Just In
- 12 hrs ago ಪೂರ್ವಜನರಿಗೆ ಗ್ರಹಣಗಳು ಹೇಗೆ ತಿಳಿಯುತ್ತಿತ್ತು..? ಅವರು ಏನೆಲ್ಲಾ ಕಥೆ ನಂಬಿದ್ದರು ಗೊತ್ತೆ.?
- 13 hrs ago ಇವುಗಳಿಂದ ತೊಂದರೆಯಿಲ್ಲ ಅಂದ್ಕೊಳ್ಳುತ್ತೇವೆ, ಆದರೆ ಸಂಸಾರ ಹಾಳುಮಾಡುವ 6 ಸಂಗತಿಗಳಿವು
- 14 hrs ago ನಾರಾಯಣ ಮೂರ್ತಿ 4 ತಿಂಗಳ ಮೊಮ್ಮಗ ಈಗ ₹240 ಕೋಟಿ ಆಸ್ತಿ ಒಡೆಯ..! ಹೇಗೆ ಸಾಧ್ಯ..?
- 15 hrs ago ಎಲ್ಲೀಸ್ ಪೆರ್ರಿ ಅತ್ಯುತ್ತಮ ಆಟಗಾರ್ತಿ ಅತ್ಯುತ್ತಮ ಮನುಷ್ಯಳು ಎನ್ನುವುದಕ್ಕೆ ಈ ವೀಡಿಯೋನೇ ಸಾಕ್ಷಿ
Don't Miss
- Sports IPL 2024: ಮುಂಬೈ ಇಂಡಿಯನ್ಸ್ಗೆ ಆಘಾತದ ಮೇಲೆ ಆಘಾತ; ಸ್ಟಾರ್ ಬೌಲರ್ ಔಟ್
- News DV Sadananda Gowda: ಕಾಂಗ್ರೆಸ್ ನತ್ತ ಡಿ ವಿ ಸದಾನಂದಗೌಡ? ನಾಲ್ಕು ಕ್ಷೇತ್ರಗಳ ಆಫರ್ ಕೊಟ್ಟ ಕೈ ನಾಯಕರು?
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Automobiles ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
8-1-2019: ಗುರುವಾರದ ದಿನ ಭವಿಷ್ಯ
ಗುರುವಾರದ ದಿನ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ಇವರು ಬ್ರಾಹ್ಮಣ ಮಾಧ್ವಸಂನ್ಯಾಸಿಗಳಲ್ಲಿ ಪ್ರಮುಖರು. ಇವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು. ಎರಡನೆಯ ಅವತಾರವು ಶ್ರೀ ವ್ಯಾಸರಾಯರು. ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಕರೆಯುತ್ತಾರೆ. ಇವರ ಮೂಲ ಬೃಂದಾವನವು (ಸಶರೀರ) ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದಲ್ಲಿದೆ.
ಇಲ್ಲಿಗೆ ನಿತ್ಯವು ಸಾವಿರಾರು ಭಕ್ತರು ಭೇಟಿ ಕೊಡುತ್ತಾರೆ. ಪ್ರತಿ ವರ್ಷ ಶ್ರಾವಣ ಕೃಷ್ಣ ಪಕ್ಷ ಪಾಡ್ಯದಿಂದ ಶ್ರಾವಣ ಕೃಷ್ಣ ಪಕ್ಷ ತದಗಿವರೆಗೂ ಭವ್ಯ ಆರಾಧನೆ ನಡೆಯುತ್ತದೆ. ಗುರು ರಾಘವೇಂದ್ರನನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯವನ್ನು ತಿಳಿಯೋಣ.ಪಂಡಿತ್ ಮಂಜುನಾಥ್ ಶಾಸ್ತ್ರೀ ದೈವಜ್ಞ ಜ್ಯೋತಿಷ್ಯರು.9845743807...
ಮೇಷ(8 August 2019)
ನಿಮ್ಮ ಉತ್ತಮ ಬೌದ್ಧಿಕ ಶಕ್ತಿಯಿಂದಾಗಿ ಜನರಿಂದ ಗೌರವ ಮತ್ತು ಪ್ರಶಂಸೆಗೆ ಗುರಿಯಾಗುವಿರಿ. ಇದರಿಂದ ನಿಮ್ಮಲ್ಲಿ ಉತ್ಸಾಹ ಹೆಚ್ಚಿ ಇನ್ನಷ್ಟು ಸಾಮಾಜಿಕ ಕಾರ್ಯಗಳನ್ನುಮಾಡಲುನಿರ್ಧರಿಸುವಿರಿ.ಅಪರಿಚಿತರನ್ನು ಹೆಚ್ಚು ಪರಿಚಯ ಮಾಡಿಕೊಂಡು ಸಂಕಷ್ಟಕ್ಕೆ ಗುರಿಯಾಗುವಿರಿ. ಅಂತಹವರಿಂದ ಆದಷ್ಟು ದೂರ ಇರುವುದು ಒಳ್ಳೆಯದು. ಸಂಗಾತಿಯ ಸಲಹೆಯಂತೆ ನಡೆದರೆ ಕ್ಷೇಮ.9845743807 ಅದೃಷ್ಟ ಸಂಖ್ಯೆ:2
ವೃಷಭ
ವಾಹನ ಚಲಾಯಿಸುವಾಗ ಎಚ್ಚರಿಕೆಯಿಂದ ಇರಿ. ಕಚೇರಿಗೆ ಹೊರಡುವಾಗ ಐದು ಅಥವಾ ಹತ್ತು ನಿಮಿಷ ಮುಂಚೆಯೇ ಮನೆಯಿಂದ ಹೊರಡಿ. ಅನಗತ್ಯ ಒತ್ತಡದಿಂದ ದೂರವಿರಿ. ಕೆಲಸಗಳು ಮನಸ್ಸಿಗೆ ನೆಮ್ಮದಿ ನೀಡುವವು. ಮೇಲಧಿಕಾರಿಗಳಿಂದ ಕಿರುಕುಳವಿದ್ದರೂ ತಾಳ್ಮೆ ಕಳೆದುಕೊಳ್ಳಬೇಡಿ. ನೀವು ಮಾಡಿರುವ ಕೆಲಸ ಸರಿಯಾಗಿಯೇ ಇದೆ. ಆದರೆ ನಿಮಗೆ ಆಗದವರೊಬ್ಬರು ನಿಮ್ಮ ಬಗ್ಗೆ ಇಲ್ಲಸಲ್ಲದ ವಿಚಾರವನ್ನು ನಿಮ್ಮ ಬಾಸ್ಗೆ ತಿಳಿಸಿ ಅವರು ನಿಮ್ಮ ಮೇಲೆ ಕೋಪಗೊಳ್ಳುವಂತೆ ಮಾಡಿರುವರು.9845743807 ಅದೃಷ್ಟ ಸಂಖ್ಯೆ:1
ಮಿಥುನ
ಮಕ್ಕಳ ಸಮಸ್ಯೆ ನಿಮಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಶ್ರೀ ನಾರಸಿಂಹ ದೇವರನ್ನು ನೆನೆಯಿರಿ. ಆತನ ಕರುಣೆಯಿಂದ ನಿಮ್ಮ ಸಂತತಿಗೆ ಸೂಕ್ತ ಸಂಗಾತಿ ದೊರೆಯುತ್ತಾರೆ. ಮಡದಿಯ ಮಾತನ್ನು ತಿರಸ್ಕರಿಸಬೇಡಿ. ವಿಪರೀತ ದಣಿದು ಕೆಲಸಕ್ಕೆ ಮುಂದಾಗದಿರಿ. ಕೆಲಸದ ಒತ್ತಡದ ನಡುವೆ ಸ್ವಲ್ಪ ವಿಶ್ರಾಂತಿ ಪಡೆಯಿರಿ. ನಿಮ್ಮ ಕೈಲಿ ಆಗುವಷ್ಟು ಕೆಲಸವನ್ನು ಮಾತ್ರ ಒಪ್ಪಿಕೊಳ್ಳಿ.9845743807 ಅದೃಷ್ಟ ಸಂಖ್ಯೆ:2
ಕಟಕ
ಚಿಕ್ಕ ಮತ್ತು ಚೊಕ್ಕ ಮನೆಯನ್ನು ಶುಭ್ರವಾಗಿಟ್ಟುಕೊಳ್ಳುವುದೇ ದೇವರ ಒಲುಮೆಗೆ ಸೋಪಾನ. ಸ್ವಚ್ಛತೆಯಿದ್ದಲ್ಲಿ ಭಗವಂತ ಇರುತ್ತಾನೆ. ಹಾಗಾಗಿ ಆತನ ಒಲುಮೆಗೆ ಮನೆ ಮತ್ತು ಮನಸ್ಸಿನ ಸ್ವಚ್ಛತೆಗೆ ಮೀಸಲಿಡಿ. ನೀವು ಮಾಡುವ ಕೆಲಸವನ್ನು ಜನರು ಬಹಿರಂಗವಾಗಿ ಹೊಗಳದಿದ್ದರೂ ನಿಮ್ಮ ಬಗ್ಗೆ ಅಪಾರ ಗೌರವ ಇಟ್ಟುಕೊಂಡಿರುವರು. ಹಾಗಾಗಿ ನೀವು ತೀರಿಸಬೇಕಾಗಿರುವ ಸಾಲದ ಬಗೆಗೂ ಯಾರೂ ಒತ್ತಡ ಹೇರುತ್ತಿಲ್ಲ. ನ್ಯಾಯಯುತವಾಗಿ ದುಡಿದು ಹಣ ಮರು ಪಾವತಿಸುವಿರಿ.9845743807 ಅದೃಷ್ಟ ಸಂಖ್ಯೆ:4
ಸಿಂಹ
ವಿವಾಹ ಆಪೇಕ್ಷೆಯುಳ್ಳವರಿಗೆ ಸ್ವಲ್ಪ ನಿರಾಶೆ ಕಾಡುವುದು. ಕೈಗೆ ಬಂದ ತುತ್ತು ಬಾಯಿಗೆ ಇಲ್ಲ ಎನ್ನುವಂತೆ ಕೊನೆಯ ಕ್ಷ ಣದಲ್ಲಿ ವಧುವಿನ ಕಡೆಯುವರು ತಮ್ಮ ಅಸಮ್ಮತಿಯನ್ನು ತಿಳಿಸುವರು. ಇನ್ನೂ ಸ್ವಲ್ಪ ದಿನ ಕಾಯುವುದು ಅನಿವಾರ್ಯ. ಕೆಲಸಕ್ಕೆ ಬಾರದ ಜನ ತಲೆ ತಿನ್ನುವ ಸಾಧ್ಯತೆ ಹೆಚ್ಚಿದೆ. ದೂರ ಪ್ರವಾಸ ಮಾಡುವ ಯೋಗವಿದೆ. ಪತಿ ಪತ್ನಿಯರಲ್ಲಿ ಮನಸ್ತಾಪ ಬರುವುದು. ಶಿವ ಪಂಚಾಕ್ಷ ರಿ ಮಂತ್ರವನ್ನು ತಪ್ಪದೆ ಪಠಿಸಿ.9845743807 ಅದೃಷ್ಟ ಸಂಖ್ಯೆ:6
ಕನ್ಯಾ
ನೀವು ಹುಟ್ಟಿದ ಊರಿನಲ್ಲಿ ಸಂಭ್ರಮದ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮ್ಮೊಡನೆ ಆಡಿ ಬೆಳೆದ ಸಹಪಾಠಿಗಳ ಭೇಟಿ ನಿಮಗೆ ಸಂತಸ ನೀಡುವುದು.ಹಣಕಾಸಿನಪರಿಸ್ಥಿತಿಉತ್ತಮಗೊಳ್ಳುವುದು. ಅನಿರೀಕ್ಷಿತ ಬೆಳವಣಿಗೆಗಳು ನಿಮ್ಮ ಪರವಾಗಿ ಆಗುವುದರಿಂದ ತಡೆ ಹಿಡಿಯಲ್ಪಟ್ಟಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಜೀವನದಲ್ಲಿ ಹೊಸ ಆಶಾಕಿರಣ ಮೂಡುವುದು. ಮನಸ್ಸು ಹಕ್ಕಿಯಂತೆ ಹಾರಾಡುವುದು.9845743807 ಅದೃಷ್ಟ ಸಂಖ್ಯೆ:4
ತುಲಾ
ಎಷ್ಟೇ ಹಣ ಇದ್ದರೂ ಸಾಲದು ಎಂಬ ಭಾವನೆ ಬರಬಹುದು. ಧನಕಾರಕ ಗುರು ಅಷ್ಟಮ ಸ್ಥಾನದಲ್ಲಿದ್ದು, ಹಣ ನೀರಿನಂತೆ ಖರ್ಚಾಗುವುದು. ಆರೋಗ್ಯದ ಸಲುವಾಗಿ ಆಸ್ಪತ್ರೆ ಖರ್ಚು ಹೆಚ್ಚುವುದು. ಗುರು ಸ್ತೋತ್ರ ಪಠಿಸಿ.ಗೆಳೆಯರನ್ನು ಪ್ರೀತಿಯಿಂದ ಕಾಣಬೇಕು. ಸ್ವಂತ ಮಕ್ಕಳನ್ನು ಸಹ ಸ್ನೇಹಿತರಂತೆ ಕಾಣಬೇಕು. ಅವರ ತಪ್ಪುಗಳನ್ನು ಕ್ಷ ಮಿಸುವ ಔದಾರ್ಯ ಇಟ್ಟುಕೊಂಡರೆ ಬಾಂಧವ್ಯ ಗಟ್ಟಿಗೊಳ್ಳುವುದು. ಅವರನ್ನು ನಗು ನಗುತ್ತಾ ತಿದ್ದುವುದು ಒಳ್ಳೆಯದು.9845743807 ಅದೃಷ್ಟ ಸಂಖ್ಯೆ:2
ವೃಶ್ಚಿಕ
ಹಮ್ಮಿಕೊಂಡಿರುವ ಕೆಲಸಗಳಲ್ಲಿ ಅಡಚಣೆಗಳು ಬಾರದಿರಲಿ ಎಂದು ವಿಘ್ನನಾಶಕ ಗಣಪತಿಯನ್ನು ಪ್ರಾರ್ಥಿಸಿ. ಇದರಿಂದ ಅನುಕೂಲವಾಗುವುದು. ಸಂಗಾತಿಯ ಸಂಗಡ ಮನಸ್ತಾಪ ಬೇಡ.ವಿವಿಧ ಮೂಲಗಳಿಂದ ಹಣ ಬರುವುದು. ಮನೋಕಾಮನೆಗಳು ಪೂರ್ಣಗೊಳ್ಳುವುದು. ಆತುರ ಪ್ರವೃತ್ತಿಯಿಂದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಸಾವಧಾನದಿಂದ ಹೆಜ್ಜೆಯಿಟ್ಟರೆ ಒಳಿತಾಗುವುದು.9845743807 ಅದೃಷ್ಟ ಸಂಖ್ಯೆ:9
ಧನುಸ್ಸು
ಯಾವ ಹುತ್ತದಲ್ಲಿ ಯಾವ ಹಾವೋ ಎಂಬಂತೆ ನಿಮ್ಮ ಸಮೀಪಕ್ಕೆ ಬರುವ ವ್ಯಕ್ತಿಗಳ ಗುಣಾವಗುಣಗಳನ್ನು ತಿಳಿಯಲು ಅಸಮರ್ಥರಾಗುವಿರಿ. ಯಾರೊಂದಿಗೂ ವಿರೋಧ ಮಾಡಿಕೊಳ್ಳದೆ ಚಾಣಾಕ್ಷ ತನದಿಂದ ಅವರೊಡನೆವ್ಯವಹರಿಸಿದರೆಒಳಿತಾಗುವುದು.ಅವಕಾಶವಾದಿಗಳು ನಿಮ್ಮ ಸುತ್ತಲೇ ಗಿರಕಿ ಹೊಡೆಯಬಹುದು. ವ್ಯಾವಹಾರಿಕ ಜಾಣ್ಮೆ ಪ್ರದರ್ಶಿಸದಿದ್ದರೆ ನಿಮಗೆ ದೊಡ್ಡ ಪ್ರಮಾಣದ ಹಾನಿ ಆಗುವುದು. ಹಾವು ಹೊಡೆದು ಹದ್ದಿಗೆ ಹಾಕುವಂತೆ ನಿಮ್ಮ ಶ್ರಮದ ಫಲ ಪರರ ಪಾಲಾಗುವುದು.9845743807 ಅದೃಷ್ಟ ಸಂಖ್ಯೆ:8
ಮಕರ
ಬಂಧುಗಳ ಒಳ ಜಗಳಗಳು ನಿಮ್ಮನ್ನು ಹೈರಾಣ ಮಾಡುವವು. ಯಾರೊಬ್ಬರ ಪರವಾಗಿ ನಿಂತರೂ ಮತ್ತೊಬ್ಬರ ಕೆಂಗಣ್ಣಿಗೆ ಗುರಿಯಾಗುವ ಸಾಧ್ಯತೆ ಇದೆ. ಬಹು ವಿವೇಚನೆಯಿಂದ ಪರಿಸ್ಥಿತಿ ನಿಭಾಯಿಸುವಿರಿ. ಇದಕ್ಕೆ ಗುರುವಿನ ಬೆಂಬಲ ಪಡೆಯಿರಿ.ವೃಥಾ ಮನೋವ್ಯಾಕುಲ, ಅಂಜಿಕೆ, ಅಭದ್ರತೆಗಳು ಬೇಡ. ದುರ್ಗಾದೇವಿಯನ್ನು ಪ್ರಾರ್ಥಿಸಿ. ಗುರುವಿನ ಶುಭ ಆಶೀರ್ವಾದದಿಂದ ಒಳಿತಾಗುವುದು. ಆಹಾರ ದಾನ ಮಾಡಿ. ಅಗತ್ಯಕ್ಕೆ ತಕ್ಕಷ್ಟು ಹಣ ವಿನಿಯೋಗಿಸಿ.9845743807 ಅದೃಷ್ಟ ಸಂಖ್ಯೆ:4
ಕುಂಭ
ಕೆಲಸಗಳು ಮಂದಗತಿಯಲ್ಲಿ ಸಾಗುವವು. ಹಣಕಾಸಿನ ಮುಗ್ಗಟ್ಟು ನಿಮ್ಮ ಮನೋಧೈರ್ಯವನ್ನು ಕುಗ್ಗಿಸುವುದು. ಶಿವ ಪಂಚಾಕ್ಷ ರಿ ಮಂತ್ರ ಜಪಿಸಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.ಪ್ರತಿಯೊಬ್ಬರ ಮನೆಯ ದೋಸೆಯೂ ತೂತೇ. ಆದರೆ ನಿಮ್ಮ ಮನೆಯ ಕಾವಲಿಯೇ ತೂತಾಗಿರುವುದರಿಂದ ಅನ್ಯರ ವಿಚಾರಧಾರೆಗಳ ಕುರಿತು ಟೀಕೆ ಮಾಡಬೇಡಿ. ಮಾಡಿದರೆ ಅಪಹಾಸ್ಯಕ್ಕೆ ಗುರಿಯಾಗುವಿರಿ.9845743807 ಅದೃಷ್ಟ ಸಂಖ್ಯೆ:2
ಮೀನ
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಎಚ್ಚರವಿರಲಿ. ಶಾಲಾ ಕಾಲೇಜುಗಳಿಂದ ಬರಬೇಕಾಗಿದ್ದ ಗೌರವ ಧನ ಸದ್ಯದಲ್ಲಿಯೇ ನಿಮ್ಮ ಕೈ ಸೇರುವುದು. ವಿವಾಹಕ್ಕೆ ಇನ್ನೂ ಕೆಲಕಾಲ ಕಾಯಬೇಕಾಗುವುದು.ನೀವು ಆದರಿಸುವ ಜನರಿಂದಲೇ ವಿಶ್ವಾಸದ್ರೋಹ ಆಗುವ ಸಾಧ್ಯತೆ ಇದೆ. ಬೆಳ್ಳಗಿರುವುದೆಲ್ಲಾ ಹಾಲಲ್ಲ ಎಂಬುದನ್ನು ತಿಳಿಯಿರಿ. ಗುರು ಹಿರಿಯರ ಮಾರ್ಗದರ್ಶನದಂತೆ ಮುನ್ನಡೆಯಿರಿ. ಇದರಿಂದ ನಿಮ್ಮ ಕಾರ್ಯಗಳು ಕೈಗೂಡುವವು.9845743807 ಅದೃಷ್ಟ ಸಂಖ್ಯೆ:1
ಪಂಡಿತ್ ಮಂಜುನಾಥ್ ಶಾಸ್ತ್ರೀ
ದೈವಜ್ಞ ಜ್ಯೋತಿಷ್ಯರು 9845743807
ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು.ಮದುವೆ,ಸಂತಾನಕೊರತೆ ,ಶತ್ರುಕಾಟ,ಕುಜದೋಷಪರಿಣಾಮ,ಮಕ್ಕಳು ತೊಂದರೆ,ಸ್ತ್ರೀಪುರುಷ ಪ್ರೇಮವಿಚಾರ,ವಿದೇಶಿಯೋಗ,ಅನಾರೋಗ್ಯ,ಮನೆಕಟ್ಟುವಯೋಗ,ರಾಜಕೀಯದ ಭವಿಷ್ಯ,ಸ್ಥಾನಮಾನತೊಂದರೆ, ಕುಟುಂಬದಲ್ಲಿದ್ದಸಮಸ್ಯೆ,ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಬಲಿಷ್ಟ ಪೂಜಾ ಶಕ್ತಿಯಿಂದ ಸರ್ವ ಗುಪ್ತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ 9845743807 call/ whatsapp