For Quick Alerts
ALLOW NOTIFICATIONS  
For Daily Alerts

2-8-2019: ಶುಕ್ರವಾರದ ದಿನ ಭವಿಷ್ಯ

By ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯ�
|

ಬದುಕು ಎನ್ನುವುದು ಒಂದು ನದಿ ಇದ್ದ ಹಾಗೆ. ಕೊನೆ ಇಲ್ಲದ ಪಯಣ. ಈ ಪಯಣದ ಮಧ್ಯೆ ಏನೆಲ್ಲಾ ಸಿಗುತ್ತದೆಯೋ ಅದೆಲ್ಲವನ್ನೂ ಜೊತೆಯಲ್ಲಿಯೇ ಕರೆದೊಯ್ಯುತ್ತದೆ. ಹಾಗಂತ ಯಾವುದೂ ಕೊನೆಯವರೆಗೆ ಉಳಿಯುವುದಿಲ್ಲ. ನಿಜ, ಜೀವನದ ಪಯಣದುದ್ದಕ್ಕೂ ಸಿಕಿ ಕಹಿ ಘಟನೆಗಳು ಹಾಗೂ ವ್ಯಕ್ತಿಗಳು ಸಿಗುತ್ತಾರೆ. ಅವು ಯಾವುದೂ ಶಾಶ್ವತವಾಗಿ ನಮ್ಮೊಂದಿಗೆ ಉಳಿಯುವುದಿಲ್ಲ.

horoscope

ನಮ್ಮೊಂದಿಗೆ ಬಂದ ವ್ಯಕ್ತಿಗಳು ಹಾಗೂ ಅನುಭವಿಸಿದ ಸನ್ನಿವೇಶಗಳ ಅನುಭವ ಹಾಗೂ ನೆನಪುಗಳು ಮಾತ್ರವೇ ನಮ್ಮೊಂದಿಗೆ ಉಳಿದುಕೊಳ್ಳುತ್ತವೆ. ಆ ಅನುಭವಗಳೇ ಜೀವನ ಎಂದರೇನು? ಎನ್ನುವ ಪಾಠವನ್ನು ಹೇಳಿಕೊಡುತ್ತವೆ. ಶುಕ್ರವಾರವಾದ ಈ ಶುಭ ದಿನ ಆ ಮಹಾ ಲಕ್ಷ್ಮಿಯು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಯಾವೆಲ್ಲಾ ಬದಲಾವಣೆಯನ್ನು ತರುತ್ತಾಳೆ? ನಿಮ್ಮ ಜೀವನದ ಪಯಣದಲ್ಲಿ ನಾಳೆ ಯಾವೆಲ್ಲಾ ಘಟನೆಗಳು ನಡೆಯಬಹುದು? ಅವುಗಳಿಂದ ನೀವೇನು ಜೀವನದ ತಾತ್ಪರ್ಯ ಪಡೆದುಕೊಳ್ಳುವಿರಿ ಎನ್ನುವ ವಿವರಣೆಯನ್ನು ಬೋಲ್ಡ್ ಸ್ಕೈ ನೀಡುತ್ತಿದೆ...

ಮೇಷ ( 2 ಆಗಸ್ಟ್ 2019)

ಮೇಷ ( 2 ಆಗಸ್ಟ್ 2019)

ನಿಮ್ಮ ಸಮಸ್ಯೆಗಳಿಗೆ ಆತ್ಮೀಯರಿಂದ ಉತ್ತಮ ಸಲಹೆ ಸಿಗುವುದು. ಖಾಸಗಿ ಕಂಪನಿ ನೌಕರರಿಗೆ ಸಂತಸದ ಸುದ್ದಿ ದೊರೆಯುವುದು. ತಾಯಿ ಕಡೆಯಿಂದ ಆರ್ಥಿಕ ನೆರವು ಸಿಗಲಿದೆ. ಆರ್ಥಿಕ ಸಮಸ್ಯೆಗಳು ಒಂದು ತಾತ್ವಿಕ ಕೊನೆ ಕಾಣಲಿದೆ.ಬಂಧುಗಳ ಮನೆಯಲ್ಲಿ ನಡೆಯುವ ಮಂಗಳ ಕಾರ್ಯಕ್ಕೆ ಪರಿವಾರ ಸಮೇತ ತೆರಳುವಿರಿ. ಶತ್ರುಗಳ ಭೀತಿ ದೂರವಾಗಲಿದೆ. ಮನೆಯಲ್ಲಿ ಹಿರಿಯರ ಕಡೆಯಿಂದ ವಿವಾಹ ವಿಷಯ ಪ್ರಸ್ತಾಪವಾಗುವುದು.9845743807 ಅದೃಷ್ಟ ಸಂಖ್ಯೆ:2

ವೃಷಭ

ವೃಷಭ

ಆಮೆ ವೇಗದಲ್ಲಿ ಸಾಗುತ್ತಿದ್ದ ಕೆಲಸಗಳು ವೇಗ ಹೆಚ್ಚಿಸಿಕೊಳ್ಳುವವು. ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಬರುವುದು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯ ಕಡಿಮೆ ಆಗುವುದು. ಬಂಧುಗಳೊಡನೆ ಸಂಬಂಧ ಗಟ್ಟಿಗೊಳ್ಳುವುದು.ಸ್ನೇಹಿತರಿಂದ ಆರ್ಥಿಕ ನೆರವು ಸಿಗಲಿದೆ. ಕೊಟ್ಟ ಸಾಲ ಭಾಗಶಃ ವಸೂಲಾಗುವ ಸಾಧ್ಯತೆಯಿದೆ. ಆದಾಯ ಮೂಲಗಳು ಹೆಚ್ಚಾಗುವವು. ಖರ್ಚು ವೆಚ್ಚಗಳಿಗೆ ಸರಿಯಾದ ಲೆಕ್ಕವಿಡುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:1

ಮಿಥುನ

ಮಿಥುನ

ಆಸ್ತಿ ಪಾಲು ಕುರಿತು ಚರ್ಚೆಯಾಗಲಿದೆ. ಕುಟುಂಬದಲ್ಲಿ ಒಗ್ಗಟ್ಟು ಮೂಡಲಿದೆ. ಪತ್ನಿಯ ಆರೋಗ್ಯ ಸುಧಾರಣೆಯಿಂದ ನೆಮ್ಮದಿ ಎನಿಸುವುದು. ಹಿಡಿದ ಕೆಲಸ ಕೈಗೂಡಲು ನವಗ್ರಹಾರಾಧನೆ ಮಾಡಿ. ನೀವು ಊಹಿಸದ ರೀತಿಯಲ್ಲಿ ಸಹೋದ್ಯೋಗಿಗಳು ನಿಮ್ಮ ವಿರುದ್ಧ ತಿರುಗಿ ಬೀಳುವ ಸಾಧ್ಯತೆಯಿದೆ. ನೀವು ಸಂಧಾನ ಚತುರರಾಗಿರುವ ಕಾರಣ ಅದನ್ನು ಸಮರ್ಥವಾಗಿ ಎದುರಿಸುವಿರಿ. ನಿಮ್ಮ ನಿಲುವನ್ನು ಯಾವುದೇ ಕಾರಣಕ್ಕೂ ಬದಲಾಯಿಸಬೇಡಿ.9845743807 ಅದೃಷ್ಟ ಸಂಖ್ಯೆ:3

ಕಟಕ

ಕಟಕ

ಪರಿವಾರದವರೊಂದಿಗೆ ವಿಹಾರಕ್ಕೆ ಹೋಗಲು ಸಿದ್ಧತೆ ಮಾಡಿಕೊಳ್ಳುವಿರಿ. ಕುಟುಂಬದಲ್ಲಿ ಸಂತಸದ ವಾತಾವರಣ ನೆಲೆಸಲಿದೆ. ವಾಹನ ಖರೀದಿಯನ್ನು ಮುಂದೂಡುವುದು ಒಳ್ಳೆಯದು. ನಿಮ್ಮ ಧೈರ್ಯ ಸ್ವಭಾವ ಎಲ್ಲರ ಮೆಚ್ಚುಗೆಪಡೆಯಲಿದೆ.ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿಯಾಗುವಿರಿ. ವ್ಯಾಪಾರ ವ್ಯವಹಾರದಲ್ಲಿ ಅಲ್ಪ ನಷ್ಟ ಕಂಡುಬರುವುದು. ಹಿರಿಯರ ಮೇಲೆ ವಿನಾಕಾರಣ ಮುನಿಸು ತೋರಿಸಬೇಡಿ. ಪ್ರೇಮ ಪ್ರಕರಣಗಳಿಂದ ದೂರವಿರುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2

ಸಿಂಹ

ಸಿಂಹ

ರಾಜಕಾರಣಿಗಳ ಸಹವಾಸದಿಂದ ದೂರವಿರುವುದು ಉತ್ತಮ. ಇಲ್ಲವಾದರೆ ಅವರಿಂದ ಮಾನಸಿಕ ಕಿರುಕುಳ ಆನುಭವಿಸಬೇಕಾಗುವುದು. ಪಾಲುದಾರರ ಇಬ್ಬಗೆಯ ನೀತಿಯಿಂದಾಗಿ ವ್ಯವಹಾರದಲ್ಲಿ ನಷ್ಟ ಅನುಭವಿಸಬೇಕಾದೀತು.ಪೂರ್ವ ಸಿದ್ಧತೆ ಇಲ್ಲದೆ ಪ್ರಯಾಣ ಮಾಡ ಬೇಡಿ. ತಾಂತ್ರಿಕ ಪರಿಣಿತರಿಗೆ ಹೆಚ್ಚಿನ ಅವಕಾಶ ಸಿಗಲಿದೆ. ಸರ್ಕಾರಿ ನೌಕರರಿಗೆ ಅನಿರೀಕ್ಷಿತವಾಗಿ ಅಸ್ಥಿರತೆ ಕಾಣುವುದು. ಕುಲದೇವರ ಪ್ರಾರ್ಥನೆ ಮಾಡಿ.9845743807 ಅದೃಷ್ಟ ಸಂಖ್ಯೆ:4

ಕನ್ಯಾ

ಕನ್ಯಾ

ಆರ್ಥಿಕ ಪರಿಸ್ಥಿತಿ ಸ್ವಲ್ಪ ಬಿಗಡಾಯಿಸಬಹುದು. ಲೇವಾದೇವಿ ವ್ಯವಹಾರಕ್ಕೆ ಕೊಂಚ ಹಿನ್ನಡೆಯುಂಟಾಗುವುದು. ಮಾಧ್ಯಮದವರಿಗೆ ಸರ್ಕಾರದಿಂದ ಸವಲತ್ತುಗಳು ದೊರೆಯುತ್ತವೆ. ಹೊಸ ವ್ಯವಹಾರದ ಆರಂಭವನ್ನು ಮುಂದೂಡುವುದು ಉತ್ತಮ. ಯೋಚಿಸಿ ಮಾತನಾಡಿ. ಅನವಶ್ಯಕ ಘರ್ಷಣೆ ಬೇಡ. ಅವಿವಾಹಿತ ಕನ್ಯೆಗೆ ಯೋಗ್ಯ ವರ ದೊರೆಯುವನು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಇದೆ. 9845743807 ಅದೃಷ್ಟ ಸಂಖ್ಯೆ:6

ತುಲಾ

ತುಲಾ

ಸುಮ್ಮನೆ ನಿರೀಕ್ಷೆ ಇಟ್ಟುಕೊಂಡು ಕೂರುವುದಕ್ಕಿಂತ ಇತರೆ ಕಾರ್ಯಗಳಲ್ಲಿ ಮಗ್ನವಾಗುವುದು ಉತ್ತಮ. ತಾನು ಮಾಡುವುದು ಒಳ್ಳೆಯದು, ಮಗ ಮಾಡುವುದು ಹಾನಿ ಎಂಬ ಮಾತಿದೆ. ಹಾಗಾಗಿ ನೀವೇ ಖುದ್ದಾಗಿ ಕೆಲಸ ಕಾರ್ಯ ಮಾಡುವುದು ಒಳ್ಳೆಯದು. ಸಮುದ್ರದಲ್ಲಿ ಅಲೆಗಳು ಒಂದರ ಹಿಂದೆ ಮತ್ತೊಂದು ಬರುತ್ತಲೇ ಇರುತ್ತವೆ. ಅಲೆ ನಿಂತ ಮೇಲೆ ಸಮುದ್ರ ಸ್ನಾನ ಮಾಡುತ್ತೇನೆ ಎಂದರೆ ಆಗುವುದಿಲ್ಲ. ಆ ಅಲೆಗಳ ಮಧ್ಯೆಯೇ ಸ್ನಾನ ಮಾಡುವಂತೆ ನಿತ್ಯ ಜೀವನ ಜಂಜಾಟದ ನಡುವೆ ಭಗವಂತನನ್ನು ಆರಾಧಿಸುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:8

ವೃಶ್ಚಿಕ

ವೃಶ್ಚಿಕ

ಕೇವಲ ಕೃತ್ರಿಮ ಮಾತುಗಳಿಂದಲೇ ನಿಮ್ಮನ್ನು ಹಣಿಯಲು ಕೆಲವರು ಕಾದಿರುವರು. ಇದರಿಂದ ಪಾರಾಗಲು ಮಾತಾ ದುರ್ಗಾದೇವಿಯ ಪ್ರಾರ್ಥನೆ ಮಾಡುವುದು ಒಳ್ಳೆಯದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುವುದು.ಯಾಕಾದರೂ ಈ ಕೆಲಸಕ್ಕೆ ಕೈ ಹಾಕಿದೆನೋ ಎಂಬ ನಿರಾಸೆ ಬೇಡ. ದೈವದ ಅನುಗ್ರಹದಿಂದ ಸಿದ್ಧಿ ದೊರೆಯುವುದು. ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ನಿಮ್ಮ ಮನಸ್ಸಿಗೆ ಮುದ ನೀಡುವರು.9845743807 ಅದೃಷ್ಟ ಸಂಖ್ಯೆ:6

ಧನುಸ್ಸು

ಧನುಸ್ಸು

ನೀವು ಪರೋಪಕಾರಿ ಎಂದು ಹಲವಾರು ಬಾರಿ ಸಾಬೀತಾದ ವಿಷಯ. ಅಂತೆಯೆ ನೀವು ಹಮ್ಮಿಕೊಳ್ಳುವ ಕೆಲಸ ಕಾರ್ಯಗಳಿಗೆ ಇತರರು ಸಹಕಾರ ನೀಡುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಹೊಯ್ದಾಟದ ದಾರಿಗಳೇ ಎದುರಿಗೆ ಬಂದು ನಿಲ್ಲುತ್ತವೆ. ಗಟ್ಟಿ ಮನಸ್ಸಿನಿಂದ ಒಂದನ್ನು ಆಯ್ಕೆ ಮಾಡಿಕೊಳ್ಳಿ. ನಿಮ್ಮ ಮನೋಕಾಮನೆಗಳು ಬೇಗನೆ ಕಾರ್ಯರೂಪಕ್ಕೆ ಬರುತ್ತವೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.9845743807 ಅದೃಷ್ಟ ಸಂಖ್ಯೆ:6

ಮಕರ

ಮಕರ

ಮನಸ್ಸಿನ ಸಂತಸವನ್ನು ನಿಯಂತ್ರಿಸಿಕೊಳ್ಳಿ. ಕೆಟ್ಟ ದೃಷ್ಟಿಯ ಜನ ಎಲ್ಲವನ್ನೂ ಹಾಳು ಮಾಡುವರು. ಶ್ರೀ ರಾಘವೆಂದ್ರ ಸ್ವಾಮಿಯನ್ನು ಮನಸಾ ಸ್ಮರಿಸಿ. ಕೆಲವು ವಿಚಾರಗಳಲ್ಲಿ ಸಹೋದರನ ಸಹಕಾರ ಬಯಸುವುದು ಒಳ್ಳೆಯದು.ಸುಮ್ಮನೆ ಗಾಳಿಗೆ ಗುದ್ದಿ ಮೈ ನೋಯಿಸಿಕೊಳ್ಳದಿರಿ. ಧನಾತ್ಮಕ ಚಿಂತನೆಗಳಿಂದ ನಿಶ್ಚಿತ ಕಾರ್ಯಕ್ರಮಗಳನ್ನು ಹಾಕಿಕೊಳ್ಳಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.9845743807 ಅದೃಷ್ಟ ಸಂಖ್ಯೆ:4

ಕುಂಭ

ಕುಂಭ

ಮನೆಯ ಬಂಧುಬಾಂಧವರು ಇಲ್ಲವೆ ಆತ್ಮೀಯ ಸ್ನೇಹಿತರೆ ನಿಮ್ಮನ್ನು ವಿರೋಧಿಸುವರು. ದೈವಕೃಪೆಯಿಂದ ಎಲ್ಲವೂ ಒಳಿತಾಗುವುದು. ಬಡವರಿಗೆ ಆಹಾರ ಕೊಡಿ. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸಿ.ಸಕಲ ಗ್ರಹಬಲ ನೀನೇ ಸರಸಿಜಾಕ್ಷ ಎಂಬಂತೆ ಸದಾ ಶ್ರೀಹರಿಯನ್ನು ನೆನೆಯಿರಿ. ಸದ್ಯದ ಪರಿಸ್ಥಿತಿಯಲ್ಲಿ ಭಗವಂತನೇ ನಿಮ್ಮ ಸಹಾಯಕ್ಕೆ ಬರುವರು. ವೃತ್ತಿಯಲ್ಲಿನ ಕಿರಿಕಿರಿ ನಿವಾರಣೆಗಾಗಿ ಮಾತಾ ದುರ್ಗಾದೇವಿಯನ್ನು ಸ್ಮರಿಸಿ.9845743807 ಅದೃಷ್ಟ ಸಂಖ್ಯೆ:2

ಮೀನ

ಮೀನ

ಸಮೃದ್ಧಿಯ ದಿನಗಳನ್ನು ಕಂಡ ನಿಮಗೆ ತೊಳಲಾಟವಾಗುವುದು. ಆದರೂ ಧೈರ್ಯದಿಂದ ಎದುರಿಸಿ. ದೈವಕೃಪೆ ಅಪಾರವಾಗಿದ್ದು ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಿಮ್ಮ ಮುಂದೆ ನಿಮ್ಮಂತೆ ಮಾತನಾಡಿ ಹಿಂದುಗಡೆಯಿಂದ ನಿಮ್ಮ ಬಗ್ಗೆ ಕುಹಕ ಮಾತನಾಡುವ ಮಂದಿ ಬಗ್ಗೆ ಜಾಗೃತರಾಗಿ. ಸ್ವಂತ ಒಡಹುಟ್ಟಿದವರು ಇಲ್ಲವೆ ನಿಮ್ಮ ಮಕ್ಕಳೆ ಶತ್ರುಗಳಂತೆ ವರ್ತಿಸುವರು ತಾಳ್ಮೆ ಇರಲಿ.9845743807 ಅದೃಷ್ಟ ಸಂಖ್ಯೆ:1

ಪಂಡಿತ್ ಮಂಜುನಾಥ್ ಶಾಸ್ತ್ರೀ

ದೈವಜ್ಞ ಜ್ಯೋತಿಷ್ಯರು 9845743807

ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp

English summary

your daily horoscope 2 August 2019

Know what astrology and the planets have in store for you today. Choose your zodiac sign and read the details..
Story first published: Friday, August 2, 2019, 10:34 [IST]
X
Desktop Bottom Promotion