Latest Updates
-
ಸುಪ್ರೀಂ ಕೋರ್ಟ್ ವಿಶೇಷ ಲೋಕ್ ಅದಾಲತ್: ವಿಚ್ಛೇದನ, ಕಸ್ಟಡಿ ಸಮಸ್ಯೆಗಳಿಗೆ ಇಲ್ಲಿದೆ ಸುಲಭ ಪರಿಹಾರ! -
ಅಪಾರ್ಟ್ಮೆಂಟ್ನಲ್ಲಿ ಪರಿಸರ ಸ್ನೇಹಿ ಗಣೇಶ ಹಬ್ಬ: ದಂಡ ತಪ್ಪಿಸಿ, ಸುಲಭವಾಗಿ ವಿಸರ್ಜನೆ ಮಾಡುವುದು ಹೇಗೆ? -
ಓಣಂ ಸದ್ಯದ ಸಂಭ್ರಮ: ಬೆಲೆ ಏರಿಕೆ ಮತ್ತು ಆರೋಗ್ಯದ ಚಿಂತೆಯಿಲ್ಲದೆ ಹಬ್ಬ ಆಚರಿಸುವುದು ಹೇಗೆ? -
ಆಗಸ್ಟ್ 2026 ಏಕಾದಶಿ: ಸ್ಮಾರ್ತ vs ವೈಷ್ಣವ ವ್ರತದ ದಿನಾಂಕಗಳ ಗೊಂದಲವೇ? ಮಧುಮೇಹಿಗಳಿಗೆ ಇಲ್ಲಿದೆ ಉಪವಾಸದ ಸೂತ್ರ! -
ರಾಷ್ಟ್ರೀಯ ಬಾಹ್ಯಾಕಾಶ ದಿನ 2026: ನಿಮ್ಮ ಮಕ್ಕಳೊಂದಿಗೆ ಚಂದ್ರನ ರಹಸ್ಯಗಳನ್ನು ಅನ್ವೇಷಿಸಲು ಇಲ್ಲಿದೆ ಬೆಸ್ಟ್ ಪ್ಲಾನ್! -
ಓಣಂ ಹಬ್ಬದ ಸಂಭ್ರಮ: ಮಳೆಯಲ್ಲೂ ಸ್ಟೈಲಿಶ್ ಆಗಿ ಕಾಣಲು ₹1,200 ರೊಳಗೆ ಬೆಸ್ಟ್ ಫ್ಯಾಷನ್ ಟಿಪ್ಸ್! -
ಮಳೆಗಾಲದಲ್ಲಿ ಹಿರಿಯರು ಜಾರಿ ಬೀಳುವ ಆತಂಕವೇ? ಸುರಕ್ಷಿತವಾಗಿರಲು ಈ 12 ನಿಮಿಷಗಳ ಚೇರ್-ಯೋಗ ಟ್ರೈ ಮಾಡಿ! -
ಹಿರಿಯರ ಆರೋಗ್ಯಕ್ಕೆ ದಿನಕ್ಕೆ 12 ನಿಮಿಷದ 'ಚೇರ್ ಯೋಗ': ಚೈತನ್ಯ ಮತ್ತು ಸಮತೋಲನಕ್ಕೆ ಇದುವೇ ಮಂತ್ರ! -
ಫ್ಯಾಮಿಲಿ ವಾಟ್ಸಾಪ್ ಗ್ರೂಪ್ನಲ್ಲಿ ರಾಜಕೀಯ ಜಗಳವೇ? ಈ ಟಿಪ್ಸ್ ಪಾಲಿಸಿ, ಸಂಬಂಧ ಉಳಿಸಿಕೊಳ್ಳಿ! -
ಓಣಂ ಹಬ್ಬದ ಸಂಭ್ರಮ: ಹೂವಿನ ಬೆಲೆ ಏರಿಕೆ ನಡುವೆ ಕಡಿಮೆ ದರದಲ್ಲಿ ಖರೀದಿಸಲು ಇಲ್ಲಿವೆ ಟಿಪ್ಸ್!
ಪೂಜೆಗೆ ಯಾವ ತೆಂಗಿನಕಾಯಿ ಬಳಸಬೇಕು, ತೆಂಗಿನಕಾಯಿ ಏಕೆ ಬಳಸುತ್ತಾರೆ?
ನಾವು ಪೂಜೆಗೆ ಹೋಗುವಾಗ ಹಣ್ಣುಕಾಯಿ ಹಿಡಿದುಕೊಂಡು ಹೋಗುತ್ತೇವೆ, ಇನ್ನು ಪೂಜೆಯಲ್ಲಿ ಹಣ್ಣುಕಾಯಿ ದೇವರಿಗೆ ಅರ್ಪಿಸಲಾಗುವುದು.
ಹಣ್ಣುಕಾಯಿಯಲ್ಲಿ ತೆಂಗಿನಕಾಯಿ, ಬಾಳೆಹಣ್ಣು, ಅರಿಶಿಣ, ಕುಂಕುಮ, ಕರ್ಪೂರ, ಹಣ್ಣುಗಳು, ವೀಳ್ಯೆದೆಲೆ, ಹೂ ಹೀಗೆ ದೇವರಿಗೆ ಅನೇಕ ಮಂಗಳಕರ ವಸ್ತುಗಳನ್ನು ಇಟ್ಟು ಅರ್ಪಿಸಲಾಗುವುದು.
ಅದರಲ್ಲಿ ಬೇರೆ ಯಾವುದೇ ಒಂದು ವಸ್ತು ಇಲ್ಲದಿದ್ದರೆ ತೊಂದರೆಯಿಲ್ಲ ಆದರೆ ಹಣ್ಣಕಾಯಿ ಅಂದ ಮೇಲೆ ಅದರಲ್ಲಿ ತೆಂಗಿನಕಾಯಿ ಇರಲೇಬೇಕು. ತೆಂಗಿನಕಾಯಿ ಇಲ್ಲದಿದ್ದರೆ ಅದು ಹಣ್ಣುಗಾಯಿ ಅನಿಸುವುದಿಲ್ಲ.
ಅಷ್ಟು ಮಾತ್ರವಲ್ಲಿ ಇನ್ನು ಪೂಜೆಯಲ್ಲಿ ತೆಂಗಿನಕಾಯಿ ಒಡೆಯಲಾಗುವುದು, ನಾವು ದೇವರಿಗೆ ತೆಂಗಿನಕಾಯಿ ಅರ್ಪಿಸುವಾಗ ಎಂಥ ತೆಂಗಿನಕಾಯಿ ಅರ್ಪಿಸಬೇಕು? ಈ ತೆಂಗಿನಕಾಯಿ ಅರ್ಪಿಸುವುದರ ಮಹತ್ವವೇನು ಎಂದು ನೋಡೋಣ ಬನ್ನಿ:

ಪೂಜೆಯಲ್ಲಿ ತೆಂಗಿನಕಾಯಿ ಮಹತ್ವವೇನು?
ಋಷಿ-ಮುನಿಗಳು ಈ ತೆಂಗಿನಕಾಯಿಯಷ್ಟು ದೈವಿಕ ಶಕ್ತಿಯಿರುವ ಹಣ್ಣು ಮತ್ತೊಂದಿಲ್ಲ ಎಂದು ಹೇಳಿದ್ದಾರೆ. ಈ ತೆಂಗಿನಕಾಯಿಗೆ ದೈವ ಶಕ್ತಿಯನ್ನು ಆಕರ್ಷಿಸುವ ಗುಣವಿದೆ, ಆದ್ದರಿಂದಲೇ ಇದನ್ನು ಪೂಜೆ ಕಾರ್ಯಗಳಲ್ಲಿ ಬಳಸಲಾಗುವುದು.

ಪೂಜೆಯಲ್ಲಿ ಎಂಥ ತೆಂಗಿನಕಾಯಿ ಬಳಸಲಾಗುವುದು?
ಪೂಜೆಯಲ್ಲಿ ಎಳನೀರು ಬಳಸಲಾಗುವುದು ಹಾಗೂ ತೆಂಗಿನಕಾಯಿ ಬಳಸಲಾಗುವುದು. ಪೂಜೆಗೆ ಬಳಸುವ ತೆಂಗಿನಕಾಯಿಗೆ ಜುಟ್ಟು ಇರಬೇಕು, ಜುಟ್ಟು ತೆಗೆದಿರುವುದನ್ನು ಬಳಸುವಂತಿಲ್ಲ, ಅಲ್ಲದೆ ತೆಂಗಿನಕಾಯಿ ಒಳಗಡೆ ನೀರಿರಬೇಕು, ನೀರಿಲ್ಲದ ತೆಂಗಿನಕಾಯಿ ಬಳಸುವುದಿಲ್ಲ.

ತೆಂಗಿನಕಾಯಿ ಬಳಸುವುದರ ಹಿಂದಿರುವ ಪೌರಾಣಿಕ ಹಿನ್ನೆಲೆಯೇನು?
ತೆಂಗಿನಕಾಯಿಯಲ್ಲಿರುವ 3 ಕಣ್ಣಿನಲ್ಲಿ ಬ್ರಹ್ಮ, ವಿಷ್ಣು, ಶಿವ ನೆಲೆಸಿರುತ್ತಾರೆ ಎಂದು ಹೇಳಲಾಗಿದೆ. ತೆಂಗಿನಮರವನ್ನು ಕಾಮಧೇನು, ಕಲ್ಪವೃಕ್ಷ ಎಂದು ಕರೆಯಲಾಗುವುದು. ತೆಂಗಿನಕಾಯಿಯಲ್ಲಿರುವ ಕಣ್ಣನ್ನು ಶಿವಣ್ಣನ ಮುಕ್ಕಣ್ಣು ಎಂದು ಕರೆಯಲಾಗುವುದು. ತ್ರಿಮೂರ್ತಿಗಳು ತೆಂಗಿನಕಾಯಿಯಲ್ಲಿ ನೆಲೆಸಿರುವುದರಿಂದ ಇದನ್ನು ಪೂಜೆಗೆ ಬಳಸುವುದು ಶ್ರೇಷ್ಠ ಎಂದು ಹೇಳಲಾಗುವುದು. ಪೂಜೆಯಲ್ಲಿ ಎಲ್ಲಾ ಹಣ್ಣುಗಳಿಗಿಂತ ಶ್ರೇಷ್ಠವಾದ ಹಣ್ಣು ಇದಾಗಿದೆ.

ತೆಂಗಿನಕಾಯಿ ಒಡೆದಾಗ ಹಾಳಾಗಿದ್ದರೆ
ಕೆಲವೊಮ್ಮೆ ತೆಂಗಿನಕಾಯಿ ಒಳಗಡೆ ಹಾಳಾಗಿದ್ದರೆ ಗೊತ್ತಾಗುವುದಿಲ್ಲ, ದೇವರ ಪೂಜೆ ತೆಂಗಿನಕಾಯಿ ದೇವರಿಗೆ ಅರ್ಪಿಸಿದಾಗ ಅದು ಹಾಳಾದರೆ ಭಕ್ತರು ತುಂಬಾನೇ ಕಸಿವಿಸಿಗೊಳ್ಳುತ್ತಾರೆ. ಅಯ್ಯೋ ಇದು ಅಶುಭದ ಸೂಚನೆಯೇ? ಇದರಿಂದ ನನಗೆ ಹಾನಿಯುಂಟಾಗುವುದೇ ಎಂದು ಭಯ ಉಂಟಾಗುವುದು. ಆದರೆ ದೇವರಿಗೆ ನೀವು ಶುದ್ಧ ಭಕ್ತಿಯಿಂದ ತೆಂಗಿನಕಾಯಿ ಅರ್ಪಿಸಿದಾಗ ಅದು ಹಾಳಾಗಿದ್ದರೂ ನೀವು ಆತಂಕ ಪಡಬೇಕಾಗಿಲ್ಲ, ದೇವರಿಗೆ ನೀವು ಅರ್ಪಿಸುವ ವಸ್ತುಗಳಿಗಿಂತ ಭಕ್ತಿಯೇ ಮುಖ್ಯ.

ತೆಂಗಿನಕಾಯಿ ಒಳಗಡೆ ಹೂ ಸಿಕ್ಕರೆ ಏನರ್ಥ?
ಕೆಲವೊಮ್ಮೆ ತೆಂಗಿನಕಾಯಿ ಒಳಗಡೆ ಹೂ ಸಿಗುತ್ತದೆ, ಹೀಗೆ ಸಿಕ್ಕರೆ ನವ ದಂಪತಿಗೆ, ಮಕ್ಕಳ ಅಪೇಕ್ಷಿತ ದಂಪತಿಗೆ ಮಗುವಿನ ಭಾಗ್ಯ ಸಿಗಲಿದೆ ಎಂದು ಹೇಳಲಾಗುವುದು.
ಪೂಜೆಯಲ್ಲಿ ತೆಂಗಿನಕಾಯಿ ಅರ್ಪಿಸುವುದರ ಮಹತ್ವ
ಪೂಜೆಯಲ್ಲಿ ತೆಂಗಿನಕಾಯಿ ಅರ್ಪಿಸಿದರೆ ನಾವು ದೇವರಿಗೆ ಸಂಪೂರ್ಣ ಶರಣಾಗಿದ್ದೇವೆ ಎಂದರ್ಥ. ನಮ್ಮಲ್ಲಿರುವ ಅಹಂ, ಕೋಪ ಎಲ್ಲವನ್ನೂ ಬಿಟ್ಟು ಓ... ದೇವರೇ ನಿನಗೆ ನಾವು ಸಂಪೂರ್ಣ ಶರಣಾಗಿದ್ದೇವೆ ಎಂಬುವುದರ ಸಂಕೇತವಾಗಿದೆ.

ತೆಂಗಿನಕಾಯಿ ನೀರು, ಎಳನೀರು ತುಂಬಾನೇ ಪವಿತ್ರ
ಪೂಜೆಯಲ್ಲಿ ತೆಂಗಿನಕಾಯಿ ನೀರು ಅಥವಾ ಎಳನೀರನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು. ಇದು ಗಂಗಾಜಲದಷ್ಟೇ ಪವಿತ್ರವಾದ ನೀರಾಗಿದೆ. ಇನ್ನು ಯಾವುದೇ ಶುಭಕಾರ್ಯ ಮಾಡುವಾಗ ತೆಂಗಿನಕಾಯಿ ಒಡೆಯುವ ಸಂಪ್ರದಾಯ ಹಿಂದೂ ಧರ್ಮದಲ್ಲಿದೆ.

ದೇವರ ಅಭಿಷೇಕದಲ್ಲಿಯೂ ಬಳಸಲಾಗುವುದು
ದೇವರ ಅಭಿಷೇಕದಲ್ಲಿ, ಹಾಲು, ಜೇನು, ಮೊಸರು, ತುಪ್ಪ, ಎಳನೀರು ಇವುಗಳನ್ನು ಬಳಸಲಾಗುವುದು. ದೇವರಿಗೆ ಅಭಿಷೇಕ ಮಾಡುವುದರಿಂದ ದೈವ ಕೃಪೆಗೆ ಮಾತ್ರರಾಗುವಿರಿ.
ಹೀಗೆ ತೆಂಗಿನಕಾಯಿ ಪೂಜೆಯಲ್ಲಿ ಬಹುಮುಖ್ಯವಾದ ವಸ್ತುವಾಗಿದೆ.



Click it and Unblock the Notifications