪಠಿಸಿದರೆ ಶುಭ ಫಲಿತಾಂಶ ದೊರೆಯುವುದು.

ಕಪ್ಪು ಹಸು ದಾನ ಮಾಡಿ ಅಥವಾ ಗೋಶಾಲೆಗೆ ಮೇವನ್ನು ದಾನ ಮಾಡಿ
ಬ್ರಾಹ್ಮಣರಿಗೆ ಹಸುವನ್ನು ದಾನ ಮಾಡಿ ಇಲ್ಲದಿದ್ದರೆ ಗೋಶಾಲೆಗೆ ಅಕ್ಕಿ-ಬೆಲ್ಲ ದಾನ ಮಾಡಿ.

ನೀರಿಗೆ ಇದ್ದಿಲು ಹಾಕಿ
ಕೇತುವಿನ ಅಶುಭ ಫಲದಿಂದ ಮುಕ್ತಿ ಪಡೆಯಲು ಇದ್ದಿಲನ್ನು 8 ಭಾಗಗಳನ್ನಾಗಿ ಮಾಡಿ ಹರಿಯುವ ನೀರಿನಲ್ಲಿ ಬಿಡಬೇಕು. ಕೆಂಪು ಇರುವೆಗೆ ಆಹಾರ ನೀಡಬೇಕು. ಅಂಗವಿಕಲರಿಗೆ ಬಣ್ಣದ ವಸ್ತ್ರಗಳನ್ನು ದಾನ ಮಾಡಬೇಕು.

ಕಪ್ಪು ನಾಯಿಗೆ ಆಹಾರ ನೋಡಿ
ಕಪ್ಪು ನಾಯಿಗೆ ಆಹಾರವನ್ನು ನೀಡಬೇಕು ಅಲ್ಲದೆ ಕಪ್ಪು ಹಾಗೂ ಬಿಳಿ ಎಳ್ಳನ್ನು ನೀರಿನಲ್ಲಿ ಬಿಡಿ. ಮೀನುಗಳಿಗೆ ಹಿಟ್ಟಿನಿಂದ ತಯಾರಿಸಿದ ಉಂಡೆಗಳನ್ನು ಹಾಕಿ.

ತುಪ್ಪದ ದೀಪ ಹಚ್ಚಿ
ಜಾತಕದಲ್ಲಿ ಕೇತು ದೋಷವಿದ್ದವರು ದೇವಾಲಯಕ್ಕೆ ಹೋಗಿ ತುಪ್ಪದ ದೀಪ ಹಚ್ಚಬೇಕು.
ಲೋಹ, ಎಳ್ಳು, ತೆಂಗಿನಕಾಯಿ, ಉದ್ದು, ಗೋವು ಇವುಳನ್ನು ದಾನ ಮಾಡಿ..

ಕೇತುವಿನ ಕೆಟ್ಟ ಪ್ರಭಾವ ತಗ್ಗಲು ಮಂತ್ರ ಪಠಿಸಿ:
ಕೇತು ವೈದಿಕ ಮಂತ್ರ
ಓಂ ಕೇತು ಕೃಣ್ವನ್ನಕೆತವೇ ಪೇಷೋ ಮರ್ಯಾ ಅಪೇಶ ಸೆ. ಸುಮುಷದ್ಭಿರಜಾಯತಃ
ಕೇತು ತಾಂತ್ರಿಕ ಮಂತ್ರ
ಓಂ ಸ್ತ್ರಂ ಸ್ತ್ರಿಂ ಸ್ತ್ರೌಂ ಸಃ ಕೆತವೇನಮಃ
ಕೇತು ಏಕಾಕ್ಷರಿ ಮಂತ್ರ
ಓಂ ಕೆತವೇನಮಃ



Click it and Unblock the Notifications