Latest Updates
-
ಅಕ್ಷಯ ತೃತೀಯ ಮದುವೆ: ಬಾಲ್ಯ ವಿವಾಹ ತಡೆಯಲು ನೀವೇನು ಮಾಡಬೇಕು? -
ಬಾಲ್ಕನಿ ಗಿಡಗಳು ಒಣಗುತ್ತಿವೆಯೇ? ಈ ಟಿಪ್ಸ್ ಪಾಲಿಸಿ! -
ಬಿಸಿಲಿನ ಬೇಗೆಯಿಂದ ಪಾರಾಗಲು ಈ ಆಹಾರಗಳೇ ನಿಮ್ಮ ರಕ್ಷಕ -
ಅಕ್ಷಯ ತೃತೀಯ 2026: ಈ ಹೊಸ ಟ್ರೆಂಡ್ಸ್ ಮಿಸ್ ಮಾಡ್ಬೇಡಿ! -
ಲಿವರ್ ಆರೋಗ್ಯಕ್ಕೆ ಈ ಸರಳ ಅಭ್ಯಾಸಗಳು ನಿಮ್ಮನ್ನು ಕಾಪಾಡುತ್ತವೆ -
ಅಕ್ಷಯ ತೃತೀಯ: ಚಿನ್ನದ ಖರೀದಿ ಮತ್ತು ನಿಶ್ಚಿತಾರ್ಥಕ್ಕೆ ಹೀಗೆ ಪ್ಲಾನ್ ಮಾಡಿ -
ದೆಹಲಿ ಧೂಳು ತಡೆಯಲು ನಿಮ್ಮ ಮನೆಯನ್ನು ಹೀಗೆ ರಕ್ಷಿಸಿಕೊಳ್ಳಿ -
FSSAI ದಾಳಿ: ವಿಷಕಾರಿ ಹಣ್ಣುಗಳನ್ನು ಗುರುತಿಸುವುದು ಹೇಗೆ ಗೊತ್ತಾ? -
ಅಕ್ಷಯ ತೃತೀಯ ಸಂಭ್ರಮ: ಈ ಟ್ರೆಂಡಿ ಆಭರಣಗಳೇ ಈಗ ಹವಾ -
ಹೀಟ್ವೇವ್ ಎಚ್ಚರಿಕೆ: ಬಿಸಿಲಿನ ತಾಪದಿಂದ ಪಾರಾಗಲು ಈ ಟಿಪ್ಸ್ ಫಾಲೋ ಮಾಡಿ
ಮೈಸೂರು ಕೆಫೆ ಮಾಲೀಕರ ಕಾಲಿಗೆ ಬಿದ್ದ ಅಂಬಾನಿ ಜೋಡಿ!! ಯಾರು ಈ ಮಹಿಳೆ ಗೊತ್ತಾ?
ದೇಶದಲ್ಲೀಗ ಅಂಬಾನಿ ಕುಟುಂಬದ ವಿವಾಹ ಮಹೋತ್ಸವವೇ ಸದ್ದು ಮಾಡುತ್ತಿದೆ. ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಕಿರಿಯ ಪುತ್ರ ಅನಂತ್ ಅಂಬಾನಿ ಕಳೆದ ಶುಕ್ರವಾರದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಧಿಕಾ ಮರ್ಚೆಂಟ್ ಕೈ ಹಿಡಿದಿರುವ ಅವರು ಅದ್ದೂರಿ ಮದುವೆಯಲ್ಲಿ ಮಿಂಚಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಇಡೀ ಬಾಲಿವುಡ್ ಗಣ್ಯರು ಸೇರಿ ವಿಶ್ವದ ಪ್ರಮುಖ ಉದ್ಯಮಿಗಳು, ಕ್ರೀಡಾಪಟುಗಳು, ರಾಜಕಾರಣಿಗಳು ಸಹ ಭಾಗಿಯಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಸಹ ಈ ಮದುವೆ ಭೇಟಿ ನೀಡಿ ನವ ವಧು ವರರಿಗೆ ಆಶೀರ್ವಾದ ಮಾಡಿದ್ದಾರೆ.

ಅಲ್ಲದೆ ಅಂಬಾನಿ ಮಗನ ವಿವಾಹಕ್ಕೆ ಬಂದಿದ್ದ ಅತಿಥಿಗಳಿಗೆ ರಾಜರ ಸತ್ಕಾರವೇ ಸಿಕ್ಕಿದೆ. ದುಬಾರಿ ಉಡುಗೊರೆ ಸೇರಿ ಅಲ್ಲಿ ಭರ್ಜರಿ ಭೋಜನದ ವ್ಯವಸ್ಥೆಯೂ ಮಾಡಲಾಗಿತ್ತು. ಜೊತೆಗೆ ಅವರ ವಿವಾಹ ಮಹೋತ್ಸವದಲ್ಲಿ ಭಾಗಿಯಾಗಿದ್ದವರೆಲ್ಲರೂ ಒಂದಲ್ಲಾ ಒಂದು ರೀತಿಯಲ್ಲಿ ಹೆಸರು, ಖ್ಯಾತಿ ಗಳಿಸಿದ್ದವರೇ ಆಗಿದ್ದರು.
ಅದ್ರಲ್ಲೂ ಹಾಲಿವುಡ್ ನಟರು, ಸಿಂಗರ್ಗಳಿಗೆ ಕೋಟಿ ಕೋಟಿ ನೀಡಿ ಕರೆಸಲಾಗಿತ್ತು, ಇದೆಲ್ಲಕ್ಕಿಂತ ಅಚ್ಚರಿಯಾಗಿ ಕಂಡಿದ್ದು ಓರ್ವ ಮಹಿಳೆ. ಹೌದು ಮೈಸೂರು ಕೆಫೆ ಸಂಸ್ಥಾಪಕಿ ಸಹ ಈ ಮದುವೆಯಲ್ಲಿ ಭಾಗಿಯಾಗಿದ್ದರು. ಆದರೆ ಅಲ್ಲಿದ್ದವರಿಗೆ ಈ ಮಹಿಳೆ ಯಾರು ಎಂಬುದೇ ದೊಡ್ಡ ಪ್ರಶ್ನೆಯಾಗಿತ್ತು. ಒಬ್ಬ ಸಾಮಾನ್ಯ ಮಹಿಳೆಯಂತೆ ಯಾವುದೇ ಆಡಂಬರವಿಲ್ಲದೆ ಮದುವೆಯಲ್ಲಿ ಭಾಗಿಯಾಗಿದ್ದ ಅವರು ಎಲ್ಲರ ಗಮನ ತಮ್ಮತ್ತ ಸೆಳೆದಿದ್ದರು.
ಮೈಸೂರು ಕೆಫೆ ಮಾಲಿಕರಾದ ಶಾಂತೇರಿ ನಾಯಕ್ ಇಡೀ ಮದುವೆಯಲ್ಲಿ ಗಮನ ಸೆಳೆದ ಮಹಿಳೆಯಾಗಿದ್ದಾರೆ. ಸಾಮಾನ್ಯ ಮಹಿಳೆಯಂತೆ ಸೀರೆ ಉಟ್ಟು ಅಲಂಕಾರ, ಆಭರಣ ಇಲ್ಲದೆ ಕಾಣಿಸಿಕೊಂಡ ಅವರು ಕೇಂದ್ರ ಬಿಂದು ಆಗಿದ್ದರು.
ಇವರನ್ನು ಕಂಡೊಡನೆ ಅನಂತ್ ಅಂಬಾನಿ ತನ್ನ ಪತ್ನಿ ರಾಧಿಕಾ ಮರ್ಚೆಂಟ್ ಅವರನ್ನು ಕರೆದು ಪರಿಚಯ ಮಾಡಿಕೊಟ್ಟರು. ಅಲ್ಲದೆ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಸಹ ಪಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಜನರು ಸಹ ಅಚ್ಚರಿಯಿಂದ ಅಂಬಾನಿ ಕುಟುಂಬ ಅವರನ್ನು ಗುರುತಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮೈಸೂರು ಕೆಫೆಯ ಮಾಲೀಕರಾದ ನರೇಶ್ ನಾಯಕ್ ಅವರ ತಾಯಿ ಶಾಂತೇರಿ ನಾಯಕ್, ರಾಜ್ಯದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿದ್ದಾರೆ. ಶಾಂತೇರಿಯವರು ಕೆಫೆಯನ್ನು ನರೇಶ್ಗೆ ಹಸ್ತಾಂತರಿಸುವ ಮೊದಲು ಕೆಫೆ ಮಾಲಿಕತ್ವ ಹೊಂದಿದ್ದರಲ್ಲದೆ ಅದರ ನಿರ್ವಹಣೆ ಅವರೇ ಮಾಡುತ್ತಿದ್ದರು.
ಮೈಸೂರು ಕೆಫೆ ರಾಜ್ಯದಲ್ಲಿ ಮಾತ್ರವಲ್ಲ ಇತರೆ ರಾಜ್ಯದಲ್ಲೂ ಶಾಖೆಗಳ ಹೊಂದಿದೆ. ಹೀಗಾಗಿ ಅನಂತ್ ಅಂಬಾನಿ ಅವರಿಗೆ ಈ ಕೆಫೆಯ ತಿಂಡಿ ಬಹಳ ಅಚ್ಚುಮೆಚ್ಚಂತೆ. ಮದುವೆಯಲ್ಲಿ ಭೇಟಿಯಾದಾಗಲು ಸಹ ಪ್ರತಿ ಭಾನುವಾರ, ನಾವು ನಿಮ್ಮ ಆಹಾರವನ್ನು ನಮ್ಮ ಮನೆಯಲ್ಲಿ ತಿನ್ನುತ್ತೇವೆ ಎಂದು ಹೇಳುತ್ತಿದ್ದಾರೆ.
ಈ ವಿಡಿಯೋ ನೋಡಿದ ಮಂದಿ ಇಷ್ಟೊಂದು ಐಷಾರಾಮಿ ಬದುಕು, ಆಸ್ತಿ ಇದ್ದರೂ ಅಂಬಾನಿ ಕುಟುಂಬ ಸಂಸ್ಕಾರ ಮಾತ್ರ ಮರೆತಿಲ್ಲ ಹಿರಿಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಅರಿತಿದ್ದಾರೆ. ಹೀಗಾಗಿಯೇ ಅವರ ಸಂಪತ್ತು ಬೆಳೆಯುತ್ತಲೇ ಇದೆ ಎಂದು ಕಮೆಂಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಮೈಸೂರು ಮಸಾಲೆ ದೋಸೆ ಎಂದರೆ ಅಂಬಾನಿಗೆ ಬಲು ಇಷ್ಟ. ಅವರು ಹಲವು ಬಾರಿ ಈ ಬಗ್ಗೆ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಮೈಸೂರು ಕೆಫೆ ಓನರ್ನನ್ನು ಮದುವೆಗೆ ಆಹ್ವಾನಿಸಲು ಮರೆಯಲಿಲ್ಲ. ಅಲ್ಲದೆ ಶಾಂತೇರಿ ನಾಯಕ್ ಅವರಿಗೆ ವಿಶೇಷ ಗೌರವ ಸಹ ನೀಡಿದ್ದಾರೆ.



Click it and Unblock the Notifications











